ನವದೆಹಲಿ(ಫೆ.06): ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ನೆಪದಲ್ಲಿ ಶಾಹೀನ್ ಬಾಗ್ ಆತ್ಮಾಹುತಿ ದಾಳಿಕೋರರನ್ನು ಹುಟ್ಟುಹಾಕುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.
ಪ್ರತಿಭಟನೆಯನ್ನು ಶಾಹೀನ್ ಬಾಗ್ ಚಳವಳಿ ಎಂದು ಕರೆಯಬಾರದು, ಅಲ್ಲಿ ಆತ್ಮಾಹುತಿ ದಾಳಿಕೋರರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಗಿರಿರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಶಾಹೀನ್ ಬಾಗ್’ನಲ್ಲಿ ದೇಶದ ವಿರುದ್ಧ ದೊಡ್ಡ ಸಂಚನ್ನು ರೂಪಿಸಲಾಗುತ್ತಿದೆ. ಪ್ರತಿಭಟನೆ ನೆಪದಲ್ಲಿ ಆತ್ಮಾಹುತಿ ದಾಳಿಕೋರರನ್ನು ಸೃಷ್ಟಿಸಲಾಗುತ್ತಿದೆ ಎಂದು ಗಿರಿರಾಜ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.
ಶಹೀನ್ ಬಾಗ್ ಪ್ರತಿಭಟನೆ ವೇಳೆ 4 ತಿಂಗಳ ಮಗು ಸಾವು!
ಸಿಎಎ ವಿರುದ್ಧದ ಪ್ರತಿಭಟನೆಗಳನ್ನು ಖಿಲಾಫತ್ ಆಂದೋಲನಕ್ಕೆ ಹೋಲಿಸಿರುವ ಗಿರಿರಾಜ್, ಎಳೆಯ ಮಕ್ಕಳ ಮನಸ್ಸಿನಲ್ಲಿ ದೇಶದ ಕುರಿತು ವಿಷ ತುಂಬುವ ಹುನ್ನಾರ ನಡೆದಿದೆ ಎಂದು ಹರಿಹಾಯ್ದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ