
ನವದೆಹಲಿ[ಜ.28]: ಕೇಂದ್ರ ಗೃಹ ಸಚಿವ ಅಮಿತ್ ಶಾ ಎದುರೇ ಗುಂಪೊಂದು 21 ವರ್ಷದ ವಿದ್ಯಾರ್ಥಿಗೆ ಥಳಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿ ಚುನಾವಣೆ ಹಿನ್ನೆಲೆ ಆಯೋಜಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ ಈ ವಿದ್ಯಾರ್ಥಿ ಪೌರತ್ವ ವಿರೋಧಿ ಘೋಷಣೆ ಕೂಗಿದ್ದು, ಆಕ್ರೋಶಗೊಂಡ ಕಾರ್ಯಕರ್ತರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.
ದೆಹಲಿಯ ಬಬಲ್ಪುರ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಸಮಾವೇಶದಲ್ಲಿ ಅತ್ತ ಗೃಹ ಸಚಿವ ಅಮಿತ್ ಶಾ ಪೌರತ್ವ ಕಾಯ್ದೆ ಪರ ಮಾತನಾಡುತ್ತಿದ್ದರೆ, ಇತ್ತ ವಿದ್ಯಾರ್ಥಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಘೋಷಣೆ ಕೂಗಲಾರಂಭಿಸಿದ್ದಾನೆ. ಕೂಡಲೇ ಕಾರ್ಯಕರ್ತರ ಗುಂಪೊಂದು ಆತನನ್ನು ಥಳಿಸಲಾರಂಭಿಸಿದ್ದಾರೆ. ಹೀಗಿರುವಾಗ ವೇದಿಕೆ ಮೇಲಿದ್ದ ಅಮಿತ್ ಶಾ 'ಅವನನ್ನು ಬಿಡಿ' ಎಂದು ಹೇಳಿದ್ದಾರೆ. ಅಲ್ಲದೇ ಪೊಲೀಸರನ್ನುದ್ದೇಶಿಸಿ, 'ಬೇಗನೇ ಅವನನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿ' ಎಂದು ಸೂಚಿಸಿದ್ದಾರೆ.
ಕಪಿಲ್ ಮಿಶ್ರಾಗೆ 48 ಗಂಟೆ ಪ್ರಚಾರ ನಡೆಸದಂತೆ ಆಯೋಗದ ನಿರ್ಬಂಧ!
ಗೃಹ ಸಚಿವರ ಸೂಚನೆಯಂತೆ ಕಾರ್ಯ ಪ್ರವೃತ್ತರಾದ ಪೊಲೀಸರು ಕೂಡಲೇ ಆ ವಿದ್ಯಾರ್ಥಿಯನ್ನು ಅಲ್ಲಿಂದ ಕರೆದೊಯ್ದಿದ್ದಾರೆ. ಹೀಗಿರುವಾಗ ಅಮಿತ್ ಶಾ ಸಮಾವೇಶಕ್ಕೆ ಹಾಜರಾಗಿದ್ದ ಜನರ ಗಮನ ಸೆಳೆಯಲು 'ಭಾರತ್ ಮಾತಾ ಕೀ ಜೈ' ಎಂಬ ಘೋಷಣೆ ಕೂಗಿ, ಮತ್ತೆ ಭಾಷಣ ಮುಂದುವರೆಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ 'ಅಲ್ಲಿ ಬಹಳಷ್ಟು ಜನ ಸೇರಿದ್ದರು. ಏನಾಗುತ್ತಿದೆ ಎಂದು ತಿಳಿಯುವ ಮೊದಲೇ, ಅಮಿತ್ ಶಾರವರು ಹುಡುಗನನ್ನು ರಕ್ಷಿಸಿ ಎಂದು ಪೊಲೀಸರಿಗೆ ಸೂಚಿಸುತ್ತಿರುವುದು ಕೇಳಿಸಿಕೊಂಡೆ' ಎಂದಿದ್ದಾರೆ.
ಘಟನೆ ಕುರಿರತು ವಿವರಿಸಿದ ಪೊಲೀಸ್ ಅಧಿಕಾರಿ 'ಸಮಾವೇಶದಲ್ಲಿ ವಿದ್ಯಾರ್ಥಿಯೊಬ್ಬ ಪೌರತ್ವ ವಿರೋಧಿ ಘೋಷಣೆ ಕೂಗಲಾರಂಭಿಸಿದ. ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ಪೊಲೀಸರಿಗೊಪ್ಪಿಸಿದರು. ಆತನನ್ನು ಠಾಣೆಗೆ ಕರೆತಂದು ಪರಿಶೀಲನೆ ನಡೆಸಿದಾಗ ಯಾವುದೇ ಗುರುತು ಪತ್ರ ಸಿಗಲಿಲ್ಲ. ಇನ್ನು ಆತನಿಗೆ ಯಾವುದೇ ದೊಡ್ಡ ಮಟ್ಟದ ಗಾಯಗಳಾಗಿಲ್ಲ' ಎಂದಿದ್ದಾರೆ
ಕೇಜ್ರಿವಾಲ್ ವಿರುದ್ಧ ಸಲ್ಲಿಸಿದ ಸ್ವಾಮೀಜಿ ನಾಮಪತ್ರ ತಿರಸ್ಕೃತ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ