
ನವದೆಹಲಿ: ವಕೀಲರು ಮುಷ್ಕರ ನಡೆಸುವಂತಿಲ್ಲ ಅಥವಾ ತಮ್ಮ ಕರ್ತವ್ಯದಿಂದ ದೂರ ಉಳಿಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಮಹತ್ವದ ಸೂಚನೆ ನೀಡಿದೆ. ವಕೀಲರು ಮುಷ್ಕರಕ್ಕೆ ಇಳಿದರೆ ಅಥವಾ ಕರ್ತವ್ಯವನ್ನು ಬಹಿಷ್ಕರಿಸಿದರೆ ನ್ಯಾಯಾಂಗದ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಎಂದು ಹೇಳಿದೆ.
ಇದೇ ವೇಳೆ, ವಕೀಲರ ‘ನೈಜ ತೊಂದರೆ’ಗಳ (Real Problem)ಪರಿಹಾರಕ್ಕಾಗಿ ರಾಜ್ಯ ಮಟ್ಟದಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ದೂರು ಇತ್ಯರ್ಥ ಸಮಿತಿಯನ್ನು ರಚನೆ ಮಾಡುವಂತೆ ಎಲ್ಲ ಹೈಕೋರ್ಟ್ಗಳಿಗೂ ನ್ಯಾಯಮೂರ್ತಿಗಳಾದ ಎಂ.ಆರ್.ಶಾ (MR Shah)ಹಾಗೂ ಅಹ್ಸಾನುದ್ದೀನ್ ಅಮಾನುಲ್ಲಾ (Ahsanuddin Amanullah) ಅವರಿದ್ದ ಪೀಠ ನಿರ್ದೇಶನ ನೀಡಿದೆ. ವಕೀಲರ ದೂರುಗಳಿಗೆ ವೇದಿಕೆ ಒದಗಿಸಲು ಜಿಲ್ಲಾ ಮಟ್ಟದಲ್ಲೂ ಸಮಿತಿಗಳನ್ನು ರಚಿಸಬೇಕು ಎಂದು ಸೂಚನೆ ನೀಡಿದೆ.
ಕೇರಳದ ಮೊಟ್ಟಮೊದಲ ತೃತೀಯ ಲಿಂಗಿ ವಕೀಲೆ ಎನಿಸಿದ ಪದ್ಮಲಕ್ಷ್ಮೀ!
ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲಿನ ಬದಲಾವಣೆಗಳು, ಪ್ರಕರಣಗಳ ನೋಂದಣಿ ಅಥವಾ ಕೆಳ ನ್ಯಾಯಾಂಗದ ಸದಸ್ಯರ ದುರ್ನಡತೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳ ಸಲ್ಲಿಕೆಗೆ ವಕೀಲರಿಗೆ ಏನಾದರೂ ಸಮಸ್ಯೆ ಇದ್ದರೆ, ದೂರು ಇತ್ಯರ್ಥ ಸಮಿತಿಗೆ ಸಲ್ಲಿಕೆ ಮಾಡಬಹುದು. ತನ್ಮೂಲಕ ಮುಷ್ಕರಗಳನ್ನು ತಪ್ಪಿಸಬಹುದು. ರಾಜ್ಯ ಮಟ್ಟದ ದೂರು ಇತ್ಯರ್ಥ ಸಮಿತಿಯು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿರಬೇಕು. ಇಬ್ಬರು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿರಬೇಕು. ಅಡ್ವೋಕೇಟ್ ಜನರಲ್, ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷರು ಹಾಗೂ ಹೈಕೋರ್ಟ್ ಬಾರ್ ಅಸೋಸಿಯೇಷನ್ (High court Bar Association) ಅಧ್ಯಕ್ಷರು ಸಮಿತಿಯಲ್ಲಿರಬೇಕು. ಇದೇ ರೀತಿಯ ಸಮಿತಿಯನ್ನು ಜಿಲ್ಲಾ ಮಟ್ಟದಲ್ಲೂ ರಚಿಸಬೇಕು ಎಂದು ಹೇಳಿದೆ.
ವಕೀಲರ ದೂರುಗಳ ಪರಿಹಾರಕ್ಕೆ ಸೂಕ್ತ ವೇದಿಕೆ ರಚಿಸಬೇಕು ಎಂದು ಕೋರಿ ಡೆಹ್ರಾಡೂನ್ ಜಿಲ್ಲಾ ಬಾರ್ ಅಸೋಸಿಯೇಷನ್ (Dehradun) ಸಲ್ಲಿಸಿದ್ದ ಅರ್ಜಿಯ ಇತ್ಯರ್ಥ ವೇಳೆ ಕೋರ್ಟ್ ಈ ತಾಕೀತು ಮಾಡಿದೆ.
ನ್ಯಾಯಾಲಯದ ಆವರಣದಲ್ಲೇ ವಕೀಲರ ಡಿಶ್ಯೂಂ ಡಿಶ್ಯುಂ... ವಿಡಿಯೋ ವೈರಲ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ