
ನವದೆಹಲಿ(ಜು.11): ತಳಹಂತದಲ್ಲಿ, ತೆರೆ ಮರೆಯಲ್ಲಿ ಅತ್ಯಂತ ಶ್ರಮದಿಂದ ಕೆಲಸ ಮಾಡುತ್ತಿರೋ ಅದ್ಭುತ ಪ್ರತಿಭೆಗಳ ಹೆಸರನ್ನು ಪದ್ಮ ಪ್ರಶಸ್ತಿಗೆ ಸೂಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ ಪ್ರಧಾನಿ, ಭಾರತದಲ್ಲಿ ಬಹಳಷ್ಟು ಪ್ರತಿಭಾವಂತರಿದ್ದಾರೆ. ತಳಮಟ್ಟದಲ್ಲಿ ಅತ್ಯಂತ ಅಪರೂಪದ ಕೆಲಸ ಮಾಡುತ್ತಾರೆ. ಅಂತವರು ಬಹಳಷ್ಟು ಸಲ ನಮ್ಮ ಗಮನಕ್ಕೆ ಬರದೇ ಇರಬಹುದು. ಅಂತಹ ಮಾದರಿ ಜನರು ನಿಮಗೆ ಗೊತ್ತಿದ್ದಾರಾ ? ಅವರನ್ನು ನೀವು ಪದ್ಮ ಪ್ರಶಸ್ತಿಗೆ ನಾಮಿನೇಟ್ ಮಾಡಬಹುದು. ನಾಮಿನೇಷನ್ ಈಗ ಓಪನ್ ಇದ್ದು ಹೆಸರುಗಳನ್ನು ಸೂಚಿಸಲು ಸೆ.15ರ ತನಕ ಅವಕಾಶ ಇದೆ ಎಂದಿದ್ದಾರೆ.
ಜನಸಂಖ್ಯೆ ಹೆಚ್ಚಳದಿಂದ ಅನೇಕ ಸಮಸ್ಯೆ: ನಿಯಂತ್ರಣ ಅಗತ್ಯ
ಪದ್ಮ ಪ್ರಶಸ್ತಿ ಭಾರತದಲ್ಲಿ ನೀಡಲಾಗುವ ಅತ್ಯಂತ ದೊಡ್ಡ ನಾಗರಿಕ ಪ್ರಶಸ್ತಿಯಾಗಿದ್ದು ಇದನ್ನು ಪ್ರಜಾಪ್ರಭುತ್ವದ ದಿನ ಘೋಷಿಸಲಾಗುತ್ತದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ.
ಪದ್ಮ ವಿಭೂಷಣ(ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮ ಭೂಷಣ(ಉನ್ನತ ಶ್ರೇಣಿಯ ವಿಶಿಷ್ಟ ಸೇವೆ), ಪದ್ಮಶ್ರೀ(ವಿಶಿಷ್ಟ ಸೇವೆ
). ಈ ಪ್ರಶಸ್ತಿ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿನ ಸಾಧನೆಗಳನ್ನು ಗುರುತಿಸಿ ಗೌರವಿಸಲಾಗುತ್ತದೆ. #PeoplesPadma ಪ್ರಶಸ್ತಿಗೆ ಹೆಸರು ಸೂಚಿಸಲು ಇಲ್ಲಿ ಕ್ಲಿಕ್ಕಿಸಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ