
ಡೆಹ್ರಾಡೂನ್: ಶಿಕ್ಷಕರೊಬ್ಬರು ಎಲ್ಲರೆದುರು ಕಪಾಳಮೋಕ್ಷ ಮಾಡಿದ್ದಕ್ಕೆ ಸಿಟ್ಟಿಗೆದ್ದು ವಿದ್ಯಾರ್ಥಿ ಲಂಚ್ಬಾಕ್ಸ್ನಲ್ಲಿ ಗನ್ ತಂದು ಅಧ್ಯಾಪಕರ ಮೇಲೆ ಗುಂಡು ಹಾರಿಸಿದ ಆಘಾತಕಾರಿ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಇಲ್ಲಿನ ಉಧಮ್ ಸಿಂಗ್ ಜಿಲ್ಲೆಯ ಗುರು ನಾನಕ್ ಶಾಲೆಯ ಭೌತಶಾಸ್ತ್ರ ಶಿಕ್ಷಕ ಗಂಗನದೀಪ್ ಸಿಂಗ್ ಕೊಹ್ಲಿ ಕೆಲ ದಿನಗಳ ಹಿಂದೆ ಸಮರತ್ ಬಾಜ್ವಾ ಎಂಬಾತ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಆತ ಬುಧವಾರ ತನ್ನ ಟಿಫಿನ್ ಬಾಕ್ಸ್ನಲ್ಲಿ ಬಂದೂಕನ್ನು ಪ್ಯಾಕ್ ಮಾಡಿ ತಂದು ತನಗೆ ಹೊಡೆದ ಶಿಕ್ಷಕನಿಗೆ ಹಿಂಬದಿಯಿಂದ ಗುಂಡು ಹಾರಿಸಿದ್ದಾನೆ.
ಪರಿಣಾಮ ಶಿಕ್ಷಕ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ದೇಹದೊಳಗೆ ಹೊಕ್ಕಿದ್ದ ಗುಂಡು ಹೊರ ತೆಗೆಯಲಾಗಿದ್ದು, ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಶೂಟೌಟ್ ನಡೆಸಿದ ಬಾಲಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.
18 ವರ್ಷದ ವಿದ್ಯಾರ್ಥಿಯೋರ್ವ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿರೋ ಘಟನೆ
ಭೋಪಾಲ್: 18 ವರ್ಷದ ವಿದ್ಯಾರ್ಥಿಯೋರ್ವ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿರೋ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಮಧ್ಯಪ್ರದೇಶದ ನರಸಿಂಗಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿ ಸ್ಮೃತಿ ದೀಕ್ಷಿತ್ ಸುಟ್ಟ ಗಾಯಗಳಿಂದ ಗಾಯಗೊಂಡಿದ್ದ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆರೋಪಿ 18 ವರ್ಷದ ಸೂರ್ಯಾಂಶ್ ಕೊಚಾರ್ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಟೀಚರ್ ಸ್ಮೃತಿ ಅವರು ಆಡಳಿತ ಮಂಡಳಿ ಮುಂದೆ ಸೂರ್ಯಾಂಶ್ ನಡವಳಿಕೆ ವಿರುದ್ಧ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಸೂರ್ಯಾಂಶ್ ಕೊಚಾರ್ ಬೆಂಕಿ ಸುರಿದು ಶಿಕ್ಷಕಿಯನ್ನು ಕೊಲ್ಲಲು ಮುಂದಾಗಿದ್ದಾನೆ.
ಮನೆಗೆ ಹೋಗಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ
ಸೋಮವಾರ ಮಧ್ಯಾಹ್ನ ಸುಮಾರು 3.30ರ ವೇಳೆಗೆ ಟೀಚರ್ ಸ್ಮೃತಿ ಮನೆಗೆ ಸೂರ್ಯಾಂಶ್ ಪೆಟ್ರೋಲ್ ತುಂಬಿದ ಕ್ಯಾನ್ ಹಿಡಿದುಕೊಂಡು ಬಂದಿದ್ದಾನೆ. ನೋಡ ನೋಡುತ್ತಿದ್ದಂತೆ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹೆಚ್ಚಿ ಪರಾರಿಯಾಗಿದ್ದಾನೆ. ಸ್ಥಳೀಯರು ಶಿಕ್ಷಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಶಿಕ್ಷಕಿ ದೇಹ ಶೇ.10 ರಿಂದ 15 ದೇಹದ ಭಾಗ ಸುಟ್ಟಿದೆ ಎಂದು ವರದಿಯಾಗಿದೆ. ಶಿಕ್ಷಕಿ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ