
ನವದೆಹಲಿ(ಜೂ.13): ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದ ಬೆನ್ನಲ್ಲೇ, ಅನಿರೀಕ್ಷಿತವಾಗಿ ವಾಸನೆ ಹಾಗೂ ರುಚಿ ಗ್ರಹಿಕೆ ಸಾಮರ್ಥ್ಯ ಕಳೆದುಕೊಳ್ಳುವುದನ್ನು ಸಹ ಕೋವಿಡ್-19 ಪರೀಕ್ಷೆಯ ಮಾನದಂಡವಾಗಿ ಪರಿಗಣಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಇತ್ತೀಚೆಗಷ್ಟೇ ಕೊರೋನಾ ಕುರಿತಾದ ರಾಷ್ಟ್ರೀಯ ಕಾರ್ಯಪಡೆಯ ಸಭೆಯಲ್ಲಿ ಕೆಲವು ಸದಸ್ಯರು ಅನಿರೀಕ್ಷಿತ ವಾಸನೆ ಮತ್ತು ರುಚಿ ಗ್ರಹಿಕೆಯ ಸಾಮರ್ಥ್ಯ ಕಳೆದುಕೊಳ್ಳುವುದನ್ನು ಕೊರೋನಾ ಪರೀಕ್ಷೆಗೆ ಮಾನದಂಡವಾಗಿ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪ್ರತಿಪಾದಿಸಿದರು. ಆದರೆ, ಈ ಸಂಬಂಧ ಅಂತಿಮ ನಿರ್ಣಯ ಕೈಗೊಳ್ಳಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ದೇಶದಲ್ಲಿ ಹೆಚ್ಚುತ್ತಿದೆ ಕೊರೋನಾ ಹಾವಳಿ
ದೇಶಾದ್ಯಂತ ಭಾರೀ ಪ್ರಮಾಣದಲ್ಲಿ ಕೊರೋನಾಕ್ಕೆ ಬಲಿಯಾಗುವ ಪ್ರಮಾಣ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 258 ಜನ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಇವರೆಗೆ ಬಲಿಯಾದವರ ಸಂಖ್ಯೆ 8743ಕ್ಕೆ ತಲುಪಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 127 ಜನರು ಸಾವನ್ನಪ್ಪಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ