
ಶ್ರೀನಗರ: ಉಗ್ರರಿಗೆ ಹಣ ಪೂರೈಕೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಗರ ರಾಜ್ಬಾಗ್ ಪ್ರದೇಶದಲ್ಲಿರುವ ಪ್ರತ್ಯೇಕವಾದಿ ಸಂಘಟನೆ ಹುರಿಯತ್ ಕಾನ್ಫರೆನ್ಸ್ನ ಕಚೇರಿಯನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದುಕೊಂಡಿದೆ. ಶ್ರೀನಗರಕ್ಕೆ ಆಗಮಿಸಿದ ಅಧಿಕಾರಿಗಳು ಕಚೇರಿಯ ಹೊರಭಾಗದಲ್ಲಿ ಕಟ್ಟಡವನ್ನು ಜಪ್ತಿ ಮಾಡಿರುವ ಕುರಿತಾಗಿ ನೋಟಿಸ್ ಅನ್ನು ಅಂಟಿಸಿದ್ದು, ಎನ್ಐಎ ವಿಶೇಷ ನ್ಯಾಯಾಲಯ ಜ.27ರಂದು ನೀಡಿದ ತೀರ್ಪಿನ ಅನ್ವಯ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 1993ರಲ್ಲಿ ರಚನೆಯಾದ ಹುರಿಯತ್ ಕಾನ್ಫರೆನ್ಸ್ 26 ಪ್ರತ್ಯೇಕವಾದಿ ಬಣಗಳ ಒಕ್ಕೂಟವಾಗಿದೆ, 2019ರಲ್ಲಿ ಈ ಸಂಘಟನೆಯ ವಿರುದ್ಧ ಸರ್ಕಾರ ಕೈಗೊಂಡ ಕ್ರಮದಿಂದಾಗಿ ಈ ಕಚೇರಿಯನ್ನು ಮುಚ್ಚಲಾಗಿತ್ತು.
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್: 6 ಕಡೆ ಎನ್ಐಎ ದಾಳಿ, ಇಬ್ಬರ ಬಂಧನ
ಕೇರಳದ ಹಲವು ಪಿಎಫ್ಐ ನಾಯಕರಿಗೆ ಐಸಿಸ್, ಅಲ್ಖೈದಾ ನಂಟು: ಎನ್ಐಎ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ