
ನವದೆಹಲಿ: ಕೋವಿಡ್ ಸಾಂಕ್ರಾಮಿಕಕ್ಕೆ ತುತ್ತಾಗಿ ಯುಪಿಎಸ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗಲು ವಿಫಲವಾದ ಮತ್ತು ಹೆಚ್ಚುವರಿ ಅವಕಾಶ ಬಯಸುತ್ತಿರುವ ಅಭ್ಯರ್ಥಿಗಳಿಗೆ ಮರು ಪ್ರಯತ್ನಕ್ಕೆ ಅವಕಾಶ ಕಲ್ಪಿಸುವ ಕುರಿತಾಗಿ ಪರಿಶೀಲನೆ ನಡೆಸಿ ಎಂದು ಸುಪ್ರೀಂಕೋರ್ಚ್ ಗುರುವಾರ ಸರ್ಕಾರಕ್ಕೆ ಸೂಚನೆ ನೀಡಿದೆ. ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ನೀಡುವುದು ಸಾಧ್ಯವಿಲ್ಲ ಎಂದು ಸರ್ಕಾರ ಕಳೆದ ವಾರ ಹೇಳಿತ್ತು. ಇದರ ವಿರುದ್ಧವಾಗಿ ಮೂವರು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್, ಕೋವಿಡ್ಗೆ ತುತ್ತಾಗಿದ್ದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ನೀಡುವ ಕುರಿತಾಗಿ ಸರ್ಕಾರ ಪರೀಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದೆ.
ಕೋವಿಡ್-19 ಸೋಂಕಿನಿಂದಾಗಿ ನಾಗರಿಕ ಸೇವಾ ಮುಖ್ಯ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಅವಕಾಶ ನೀಡುವ ವಿಚಾರವನ್ನು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಗುರುವಾರ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಕೋವಿಡ್ -19 ಕಾರಣದಿಂದಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೆ ವಂಚಿತರಾದ ವಿದ್ಯಾರ್ಥಿಗಳ ಪ್ರಾತಿನಿಧ್ಯವನ್ನು ಮರುಪರಿಶೀಲಿಸುವಂತೆ ನ್ಯಾಯಮೂರ್ತಿ ಎಎಮ್ ಖಾನ್ವಿಲ್ಕರ್ ನೇತೃತ್ವದ ಪೀಠವು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
1 ಹಾಗೂ 2ನೇ ಬಾರಿ ವಿಫಲ, ಮರಳಿ ಪ್ರಯತ್ನಿಸಿದ ವರುಣಾ UPSC ಟಾಪರ್ ಆಗಿದ್ದು ಹೀಗೆ!
ಈ ನಿರ್ದೇಶನದೊಂದಿಗೆ ಯುಪಿಎಸ್ಸಿ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಲೇವಾರಿ ಮಾಡಿದೆ.ಕೋವಿಡ್-19 ಕಾರಣದಿಂದಾಗಿ ಕಳೆದುಹೋದ ಕೊನೆಯ ಅವಕಾಶಕ್ಕೆ ಪರಿಹಾರದ ಪ್ರಯತ್ನಕ್ಕೆ ಅವರು ಅರ್ಹರಾಗಿರುತ್ತಾರೆ ಎಂದು ಅರ್ಜಿದಾರರು ಹೇಳಿದ್ದಾರೆ. ಮೂವರು UPSC ಆಕಾಂಕ್ಷಿಗಳು ವಕೀಲ ಶಶಾಂಕ್ ಸಿಂಗ್ ಮೂಲಕ ಅರ್ಜಿ ಸಲ್ಲಿಸಿದ್ದರು. ಹೆಚ್ಚುವರಿ ಅಥವಾ ಹೆಚ್ಚುವರಿ ಪ್ರಯತ್ನಗಳ ಲಾಭವನ್ನು ವಿಸ್ತರಿಸಲು ಯುಪಿಎಸ್ಸಿಗೆ ಸೂಕ್ತ ನಿರ್ದೇಶನ ನೀಡಬೇಕು ಮತ್ತು ನಾಗರಿಕ ಸೇವಾ ಫಲಿತಾಂಶ ಪ್ರಕಟಣೆಗೆ ಮೊದಲು ಅರ್ಜಿದಾರರು 2021ರ ಮುಖ್ಯ ಪರೀಕ್ಷೆ ಬರೆಯಲು ಸಾಧ್ಯವಾಗದೆ ಉಳಿದ ಪತ್ರಿಕೆಗಳನ್ನು ಮತ್ತೆ ಬರೆಯಲು ಅರ್ಜಿದಾರರಿಗೆ ಅವಕಾಶ ಮಾಡಿಕೊಡಬೇಕು ಎಂದು ಅರ್ಜಿದಾರರು ಒತ್ತಾಯಿಸಿದ್ದಾರೆ.
ಅರ್ಜಿದಾರರು ಯುಪಿಎಸ್ಸಿ ಆಕಾಂಕ್ಷಿಗಳಾಗಿದ್ದು, ಅವರು ಯುಪಿಎಸ್ಸಿ-2021 ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಮತ್ತು 2022ರ ಜನವರಿ 7-ರಿಂದ 16 ರ ಮಧ್ಯ ಅವಧಿಯಲ್ಲಿ ನಿಗದಿಯಾಗಿದ್ದ ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ ಹಾಜರಾಗಲು ಅರ್ಹರಾಗಿದ್ದಾರೆ ಎಂದು ವಾದಿಸಿದ್ದರು. ಕೋವಿಡ್-19 ಪಾಸಿಟಿವ್ ಆದ ನಂತರ ಮತ್ತು ಸರ್ಕಾರದ ಕಟ್ಟುನಿಟ್ಟಾದ ಕ್ವಾರಂಟೈನ್ ಮಾರ್ಗಸೂಚಿಗಳ ಅಡಿಯಲ್ಲಿ ವಿಧಿಸಲಾದ ನಿರ್ಬಂಧಗಳಿಂದಾಗಿ ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಅಲ್ಲದೆ, ಮುಖ್ಯ ಪರೀಕ್ಷೆಯ ಅವಧಿಯಲ್ಲಿ ಅಥವಾ ಅದಕ್ಕೂ ಮೊದಲು COVID-19 ಧನಾತ್ಮಕವಾಗಿರುವ ಅರ್ಜಿದಾರರಿಗೆ ವ್ಯವಸ್ಥೆಗಳನ್ನು ಒದಗಿಸುವ UPSC ಯ ಯಾವುದೇ ರೀತಿಯ ನೀತಿಯ ಅನುಪಸ್ಥಿತಿಯಲ್ಲಿತ್ತು.
ದೇಶಸೇವೆಗಾಗಿ ಮೂರು ವರ್ಷ ಸೋಶಿಯಲ್ ಮೀಡಿಯಾದಿಂದ ದೂರ ಉಳಿದ ಅಂಜಲಿ!
ಕೋವಿಡ್-19 ಸೋಂಕಿನಿಂದಾಗಿ ಸಿವಿಲ್ ಸರ್ವಿಸಸ್ ಮೇನ್ಸ್ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಹೆಚ್ಚುವರಿ ಪ್ರಯತ್ನವನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ನಲ್ಲಿ ಕೇಂದ್ರವು ವಿರೋಧಿಸಿದೆ, ಇದನ್ನು ಒಪ್ಪಿಕೊಳ್ಳುವುದು ದೇಶದಾದ್ಯಂತ ನಡೆಸುವ ಇತರ ಪರೀಕ್ಷೆಗಳಿಗೆ ಇದೇ ರೀತಿಯ ಬೇಡಿಕೆಗಳಿಗೆ ಕಾರಣವಾಗಬಹುದು ಎಂದು ಕೇಂದ್ರ ವಾದಿಸಿದೆ. .
ಸಿವಿಲ್ ಸರ್ವೀಸಸ್ ಪರೀಕ್ಷೆಗೆ ಅಸ್ತಿತ್ವದಲ್ಲಿರುವ ವಯಸ್ಸಿನ ಮಾನದಂಡಗಳು 21 ರಿಂದ 32 ವರ್ಷಗಳು ಮತ್ತು ಕೆಲವು ವರ್ಗದ ಅಭ್ಯರ್ಥಿಗಳಿಗೆ ಸಡಿಲಿಕೆಗಳಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ಸಡಿಲಿಕೆಗಳೊಂದಿಗೆ ಪರೀಕ್ಷೆ ಬರೆಯಲು ಆರು ಅವಕಾಶಗಳಿದೆ. ಹೀಗಾಗಿ, ಕೆಲವು ಕಾರಣಗಳಿಂದ ಒಂದು ಪ್ರಯತ್ನವು ಸೋತರೂ ಸಹ ಅಸ್ತಿತ್ವದಲ್ಲಿರುವ ನಿಯಮಗಳು ಆಕಾಂಕ್ಷಿಗಳಿಗೆ ನ್ಯಾಯಯುತ ಅವಕಾಶಗಳನ್ನು ಒದಗಿಸುತ್ತದೆ ಎಂದು ಕೇಂದ್ರವು ವಾದ ಮಂಡಿಸಿತ್ತು. ಆಯೋಗದ ಅಭಿಪ್ರಾಯಗಳು ಮತ್ತು ನಿಲುವುಗಳು ಅರ್ಜಿದಾರರು ಎತ್ತಿರುವ ಬೇಡಿಕೆಗಳಿಗೆ ವಿರುದ್ಧವಾಗಿದೆ ಎಂದು ಕೇಂದ್ರ ಸರ್ಕಾರ ಹೇಲಿದೆ.
ಆಯೋಗವು ಮರುಪರೀಕ್ಷೆಗೆ ನಿಬಂಧನೆಯನ್ನು ಮಾಡಿದರೆ, ಅದು ನಡೆಯುತ್ತಿರುವ ಇತರ ಪರೀಕ್ಷೆಗಳ ವೇಳಾಪಟ್ಟಿಗಳ ಮೇಲೆಯೂ ಪರಿಣಾಮಗಳನ್ನು ಬೀರುತ್ತದೆ. ಯುಪಿಎಸ್ಸಿ ಕೂಡ ಇಂತಹ ವಿನಂತಿಗಳಿಗೆ ಅವಕಾಶ ನೀಡುವುದರಿಂದ ಯಾವುದೇ ಪರೀಕ್ಷೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗದ ಅಸ್ತವ್ಯಸ್ತ ಸ್ಥಿತಿಗೆ ಕಾರಣವಾಗುತ್ತದೆ ಎಂದು ಸುಪ್ರೀಂ ಕೋರ್ಟ್ಗೆ (Supreme Court) ಸಲ್ಲಿಸಿದ ಅಫಿಡವಿಟ್ನಲ್ಲಿ ಕೇಂದ್ರ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ