ವಾಹನ ಸವಾರರಿಗೆ ಎಚ್ಚರಿಕೆ : ಈ ರೂಲ್ಸ್ ಬ್ರೇಕ್‌ಗೆ 5 ವರ್ಷ ಜೈಲು, 1 ಕೋಟಿ ದಂಡ!

Kannadaprabha News   | Asianet News
Published : Oct 30, 2020, 07:26 AM IST
ವಾಹನ ಸವಾರರಿಗೆ ಎಚ್ಚರಿಕೆ : ಈ ರೂಲ್ಸ್ ಬ್ರೇಕ್‌ಗೆ 5 ವರ್ಷ ಜೈಲು, 1 ಕೋಟಿ ದಂಡ!

ಸಾರಾಂಶ

ವಾಹನ ಸವಾರರೇ ಎಚ್ಚರ.... ಈ ರೂಲ್ಸ್ ಏನಾದ್ರೂ ನೀವು ಬ್ರೇಕ್ ಮಾಡಿದ್ರೆ ಬೀಳುತ್ತೆ ಭಾರೀ ದಂಡ

ನವದೆಹಲಿ (ಅ.30) : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಉಂಟುಮಾಡಿದರೆ 5 ವರ್ಷದವರೆಗೆ ಜೈಲುಶಿಕ್ಷೆ ಹಾಗೂ 1 ಕೋಟಿ ರು.ವರೆಗೆ ದಂಡ ವಿಧಿಸುವ ಕಠಿಣ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಈ ಕುರಿತು ಬುಧವಾರ ರಾತ್ರಿ ರಾಷ್ಟ್ರಪತಿಗಳ ಅಂಕಿತ ಪಡೆದು ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಸುಗ್ರೀವಾಜ್ಞೆಯ ಅನ್ವಯ ರಾಷ್ಟ್ರ ರಾಜಧಾನಿ ಪ್ರದೇಶ (ಎನ್‌ಸಿಆರ್‌) ಹಾಗೂ ಅಕ್ಕಪಕ್ಕದ ದೆಹಲಿ, ಹರ್ಯಾಣ, ಪಂಜಾಬ್‌, ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಅನ್ವಯಿಸುವಂತೆ ವಾಯು ಗುಣಮಟ್ಟನಿರ್ವಹಣೆ ಆಯೋಗ ಸ್ಥಾಪನೆ ಮಾಡಲಾಗುತ್ತದೆ. ಇದರಲ್ಲಿ 18 ಸದಸ್ಯರಿರುತ್ತಾರೆ. ಈ ಆಯೋಗವು ದೆಹಲಿ ಹಾಗೂ ಅಕ್ಕಪಕ್ಕದ ರಾಜ್ಯಗಳಲ್ಲಿ ಬೆಳೆಯ ಕೂಳೆ ಸುಡುವುದು, ವಾಹನದಿಂದ ಉಂಟಾಗುವ ಮಾಲಿನ್ಯ, ಧೂಳಿನ ಮಾಲಿನ್ಯ ಹೀಗೆ ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ವಾಯು ಗುಣಮಟ್ಟವನ್ನು ಹಾಳುಗೆಡವುವ ಎಲ್ಲಾ ಸಂಗತಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಹೊಂದಿದೆ. ಆಯೋಗವು ಪ್ರತಿ ವರ್ಷ ಸಂಸತ್ತಿಗೆ ತನ್ನ ವರದಿ ನೀಡಬೇಕು. ವಾಯುಮಾಲಿನ್ಯ ಉಂಟುಮಾಡುವ ಯಾವುದೇ ಪ್ರದೇಶ, ಘಟಕ ಅಥವಾ ಕಟ್ಟಡಗಳಲ್ಲಿ ಶೋಧ ನಡೆಸಿ ಅವುಗಳನ್ನು ಮುಚ್ಚಲು ಅಥವಾ ಅವುಗಳಿಗೆ ನೀರು ಹಾಗೂ ವಿದ್ಯುತ್‌ ಸರಬರಾಜು ನಿಲ್ಲಿಸುವ ಅಧಿಕಾರ ಆಯೋಗಕ್ಕೆ ಇರಲಿದೆ.

FIM ವಿಶ್ವ ಚಾಂಪಿಯನ್‌ಶಿಪ್ ಗ್ರ್ಯಾಂಡ್ ಪ್ರಿಕ್ಸ್‌ನಲ್ಲಿ ಹೋಂಡಾಗೆ 800ನೇ ಗೆಲುವು! ...

ವಾಯು ಗುಣಮಟ್ಟನಿರ್ವಹಣೆ ಆಯೋಗವು ದಾಖಲಿಸುವ ಪ್ರಕರಣಗಳನ್ನು ಸುಪ್ರೀಂಕೋರ್ಟ್‌ನ ಹಸಿರು ಪೀಠ ಮಾತ್ರ ವಿಚಾರಣೆ ನಡೆಸಬೇಕು. ಈ ಕುರಿತು ರಾಜ್ಯಗಳ ಜೊತೆ ಯಾವುದೇ ವಿವಾದ ಏರ್ಪಟ್ಟರೂ ಆಯೋಗದ ಆದೇಶವೇ ಅಂತಿಮವಾಗಿರುತ್ತದೆ. ಆಯೋಗ ಹೊರಡಿಸುವ ಆದೇಶವನ್ನು ಉಲ್ಲಂಘಿಸುವವರಿಗೆ 5 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಕೋಟಿ ರು.ವರೆಗೆ ದಂಡ ವಿಧಿಸಬಹುದು. ಈ ಆಯೋಗದ ರಚನೆಯೊಂದಿಗೆ ಹಿಂದೆ ಸುಪ್ರೀಂಕೋರ್ಟ್‌ನಿಂದ ನೇಮಕವಾಗಿದ್ದ ಇಪಿಸಿಎ ಸೇರಿದಂತೆ ದೆಹಲಿಯ ವಾಯುಮಾಲಿನ್ಯ ನಿಯಂತ್ರಣದ ಉದ್ದೇಶಕ್ಕಾಗಿ ಸ್ಥಾಪನೆಯಾದ ಎಲ್ಲಾ ಆಯೋಗ ಅಥವಾ ಏಜೆನ್ಸಿಗಳು ತಮ್ಮ ಕಾರ್ಯ ಸ್ಥಗಿತಗೊಳಿಸಲಿವೆ.

ಯಾಕೆ ಈ ಕ್ರಮ?

ಪ್ರತಿ ವರ್ಷ ಚಳಿಗಾಲ ಆರಂಭವಾಗುತ್ತಿದ್ದಂತೆ ದೆಹಲಿಯ ಸುತ್ತಲಿನ ರಾಜ್ಯಗಳ ರೈತರು ತಮ್ಮ ಹೊಲಗಳಲ್ಲಿ ಪೈರಿನ ನಂತರ ಒಣಗಿದ ಕೂಳೆಯನ್ನು ಸುಡುತ್ತಾರೆ. ಅದರಿಂದಾಗಿ ದೆಹಲಿಯ ಗಾಳಿ ಮಲಿನವಾಗಿ ಉಸಿರಾಡುವುದು ಕೂಡ ಕಷ್ಟವಾಗುತ್ತದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಈಗ ಸುಗ್ರೀವಾಜ್ಞೆ ಹೊರಡಿಸಿ ಆಯೋಗ ರಚಿಸಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!