ಕಾಲ್ತುಳಿತ ಬೆನ್ನಲ್ಲೇ ಪ್ರಯಾಗದಲ್ಲಿ ಇನ್ನಷ್ಟು ಕಠಿಣ ನಿಯಮಗಳ ಜಾರಿ: ವಿಐಪಿ ಪಾಸ್ ರದ್ದು

Published : Jan 31, 2025, 06:30 AM IST
ಕಾಲ್ತುಳಿತ ಬೆನ್ನಲ್ಲೇ ಪ್ರಯಾಗದಲ್ಲಿ ಇನ್ನಷ್ಟು ಕಠಿಣ ನಿಯಮಗಳ ಜಾರಿ: ವಿಐಪಿ ಪಾಸ್ ರದ್ದು

ಸಾರಾಂಶ

ಬುಧವಾರದ ಘಟನೆಗೆ ವಿಐಪಿ ಸಂಸ್ಕೃತಿ ಪಾಲಿಸಿದ್ದೇ ಕಾರಣ ಎಂಬ ವಿಪಕ್ಷಗಳ ಆರೋಪದ ಹಿನ್ನೆಲೆಯಲ್ಲಿ ಕುಂಭಮೇಳ ಪ್ರದೇಶ ವನ್ನು ಪ್ರವೇಶಿಸಲು ಅತಿಗಣ್ಯರಿಗೆ ನೀಡಲಾಗಿದ್ದ ಪಾಸ್‌ಗಳನ್ನು ರದ್ದು ಪಡಿಸಲಾಗಿದೆ. ಜೊತೆಗೆ ಯಾವುದೇ ಗಣ್ಯರ ಆಗಮನಕ್ಕೆ 7 ದಿನ ಮೊದಲೇ ಮಾಹಿತಿ ನೀಡುವುದನ್ನು ಕಡ್ಡಾಯ ಮಾಡಲಾಗಿದೆ. ಇದರ ಜೊತೆಗೆ ಕುಂಭಮೇಳ ನಡೆವ ಪ್ರದೇಶಕ್ಕೆ ಎಲ್ಲಾ ರೀತಿಯ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಪ್ರಯಾಗರಾಜ್‌(ಜ.31):  ಇಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯಂದು 30 ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ಘಟನೆಯ ಬೆನ್ನಲ್ಲೇ ಕುಂಭಮೇಳದ ಉಳಿದ ದಿನಗಳು ಮತ್ತು ಪವಿತ್ರ ಸ್ನಾನದ ದಿನಗಳಲ್ಲಿ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿ ಉತ್ತರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಬುಧವಾರದ ಘಟನೆಗೆ ವಿಐಪಿ ಸಂಸ್ಕೃತಿ ಪಾಲಿಸಿದ್ದೇ ಕಾರಣ ಎಂಬ ವಿಪಕ್ಷಗಳ ಆರೋಪದ ಹಿನ್ನೆಲೆಯಲ್ಲಿ ಕುಂಭಮೇಳ ಪ್ರದೇಶ ವನ್ನು ಪ್ರವೇಶಿಸಲು ಅತಿಗಣ್ಯರಿಗೆ ನೀಡಲಾಗಿದ್ದ ಪಾಸ್‌ಗಳನ್ನು ರದ್ದು ಪಡಿಸಲಾಗಿದೆ. ಜೊತೆಗೆ ಯಾವುದೇ ಗಣ್ಯರ ಆಗಮನಕ್ಕೆ 7 ದಿನ ಮೊದಲೇ ಮಾಹಿತಿ ನೀಡುವುದನ್ನು ಕಡ್ಡಾಯ ಮಾಡಲಾಗಿದೆ. ಇದರ ಜೊತೆಗೆ ಕುಂಭಮೇಳ ನಡೆವ ಪ್ರದೇಶಕ್ಕೆ ಎಲ್ಲಾ ರೀತಿಯ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ಪಾಪವೆಲ್ಲಾ ಹೋಯ್ತು ಎಂದ ಪೂನಂ ಪಾಂಡೆ

ಭಕ್ತರ ಓಡಾಟ ಸುಗಮ ಮಾಡಲು ಏಕಮುಖ ಸಂಚಾರದ ವ್ಯವಸ್ಥೆ ಮಾಡಲಾಗಿದೆ, ನೆರೆಯ ಜಿಲ್ಲೆಗಳಿಂದ ಬರುವ ಎಲ್ಲಾ ನಾಲ್ಕು ಚಕ್ರಗಳ ವಾಹನಗಳನ್ನು ಗಡಿಯಲ್ಲೇ ತಡೆಯುವ ಮೂಲಕ ಪ್ರಯಾಗ್‌ರಾಜ್‌ ನಗರದ ಮೇಲಿನ ಒತ್ತಡ ಕಡಿಮೆ ಮಾಡುವ ಪ್ರಯತ್ನವನ್ನು ಸರ್ಕಾರ ಮಾಡಿದೆ. ಜತೆಗೆ ಮೇಳದಿಂದ ಮರಳುವವರಿಗೆ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಜೊತೆಗೆ ಹಿಂದಿನ ಕುಂಭಮೇಳದ ವೇಳೆ ಸೇವೆ ಸಲ್ಲಿಸಿದ ಅನುಭವ ಹೊಂದಿರುವಐಎಎಸ್ ಅಧಿಕಾರಿಗಳಾದ ಆಶಿಶ್ ಗೋಯಲ್ ಹಾಗೂ ಭಾನು ಗೋಸ್ವಾಮಿ ಅವರನ್ನು ಮೇಲ್ವಿಚಾರಣೆಗೆ ನೇಮಿಸಲಾಗಿದೆ. ಜೊತೆಗೆ, ಕಾರ್ಯದರ್ಶಿ ಶ್ರೇಣಿಯ 5 ಅಧಿಕಾರಿಗಳನ್ನೂ ನೇಮಕ ಮಾಡಲಾಗಿದೆ.

ನಿನ್ನೆಯೂ ಭಾರೀ ಜನಸಂದಣಿ: 

ಬುಧವಾರದ ಕಾಲ್ತುಳಿತದ ಘಟನೆಯ ಹೊರತಾಗಿಯೂ ಕುಂಭಮೇಳಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಕಡಿಮೆ ಆಗಿಲ್ಲ. ಗುರುವಾರ ಕೂಡಾ 2 ಕೋಟಿಗೂ ಹೆಚ್ಚಿನ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇದರೊಂದಿಗೆ ಕಳೆದ 2 ವಾರದ ಅವಧಿಯಲ್ಲಿ ಪುಣ್ಯಸ್ನಾನ ಮಾಡಿದ ಭಕ್ತರ ಸಂಖ್ಯೆ 30 ಕೋಟಿ ತಲುಪಿದೆ. ಭಕ್ತರು ಮೈ ಕೊರೆವ ಚಳಿಯನ್ನೂ ಲೆಕ್ಕಿಸದೇ, ಹತ್ತಾರು ಕಿ.ಮೀ ನಡೆದೇ ಕುಂಭಮೇಳ ನಡೆವ ಸ್ಥಳಕ್ಕೆ ಆಗಮಿಸಿ ಪುಣ್ಯಸ್ನಾನದಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾಕುಂಭಮೇಳ: ಬಡವರಿಗೆ ಭಕ್ತಿಯಂತೆ, ಶ್ರೀಮಂತರಿಗೆ ಮುಕ್ತಿಯ ಚಿಂತೆ..!

ಮುಂದಿನ ಪವಿತ್ರ ಸ್ನಾನ: 

ಕುಂಭಮೇಳದ 1 ತಿಂಗಳ ಅವಧಿಯಲ್ಲಿ ಒಟ್ಟು 5 ದಿನಗಳನ್ನು ವಿಶೇಷವಾಗಿ ಪುಣ್ಯಸ್ನಾನಕ್ಕೆ ಅತ್ಯಂತಮಹತ್ವದ್ದು ಎಂದುಪರಿಗಣಿಸಲಾಗಿದೆ. ಈ ಪೈಕಿ ಈಗಾಗಲೇ 2 ಪುಣ್ಯಸ್ನಾನ ಮುಗಿದಿದ ಫೆ.3, ಫೆ.12 ಮತ್ತು ಫೆ.26ರಂದು ನಡೆಯಲಿರುವ ಬಸಂತ್ ಪಂಚಮಿ, ಮಾಘ ಪೂರ್ಣಿಮೆ ಮತ್ತ ಮಹಾಶಿವರಾತ್ರಿಯ ದಿನದಂದು ಉಳಿದ ಸ್ನಾನ ನಡೆಯಲಿದೆ. ಈ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಖರ್ಗೆ ಗಂಗಾಪೂಜೆ: ಹಳೇ ಫೋಟೋ ಈಗ ವೈರಲ್!

ಗಂಗಾಸ್ನಾನ ಕುರಿತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ- ಪ್ರತಿಪಕ್ಷಗಳು, ಇದೀಗ ಖರ್ಗೆ ಅವರು ಭೀಮಾನದಿಯಲ್ಲಿ ಗಂಗಾಪೂಜೆ ಮಾಡುತ್ತಿರುವ ಹಳೇ ಫೋಟೋ ವೈರಲ್ ಮಾಡಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!
ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ