7 ರಾಜ್ಯಗಳಲ್ಲಿ 28 ಸಾವಿರ ಕೈದಿಗಳಿಗೆ ಬಿಡುಗಡೆ ಭಾಗ್ಯ

Kannadaprabha News   | Asianet News
Published : Mar 31, 2020, 10:24 AM IST
7 ರಾಜ್ಯಗಳಲ್ಲಿ 28 ಸಾವಿರ ಕೈದಿಗಳಿಗೆ ಬಿಡುಗಡೆ ಭಾಗ್ಯ

ಸಾರಾಂಶ

ಜೈಲುಗಳಲ್ಲಿ ಕೋವಿಡ್‌ ಹರಡುವ ಭೀತಿಯಿಂದಾಗಿ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಏಳು ರಾಜ್ಯಗಳು ತಮ್ಮ ಜೈಲುಗಳಲ್ಲಿರುವ 28 ಸಾವಿರ ಕೈದಿಗಳನ್ನು ಮಧ್ಯಂತರ ಜಾಮೀನು ಅಥವಾ ಪೆರೋಲ್‌ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಿದೆ. 

ನವದೆಹಲಿ (ಮಾ. 31):  ಜೈಲುಗಳಲ್ಲಿ ಕೋವಿಡ್‌ ಹರಡುವ ಭೀತಿಯಿಂದಾಗಿ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಏಳು ರಾಜ್ಯಗಳು ತಮ್ಮ ಜೈಲುಗಳಲ್ಲಿರುವ 28 ಸಾವಿರ ಕೈದಿಗಳನ್ನು ಮಧ್ಯಂತರ ಜಾಮೀನು ಅಥವಾ ಪೆರೋಲ್‌ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಿದೆ.

ಸರ್ಕಾರಿ ನೌಕರರು, ಶಾಸಕರ ವೇತನ ಅರ್ಧಕ್ಕರ್ಧ ಕತ್ತರಿ!

ಕೆಲ ದಿನಗಳ ಹಿಂದಷ್ಟೇ ಕೈದಿಗಳ ಬಿಡುಗಡೆಗೆ ಉನ್ನತ ಸಮಿತಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು. ಇದರನ್ವಯ ದೆಹಲಿ 3000, ಮಧ್ಯಪ್ರದೇಶ 8,000, ಉತ್ತರ ಪ್ರದೇಶ 11,000, ಗುಜರಾತ್‌ 1,200, ಪಶ್ಚಿಮ ಬಂಗಾಳ 3,000 ಹಾಗೂ ತಮಿಳುನಾಡು 1,200 ಕೈದಿಗಳ ಬಿಡುಗಡೆಗೆ ಮುಂದಾಗಿದೆ. ಈಗಾಗಲೇ ಹಲವು ರಾಜ್ಯಗಳು ವಿವಿಧ ಹಂತಗಳಲ್ಲಿ ಕೈದಿಗಳನ್ನು ಬಿಡುಗಡೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾನ್ಸರ್ ಹೋರಾಟದಲ್ಲಿರುವಾಗಲೇ ಕೆಲಸದಿಂದ ತೆಗೆದ ಕಂಪನಿ, ಗೇಟಿನ ಮುಂದೆ ಉಪವಾಸ ಹೋರಾಟ
ಡಿಸೆಂಬರ್‌ 31ರ ಒಳಗೆ ಈ ಇಂಪಾರ್ಟೆಂಟ್‌ ಕೆಲಸ ಪೂರ್ತಿ ಮಾಡಿ, ಮತ್ತೆ ಸರ್ಕಾರ ಈ ಅವಕಾಶ ನೀಡಲ್ಲ..!