'ಎಲ್ಲರಿಗೂ ಉಚಿತ ಲಸಿಕೆ ಬಗ್ಗೆ ಯೋಚಿಸಿ'

Published : May 01, 2021, 09:17 AM ISTUpdated : May 01, 2021, 09:19 AM IST
'ಎಲ್ಲರಿಗೂ ಉಚಿತ ಲಸಿಕೆ ಬಗ್ಗೆ ಯೋಚಿಸಿ'

ಸಾರಾಂಶ

ಎಲ್ಲರಿಗೂ ಉಚಿತ ಲಸಿಕೆ ಬಗ್ಗೆ ಯೋಚಿಸಿ: ಸುಪ್ರೀಂ| ರಾಜ್ಯಕ್ಕೆ, ಕೇಂದ್ರಕ್ಕೆ ಪ್ರತ್ಯೇಕ ಲಸಿಕೆ ದರ ಏಕೆ: ಸುಪ್ರೀಂ ಪ್ರಶ್ನೆ| ಲಸಿಕೆ ಹಂಚಿಕೆ, ದರವನ್ನು ಖಾಸಗಿ ಕಂಪನಿ ನಿರ್ಧರಿಸುವಂತಾಗಬಾರದು| ಕೇಂದ್ರ ಸರ್ಕಾರ ರಾಷ್ಟ್ರೀಯ ಲಸಿಕೆ ಯೋಜನೆ ಜಾರಿಗೆ ತರಲಿ

ನವದೆಹಲಿ(ಮೇ.01): ದೇಶದ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಬೇಕು. ಈ ದಿಸೆಯಲ್ಲಿ ರಾಷ್ಟ್ರೀಯ ಲಸಿಕೆ ಆಂದೋಲನ ನಡೆಸುವುದು ಒಳ್ಳೆಯದು ಎಂದು ಸಲಹೆ ನೀಡಿರುವ ಸುಪ್ರೀಂಕೋರ್ಟ್‌, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋವಿಡ್‌ ಲಸಿಕೆಗೆ ಪ್ರತ್ಯೇಕ ದರ ಏಕೆ ನಿಗದಿಪಡಿಸಲಾಗಿದೆ ಎಂದು ಪ್ರಶ್ನಿಸಿದೆ.

ದೇಶದಲ್ಲಿ ಕೊರೋನಾ ಸ್ಥಿತಿ ಕೈಮೀರುತ್ತಿರುವ ಬಗ್ಗೆ ಸ್ವಯಂಪ್ರೇರಿತ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌, ಶುಕ್ರವಾರದ ವಿಚಾರಣೆಯ ವೇಳೆ ದೇಶಾದ್ಯಂತ ಏಕರೂಪದ ಲಸಿಕೆ ಆಂದೋಲನ ನಡೆಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು. ಖಾಸಗಿ ಲಸಿಕೆ ಉತ್ಪಾದಕ ಕಂಪನಿಗಳು ಯಾವ ರಾಜ್ಯಕ್ಕೆ ಎಷ್ಟುಲಸಿಕೆ ನೀಡಬೇಕು ಎಂಬುದನ್ನು ನಿರ್ಧರಿಸುವಂತಾಗಬಾರದು. ಈಗ ಉತ್ಪಾದನೆಯಾದ ಶೇ.100ರಷ್ಟುಲಸಿಕೆಯನ್ನು ಕೇಂದ್ರ ಸರ್ಕಾರವೇ ಏಕೆ ಖರೀದಿಸುತ್ತಿಲ್ಲ? ಕೇಂದ್ರಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಎರಡು ರೀತಿಯ ದರ ಏಕಿರಬೇಕು? ಇದರ ಹಿಂದಿನ ತರ್ಕವೇನು ಎಂದು ಪ್ರಶ್ನಿಸಿತು.

"

ಬಡವರಿಗೆ ಲಸಿಕೆ ಪಡೆಯಲು ಹಣ ನೀಡುವ ಶಕ್ತಿ ಇರುವುದಿಲ್ಲ. ದುರ್ಬಲ ವರ್ಗದವರು ಹಾಗೂ ನಿರ್ಲಕ್ಷಿತ ಎಸ್‌ಸಿ, ಎಸ್‌ಟಿ ಸಮುದಾಯದವರ ಕತೆಯೇನು? ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಹಣ ತೆತ್ತು ಅವರು ಲಸಿಕೆ ಪಡೆಯಬೇಕೇ ಎಂದೂ ನ್ಯಾಯಪೀಠ ಕೇಳಿತು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಭಾರತದಲ್ಲಿ ಭರ್ಜರಿ ಹೂಡಿಕೆಯ ಘೋಷಣೆ ಮಾಡಿದ ದೈತ್ಯ ಕಂಪನಿಗಳು
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ