ನೈಜ ಭಾರತೀಯರ ನಿರ್ಧಾರದ ಕೆಲಸ ಜಡ್ಜ್‌ಗಳದಲ್ಲ: ಸುಪ್ರೀಂ ಚಾಟಿ ಬೆನ್ನಲ್ಲೇ ರಾಹುಲ್‌ಗೆ ಪ್ರಿಯಾಂಕಾ ಬೆಂಬಲ

Published : Aug 06, 2025, 08:03 AM IST
Rahul Gandhi Priyanka Gandhi

ಸಾರಾಂಶ

ಸುಪ್ರೀಂ ಕೋರ್ಟ್‌ನ ಟೀಕೆಗಳ ನಡುವೆಯೂ ರಾಹುಲ್ ಗಾಂಧಿಗೆ ಪ್ರಿಯಾಂಕಾ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ. ನೈಜ ಭಾರತೀಯತೆಯನ್ನು ನ್ಯಾಯಾಧೀಶರು ನಿರ್ಧರಿಸಬಾರದು ಎಂದು ಪ್ರಿಯಾಂಕಾ ಹೇಳಿದ್ದಾರೆ. ಇಂಡಿಯಾ ಕೂಟ ಕೂಡ ರಾಹುಲ್‌ಗೆ ಬೆಂಬಲ ನೀಡಿದೆ.

ನವದೆಹಲಿ: ನೈಜ ಭಾರತೀಯರು ಎಂಬುದನ್ನು ನಿರ್ಧರಿಸುವವರು ನ್ಯಾಯಾಧೀಶರಲ್ಲ ಎಂದು ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra), ಸುಪ್ರೀಂಕೋರ್ಟ್‌ ನ್ಯಾಯಾಧೀಶರ (Supreme Court Judge) ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೇನೆಯ ಕುರಿತು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (LoP Rahul Gandhi) ಆಡಿದ್ದ ಮಾತಿನ ವಿರುದ್ಧ ಸೋಮವಾರವಷ್ಟೇ ಸುಪ್ರೀಂಕೋರ್ಟ್‌ ಕಿಡಿಕಾರಿತ್ತು. ಅದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಂಗಳವಾರ ಇಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ, ‘ರಾಹುಲ್‌ ಗಾಂಧಿಗೆ ನಮ್ಮ ಸೇನಾಪಡೆಯ ಮೇಲೆ ಅಪಾರ ಗೌರವವಿದೆ. ಅವರು ಯಾವತ್ತೂ ಸೇನೆ ವಿರುದ್ಧ ಹೇಳಿಕೆ ನೀಡುವುದಿಲ್ಲ. ಸುಪ್ರೀಂ ಕೋರ್ಟ್‌ನ ಜಡ್ಜ್‌ಗಳ ಮೇಲೆ ಗೌರವವಿದೆ. ಆದರೆ, ಯಾರು ನೈಜ ಭಾರತೀಯ ಎಂಬುದನ್ನು ನಿರ್ಧರಿಸುವುದು ನ್ಯಾಯಾಧೀಶರಲ್ಲ. ಲೋಕಸಭೆ ಪ್ರತಿಪಕ್ಷ ನಾಯಕನಾಗಿ ಸರ್ಕಾರವನ್ನು (Government) ಪ್ರಶ್ನಿಸುವುದು ರಾಹುಲ್‌ ಗಾಂಧಿ ಹಕ್ಕು’ ಎಂದು ಪ್ರಿಯಾಂಕಾ ಗಾಂಧಿ ಸಮರ್ಥಿಸಿಕೊಂಡಿದ್ದಾರೆ.

ರಾಹುಲ್ ಗಾಂಧಿಗೆ ಇಂಡಿ ಕೂಟ ಬೆಂಬಲ

ಇದೇ ವೇಳೆ ವಿಪಕ್ಷ ಇಂಡಿಯಾ ಕೂಟ ಕೂಡಾ ರಾಹುಲ್‌ ಗಾಂಧಿ ಹೇಳಿಕೆ ಬೆಂಬಲಿಸಿದ್ದು, ‘ರಾಷ್ಟ್ರೀಯ ಹಿತಾಸಕ್ತಿಯ ವಿಚಾರವಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಜಕೀಯ ಪಕ್ಷಗಳ ಜವಾಬ್ದಾರಿ’ ಎಂದು ಹೇಳಿದೆ. ಈ ಕುರಿತು ಮಂಗಳವಾರ ಇಲ್ಲಿ ಸಭೆ ನಡೆಸಿದ ಕೂಟದ ನಾಯಕರು, ‘ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳು ಅನಗತ್ಯವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ’ ಎಂಬ ನಿಲುವಿಗೆ ನಾವು ಬಂದಿದ್ದೇವೆ ಎಂದು ತಿಳಿಸಿದೆ.

 

 

ಭಾರತ-ಚೀನಾ ಸಂಘರ್ಷದ ಕುರಿತು ವಿವಾದಾತ್ಮಕ ಹೇಳಿಕೆ

2022ರ ಡಿಸೆಂಬರ್‌ನಲ್ಲಿ ನಡೆದಿದ್ದ ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಅ‍ವರು ಭಾರತ-ಚೀನಾ ಸಂಘರ್ಷದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಲಡಾಕ್‌ನಲ್ಲಿ ಚೀನಾ ಸೇನೆ ಭಾರತದ 2 ಸಾವಿರ ಚದರಡಿ ಭೂಮಿ ಆಕ್ರಮಿಸಿಕೊಂಡಿದೆ, ನಮ್ಮ ಯೋಧರ ಮೇಲೆ ಚೀನಾ ಸೇನೆ ಹಲ್ಲೆ ಮಾಡಿದೆ ಎಂದು ರಾಹುಲ್‌ ಹೇಳಿದ್ದರು. ಈ ರೀತಿಯ ಹೇಳಿಕೆ ನೀಡಲು ನಿಮ್ಮ ಬಳಿ ಏನು ಸಾಕ್ಷ್ಯ ಇದೆ? ನೀವು ನಿಜವಾದ ಭಾರತೀಯನಾಗಿದ್ದರೆ ಇಂಥ ಹೇಳಿಕೆ ನೀಡುತ್ತಿರಲಿಲ್ಲ ಎಂದು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್