ಕೊರೋನಾ ರೋಗಿಗಳ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಪ್ರಿ ಪ್ಲಾನ್ ಅಟ್ಯಾಕ್

Published : Apr 15, 2020, 04:11 PM ISTUpdated : Apr 15, 2020, 04:16 PM IST
ಕೊರೋನಾ ರೋಗಿಗಳ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಪ್ರಿ ಪ್ಲಾನ್ ಅಟ್ಯಾಕ್

ಸಾರಾಂಶ

ದೇಶದೆಲ್ಲೆಡೆ ಕೊರೋನಾ ವಿರುದ್ಧದ ಹೋರಾಟ/ ಇಂಥ ಕಿಡಿಗೇಡಿಗಳಿಗೆ ಬುದ್ಧಿ ಹೇಳುವವರು ಯಾರು/ ಕೊರೋನಾ ರೋಗಿಗಳನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮೇಲೆ ಕಲ್ಲು

ಉತ್ತರ ಪ್ರದೇಶ(ಏ. 15)  ಕೊರೋನಾ ವಿರುದ್ಧದ ಹೋರಾಟ ನಿರಂತರವಾಗಿದ್ದು ದೇಶದೆಲ್ಲೆಡೆ ಲಾಕ್ ಡೌನ್ ಜಾರಿಯಲ್ಲಿದೆ.  ಇದರ ನಡುವೆ ಉತ್ತರ ಪ್ರದೇಶದ ಮೋರಾದಾಬಾದ್ ನಿಂತ ಆತಂಕಕಾರಿ ಘಟನೆಯೊಂದು ವರದಿಯಾಗಿದೆ.

ರೋಗಿಗಳನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮೇಲೆ ಕಲ್ಲು ತೂರಲಾಗಿದೆ. ಆಂಬುಲೆನ್ಸ್ ನಲ್ಲಿ ಪೊಲೀಸರು ಮತ್ತು ವೈದ್ಯ ಸಿಬ್ಬಂದಿ ಇದ್ದರು.

ಪೊಲೀಸರ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು, ರಕ್ಷಣೆಗೆ ಹೋದವರಿಗೆ ಇಂಥ ಸ್ಥಿತಿ

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆಂಬುಲೆನ್ಸ್ ಚಾಲಕ ಇದೊಂದು ಪೂರ್ವನಿಯೋಜಿತವಾಗಿ ಪ್ಲಾನ್  ಮಾಡಿ ಮಾಡಿದ ಕೆಲಸ. ನಾವು ಕೊರೋನಾ ಸೋಂಕಿತರನನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡುತ್ತಿದ್ದೇವು ಆಗ ಇದ್ದಕ್ಕಿದ್ದಂತೆ ಜನರು ಒಂದೂಗೂಡಿದರು. ನಮ್ಮ ಮೇಲೆ ಕಲ್ಲು ತೂರಿದರು. ವೈದ್ಯರು ಸಹ ಈ ಪ್ರಕರಣದಲ್ಲಿ ಗಾಯಗೊಂಡರು ಎಂದು ಘಟನೆಯನ್ನು ವಿವರಿಸಿದ್ದಾರೆ. 

ಇಬ್ಬರು ವೈದ್ಯ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಏರಿಯಾವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!
ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!