
ನವದೆಹಲಿ(ಆ.13): ಜಂತರ್ ಮಂತರ್ನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಮೇಲೆ ಹರಿಹಾಯ್ದಿದ್ದಾರೆ. ರೈತರು, ಬಡವರು, ದಲಿತರು, ಕಾರ್ಮಿಕರ ದನಿ ಒಟ್ಟಾಗಿ ಅವರನ್ನು ಪ್ರಧಾನಿ ಪಟ್ಟದಿಂದ ಕೆಳಗೆ ತಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಗುರುವಾರ ನಡೆದ ದಲಿತ ದೌರ್ಜನ್ಯ ವಿರೋಧಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ‘ಭಾರತೀಯರಿಗೆ ಪರಿಸ್ಥಿತಿ ಸಂಪೂರ್ಣವಾಗಿ ಅರಿವಾಗಿದೆ. ಬಡವರು ಮತ್ತು ದಲಿತರ ಕೂಗು ದೇಶದಲ್ಲಿ ಎದ್ದಿದೆ. ಇದು ಪ್ರವಾಹದಂತೆ ಅಪ್ಪಳಿಸಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲಿದೆ’ ಎಂದರು.
‘ಭಾರತ ಬಾಬಾಸಾಹೇಬ್ ಮತ್ತು ಗಾಂಧಿಯಂತಹ ಮಹಾನ್ ವ್ಯಕ್ತಗಳನ್ನು ಕಂಡಿದೆ. ಗಾಂಧೀಜಿ ಹೇಳಿದಂತೆ ಯಾವುದಕ್ಕೂ ಹೆದರಬೇಡಿ ಎಂದು ಕಾಂಗ್ರೆಸ್ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತಿದೆ. ರೈತರ, ದಲಿತರ, ಹಿಂದುಳಿದವರ ಪರವಾಗಿ ಸದನದಲ್ಲೂ ಮಾತನಾಡಲು ನಮಗೆ ಬಿಟ್ಟಿಲ್ಲ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಸಭೆಯಲ್ಲಿ ಸಂಸದರ ಮೇಲೆ ಹಲ್ಲೆ ಮಾಡಲಾಗಿದೆ. ಕರೋನ ಸಮಯದಲ್ಲಿ ಜನರಿಗೆ ನೇರವಾಗಿ ಹಣ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ ಮೋದಿ ಸರ್ಕಾರ 4-5 ಉದ್ಯಮಿಗಳಿಗೆ ಹಣ ದೊರೆಯುವಂತೆ ಮಾಡಿದೆ’ ಎಂದು ಅವರು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ