ಪಂಜಾಬ್‌ನಲ್ಲಿ ದಾಖಲೆ ಪ್ರಮಾಣದಲ್ಲಿ ಪೈರಿನ ಕಳೆಗೆ ಬೆಂಕಿ; ಆತಂಕದಲ್ಲಿ ದೆಹಲಿ!

Published : Oct 13, 2020, 03:33 PM ISTUpdated : Oct 13, 2020, 03:40 PM IST
ಪಂಜಾಬ್‌ನಲ್ಲಿ ದಾಖಲೆ ಪ್ರಮಾಣದಲ್ಲಿ ಪೈರಿನ ಕಳೆಗೆ ಬೆಂಕಿ; ಆತಂಕದಲ್ಲಿ ದೆಹಲಿ!

ಸಾರಾಂಶ

ಸಾಂಪ್ರದಾಯಿಕ ಕೃಷಿ ಮಾಡತ್ತಿರುವ ರೈತರು, ತಮ್ಮ ಪೈರು ಕಟಾವಿನ ಬಳಿಕ ಉಳಿದ ಕಳೆಗಳಿಗೆ ಬೆಂಕಿ ಹಚ್ಚುತ್ತಾರೆ. ಪಂಜಾಬ್, ಹರ್ಯಾಣ, ರಾಜಸ್ಥಾನ ಭಾಗದಲ್ಲಿ ಸಾವಿರಾರು ಏಕರೆ ಪ್ರದೇಶಕ್ಕೆ ಈ ರೀತಿ ರೈತರು ಬೆಂಕಿ ಹಂಚಿ ಮುಂದಿನ ಬೆಳೆಗೆ ಹೊಲ ಸಜ್ಜುಗೊಳಿಸುತ್ತಾರೆ. ಆದರೆ ಈ ರೀತಿ ಬೆಂಕಿ ಹಚ್ಚುವುದರಿಂದ ದೆಹಲಿಯ ಮಾಲಿನ್ಯ ಹೆಚ್ಚಾಗುತ್ತಿದೆ. ಇದೀಗ ಬಹಿರಂಗವಾಗಿರುವ ಅಂಕಿ ಅಂಶ, ದೆಹಲಿ ಸರ್ಕಾರ ಹಾಗೂ ಜನತೆಯನ್ನು ಮತ್ತಷ್ಟು ಆತಂಕದಲ್ಲಿ ದೂಡಿದೆ.

ನವದೆಹಲಿ(ಅ.13): ಪಂಜಾಬ್‌ನ ರೈತರು ತಮ್ಮ ಬೆಳೆ ಕಟಾವು ಮಾಡಿದ ಬಳಿಕ ಕಳೆ ಹಾಗೂ ಪೈರಿನ ಹುಲ್ಲು ಕಡ್ಡಿಗೆ ಬೆಂಕಿ ಹಚ್ಚಲಾಗುತ್ತದೆ. ಹರಿಯಾಣ, ಲುಧಿಯಾನ ಸೇರಿದಂತೆ ಪಂಜಾಬ್‌ನ ಬಹುತೇಕ ಭಾಗದಲ್ಲಿ ರೈತರು ಪ್ರತಿ ವರ್ಷ ಕಳೆಗಳಿಗೆ ಬೆಂಕಿ ಹಚ್ಚುತ್ತಾರೆ. ದೆಹಲಿಯಲ್ಲಿ ವಾಯು ಮಾಲಿನ್ಯದಲ್ಲಿ ಇದರ ಹೊಗೆ ಪ್ರಮುಖ ಕೊಡುಯಾಗಿದೆ ಎಂದು ಅಧ್ಯಯನ ವರದಿ ಹೇಳಿದೆ. ಇದೀಗ ಕಳೆದೆರಡು ವರ್ಷದಲ್ಲಿ 500 ರಿಂದ 700 ಕಳೆಗೆ ಬೆಂಕಿ ಹಚ್ಚಿದ ಪ್ರಕರಣಗಳು ವರದಿಯಾಗಿತ್ತು. ಆದರೆ ಪ್ರಸಕ್ತ ವರ್ಷ ಇದು 2,000 ದಾಟಿದೆ. 

ರಾಜ್ಯ ಸರ್ಕಾರದಿಂದ ಅನ್ನದಾತರಿಗೆ ಮತ್ತೊಂದು ಆಘಾತ

ಕಳೆಗೆ ಬೆಂಕಿ ಹಚ್ಚುವ ವಿಧಾನಕ್ಕೆ ಬ್ರೇಕ್ ಹಾಕಲಾಗಿದೆ. ಕಳೆದ ವರ್ಷ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈ ಕುರಿತು ದೆಹಲಿ ಸುತ್ತ ಮುತ್ತಲಿನ ರಾಜ್ಯದ ರೈತರು ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದ್ದರು. ಈ ಬೆಳವಣಿಗೆ ಬಳಿಕ ಇದೀಗ ಪಂಜಾಬ್ ACM ಡಿವಿಶನ್ ಮುಖ್ಯಸ್ಥ ಅನಿಲ್ ಸೂದ್ ಆತಂಕಕಾರಿ ಅಂಕಿ ಅಂಶ ತೆರೆದಿಟ್ಟಿದ್ದಾರೆ.

ಶುಂಠಿ ಕೊಳೆ ರೋಗಕ್ಕೆ ಇಲ್ಲಿದೆ ಶಾಶ್ವಾತ ಪರಿಹಾರ

2019ರ ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 12ರ ವರೆಗಿನ ಸುಮಾರು ಒಂದು ತಿಂಗಳ ಅವಧಿಯಲ್ಲಿ ಪಂಜಾಬ್‌ನಲ್ಲಿ 755 ಕಳೆಗೆ ಬೆಂಕಿ ಹಚ್ಚಿದ ಪ್ರಕರಣ ವರದಿಯಾಗಿತ್ತು. ಇನ್ನು 2018ರಲ್ಲಿ ಇದೇ ಅವದಿಯಲ್ಲಿ ಈ ಸಂಖ್ಯೆ 510 ಆಗಿತ್ತು. ಆದರೆ 2020ರಲ್ಲಿ ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 12ರ ವರೆಗಿನ ಅವಧಿಯಲ್ಲಿ 2,873 ಪ್ರಕರಣ ವರದಿಯಾಗಿದೆ ಎಂದು ಅನಿಲ್ ಸೂದ್ ಹೇಳಿದ್ದಾರೆ.

 

ದೆಹಲಿಯಲ್ಲಿನ ಮಾಲಿನ್ಯ ತಗ್ಗಿಸಲು ಕೇಂದ್ರ ಸರ್ಕಾರ 1,700 ಕೋಟಿ ರೂಪಾಯಿ ಅನುದಾನ ನೀಡಿದೆ. ಅಕ್ಟೋಬರ್ 1 ರಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವೇಡ್ಕರ್ ಜೊತೆ ಮಾತುಕತೆ ನಡೆಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ದೆಹಲಿ ಸುತ್ತಮುತ್ತಲಿನ ರಾಜ್ಯಗಳಲ್ಲಿ ಕಳೆಗೆ ಬೆಂಕಿ ಹಚ್ಚುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಇದನ್ನು ನಿಲ್ಲಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!