ಸೇನಾಧಿಕಾರಿಗಳ ಕೃತಿ ಪ್ರಕಟಣೆಗೆ ಕಠಿಣ ನಿಯಮ : ಚಿಂತನೆ

Kannadaprabha News   | Kannada Prabha
Published : Feb 13, 2026, 05:22 AM IST
 MM Naravane

ಸಾರಾಂಶ

ನಿವೃತ್ತ ಸೇನಾ ಮುಖ್ಯಸ್ಥ ಜ. ಎಂ.ಎಂ. ನರವಣೆಯವರ ಆತ್ಮಕಥೆ ತೀವ್ರ ರಾಜಕೀಯ ಕೋಲಾಹಲ ಸೃಷ್ಟಿಸಿರುವ ನಡುವೆಯೇ, ಸೇನಾಧಿಕಾರಿಗಳ ಪುಸ್ತಕ ರಚನೆ ಮತ್ತು ಪ್ರಕಟಣೆ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಲು ರಕ್ಷಣಾ ಸಚಿವಾಲಯ ಚಿಂತನೆ ನಡೆಸಿದೆ.

ನವದೆಹಲಿ : ನಿವೃತ್ತ ಸೇನಾ ಮುಖ್ಯಸ್ಥ ಜ. ಎಂ.ಎಂ. ನರವಣೆಯವರ ಆತ್ಮಕಥೆ ತೀವ್ರ ರಾಜಕೀಯ ಕೋಲಾಹಲ ಸೃಷ್ಟಿಸಿರುವ ನಡುವೆಯೇ, ಸೇನಾಧಿಕಾರಿಗಳ ಪುಸ್ತಕ ರಚನೆ ಮತ್ತು ಪ್ರಕಟಣೆ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಲು ರಕ್ಷಣಾ ಸಚಿವಾಲಯ ಚಿಂತನೆ ನಡೆಸಿದೆ.

ಸಚಿವಾಲಯದಿಂದ ಅನುಮತಿ ಪಡೆಯುವುದು ಕಡ್ಡಾಯ

ಅದರಂತೆ, ಸೇನಾಧಿಕಾರಿಗಳು ಪುಸ್ತಕವನ್ನು ಬರೆಯುವ ಪೂರ್ವದಲ್ಲೇ ಸಚಿವಾಲಯದಿಂದ ಅನುಮತಿ ಪಡೆಯುವುದು ಕಡ್ಡಾಯವಾಗುವ ಸಾಧ್ಯತೆ ಇದೆ.

ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳಿರುವ ಸಾಧ್ಯತೆ

ಸೇನಾಧಿಕಾರಿಗಳ ಕೃತಿಯಲ್ಲಿ ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳಿರುವ ಸಾಧ್ಯತೆಯಿರುತ್ತದೆ. ಹಾಗಾಗಿ ಸದ್ಯದ ನಿಯಮದಂತೆ, ಪುಸ್ತಕ ರಚನೆಯಾದ ಬಳಿಕ ಲೇಖಕರು ಅದನ್ನು ರಕ್ಷಣಾ ಸಚಿವಾಲಯಕ್ಕೆ ಸಲ್ಲಿಸಬೇಕು. ಸಚಿವಾಲಯ ಅದರ ಕೂಲಂಕಷ ಪರಿಶೀಲನೆ ನಡೆಸಿ, ನಂತರ ಬಿಡುಗಡೆಗೆ ಅನುಮತಿ ನೀಡುತ್ತದೆ. ಆದರೆ ಇನ್ನು ಮುಂದೆ ಈ ನಿಯಮ ಬದಲಾಗುವ ಸಾಧ್ಯತೆಯಿದೆ. ಸೇನಾಧಿಕಾರಿಗಳು ಪುಸ್ತಕವನ್ನು ಬರೆಯುವುದಕ್ಕೆ ಮುನ್ನವೇ ಸಚಿವಾಲಯಕ್ಕೆ ಅದರ ಮಾಹಿತಿ ನೀಡಬೇಕು. ಸಚಿವಾಲಯ ಅನುಮತಿಸಿದರೆ ಮಾತ್ರವೇ ಬರೆಯಲು ಮತ್ತು ಪ್ರಕಟಿಸಲು ಅವಕಾಶ ಸಿಗಲಿದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

7 ದಶಕಗಳ ಬಳಿಕಹೊಸ ಕಟ್ಟಡಕ್ಕೆ ಪ್ರಧಾನಿ ಕಚೇರಿ - ಇಂದು ‘ಸೇವಾ ತೀರ್ಥ’ ಉದ್ಘಾಟನೆ
ರಾಗಾ ವಿರುದ್ಧ ಸಂಸತ್ತಲ್ಲಿ ಬಿಜೆಪಿಯ ಅನರ್ಹತೆ ಅಸ್ತ್ರ