ಅಯೋಧ್ಯೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲ್ಲ: ಸುನ್ನಿ ವಕ್ಫ್ ಬೋರ್ಡ್ ಸ್ಪಷ್ಟನೆ!

By Web DeskFirst Published Nov 9, 2019, 4:43 PM IST
Highlights

ಅಯೋಧ್ಯೆ ಭೂವಿವಾದ ಕುರಿತಾದ ಸುಪ್ರೀಂಕೋರ್ಟ್ ತೀರ್ಪು/ ವಿವಾದಿತ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಆದೇಶ ನೀಡಿದ ಸುಪ್ರೀಂಕೋರ್ಟ್/ ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ 5 ಎಕರೆ ಜಾಗಕ್ಕೆ ಸುಪ್ರೀಂ ಆದೇಶ/ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ತೀರ್ಮಾನ/ ಸುಪ್ರೀಂಕೋರ್ಟ್ ತೀರ್ಮಾನ ತೃಪ್ತಿ ತಂದಿದೆ ಎಂದ ಸುನ್ನಿ ವಕ್ಫ್ ಬೋರ್ಡ್/ ಮೇಲ್ಮನವಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ಸರ್ವಾನುಮತದ ನಿರ್ಣಯ/ 

ನವದೆಹಲಿ(ನ.09): ಮಹತ್ವದ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ಭೂವಿವಾದದ ಕುರಿತಾದ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸುವದಿಲ್ಲ ಎಂದು ಉತ್ತರಪ್ರದೇಶ ಸುನ್ನಿ ವಕ್ಫ್ ಬೋರ್ಡ್ ಸ್ಪಷ್ಟಪಡಿಸಿದೆ.

ರಾಮನಿಗೆ ದೊರೆತ ಅಯೋಧ್ಯೆ: ಶತಮಾನಗಳ ನಂಬಿಕೆಗೆ ಸುಪ್ರೀಂ ತೀರ್ಪಿನ ನೈವೇದ್ಯೆ!

ಸುಪ್ರೀಂ ತೀರ್ಪು ನಮಗೆ  ಒಪ್ಪಿತವಾಗಿದ್ದು, ಈ ಕುರಿತು ಮೇಲ್ಮನವಿ ಸಲ್ಲಿಸದಿರುವ ನಿರ್ಣಯವನ್ನು ಬೋರ್ಡ್ ಸರ್ವಾನುಮತದಿಂದ ಸ್ವೀಕರಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಬಾಬರ್ ಅಯೋಧ್ಯೆ(5 ಎಕರೆ)ಯಲ್ಲೇ ಇರಲಿದ್ದಾನೆ: ಸಹೋದರರ ನಂಬಿಕೆ ಮುಖ್ಯ ಎಂದ ಸುಪ್ರೀಂ!

ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಅದರಂತೆ ಎಲ್ಲೆರಿಗೂ ಒಪ್ಪಿತವಾಗಿರುವ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಬೋರ್ಡ್ ಸ್ಪಷ್ಟಪಡಿಸಿದೆ.

Zafar Farooqui, Chairman of Uttar Pradesh Sunni Central Waqf Board: We welcome and humbly accept the verdict of the Supreme Court. I want to make it clear that UP Sunni Waqf Board will not go for any review of the SC order or file any curative petition. pic.twitter.com/k5iUcuX08n

— ANI UP (@ANINewsUP)

ತೀರ್ಪು ಪ್ರಕಟವಾದ ಬಳಿಕ ತೀರ್ಪು ತೃಪ್ತಿ ತಂದಿಲ್ಲ ಎಂದು ಹೇಳಿದ್ದ ಬೋರ್ಡ್ ಪರ ವಕೀಲ ಜಫರಯಾಬ್ ಜಿಲಾನಿ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ಬೋರ್ಡ್ ಮೀಟಿಂಗ್‌ನಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದರು.

click me!