ಹೈಕೋರ್ಟ್‌ಗೆ ನಿವೃತ್ತ ನ್ಯಾಯಾಧೀಶರ ನೇಮಕಕ್ಕೆ ಸುಪ್ರೀಂಕೋರ್ಟ್‌ ಅನುಮತಿ

Published : Feb 01, 2025, 08:54 AM IST
ಹೈಕೋರ್ಟ್‌ಗೆ ನಿವೃತ್ತ ನ್ಯಾಯಾಧೀಶರ ನೇಮಕಕ್ಕೆ ಸುಪ್ರೀಂಕೋರ್ಟ್‌ ಅನುಮತಿ

ಸಾರಾಂಶ

ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಹೈಕೋರ್ಟ್‌ಗಳಲ್ಲಿ ನಿವೃತ್ತ ನ್ಯಾಯಾಧೀಶರನ್ನು ಮರು ನೇಮಕ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಕ್ರಿಮಿನಲ್ ಕೇಸ್‌ಗಳ ವಿಚಾರಣೆಗಾಗಿ ಪ್ರತಿ ಹೈಕೋರ್ಟ್‌ಗೆ ಗರಿಷ್ಠ 5 ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸಬಹುದು.

ನವದೆಹಲಿ: ಹೈಕೋರ್ಟ್‌ಗಳ ನಿವೃತ್ತ ನ್ಯಾಯಾಧೀಶರನ್ನು ಮರಳಿ ಹೈಕೋರ್ಟ್‌ಗಳಿಗೆ ನೇಮಕ ಮಾಡಲು ಸುಪ್ರೀಂಕೋರ್ಟ್‌ ಅನುಮತಿ ನೀಡಿದೆ. ದೇಶಾದ್ಯಂತ ಉಚ್ಚ ನ್ಯಾಯಾಲಯಗಳಲ್ಲಿ ಸುಮಾರು 62 ಲಕ್ಷ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಒಪ್ಪಿಗೆಯೊಂದಿಗೆ ಸುಪ್ರೀಂಕೋರ್ಟ್‌ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಈ ನಿರ್ಧಾರದ ಅನ್ವಯ, ಕ್ರಿಮಿನಲ್‌ ಕೇಸ್‌ಗಳ ವಿಚಾರಣೆಗಾಗಿ ಪ್ರತಿ ಹೈಕೋರ್ಟ್‌ಗೆ ಗರಿಷ್ಠ 5 ನಿವೃತ್ತ ನ್ಯಾಯಮೂರ್ತಿಗಳ ಮರುನೇಮಕ ಮಾಡಬಹುದಾಗಿದೆ. ನಿವೃತ್ತ ನ್ಯಾಯಮೂರ್ತಿಗಳು ಹೈಕೋರ್ಟ್‌ನ ಹಾಲಿ ವಿಚಾರಣಾ ಪೀಠದ ಭಾಗವಾಗಬಹುದೇ ಹೊರತು ಪೀಠದ ನೇತೃತ್ವ ವಹಿಸುವಂತಿಲ್ಲ. ಅಲ್ಲದೆ, ನಿವೃತ್ತ ನ್ಯಾಯಮೂರ್ತಿಗಳ ಪ್ರಮಾಣವು ಹೈಕೋರ್ಟ್‌ನಲ್ಲಿ ನೇಮಕಕ್ಕೆ ಅನುಮತಿ ಇರುವ ನ್ಯಾಯಮೂರ್ತಿಗಳ ಸಂಖ್ಯೆಯ ಶೇ.10ರಷ್ಟನ್ನು ದಾಟುವಂತಿಲ್ಲ.

ಇದನ್ನೂ ಓದಿ:  ನಮ್ಮನ್ನು ಎದುರು ಹಾಕಿಕೊಳ್ಳಬೇಡಿ, ಬೇರೆ ಮಟ್ಠಾಳ ದೇಶವನ್ನು ಹುಡುಕಿಕೊಳ್ಳಿ: ಟ್ರಂಪ್ ಎಚ್ಚರಿಕೆ

ಸಂವಿಧಾನದ 224ಎ ಕಲಂ ಅಡಿ ಇರುವ ಅಧಿಕಾರ ಬಳಸಿಕೊಂಡು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರ ಮರುನೇಮಕಕ್ಕೆ ಅನುಮತಿ ನೀಡಿದ್ದು, ಈ ಕಲಂನಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ರಾಷ್ಟ್ರಪತಿಗಳ ಒಪ್ಪಿಗೆಯೊಂದಿಗೆ ನಿವೃತ್ತ ನ್ಯಾಯಮೂರ್ತಿಗಳನ್ನು ಮರು ನೇಮಕ ಮಾಡಿಕೊಳ್ಳಬಹುದಾಗಿದೆ.

ಈ ಹಿಂದಿನ ಕೆಲಸಗಳ ಆಧಾರದ ಮೇಲೆ ನಿವೃತ್ತ ನ್ಯಾಯಾಧೀಶರ ಹೆಸರನ್ನು ಹೈಕೋರ್ಟ್‌ನ ಕೊಲಿಜಿಯಂಗಳು ಸುಪ್ರೀಂ ಕೋರ್ಟ್‌ನ ಕೊಲಿಜಿಯಂಗೆ ಶಿಫಾರಸು ಮಾಡಬಹುದು. ಆ ಪಟ್ಟಿಯಲ್ಲಿ ಸೂಕ್ತರನ್ನು ಆಯ್ಕೆ ಮಾಡಿ ಹೈಕೋರ್ಟ್‌ಗೆ ಮರು ನೇಮಕ ಮಾಡಲಾಗುತ್ತದೆ. ಈ ರೀತಿ ನೇಮಕಗೊಂಡ ನಿವೃತ್ತ ನ್ಯಾಯಾಧೀಶರ ಅಧಿಕಾರಾವಧಿ ನಿರ್ದಿಷ್ಟ ಅವಧಿ ಅಥವಾ ನಿರ್ದಿಷ್ಟ ಉದ್ದೇಶ(ನಿರ್ದಿಷ್ಟ ಪ್ರಕರಣಗಳ ಇತ್ಯರ್ಥ)ಕ್ಕೆ ಸೀಮಿತವಾಗಿರಲಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಹಿಂದೆಗಿಂತ 3 ಪಟ್ಟು ವೇಗದಲ್ಲಿ ಕೆಲಸ : ರಾಷ್ಟ್ರಪತಿ ದ್ರೌಪದಿ ಮುರ್ಮು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..