
ನವದೆಹಲಿ[ಮಾ.02]: ಮಹದಾಯಿ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ಮತ್ತೊಂದು ಜಯ ಸಿಕ್ಕಿದೆ. ಹೌದು, ಮಹಾದಾಯಿ ಕಾಮಗಾರಿಗೆ ಯಾವುದೇ ಅಡ್ಡಿ ಇಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಮೂಲಕ ಗೋವಾ ಸರ್ಕಾರಕ್ಕೆ ಭಾರೀ ಹಿನ್ನೆಡೆಯಾಗಿದೆ.
"
ಮಹದಾಯಿ: ಗೋವಾಗೆ ತಿರುಗೇಟು ನೀಡಲು ಕರ್ನಾಟಕ ಸಜ್ಜು
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕೇಂದ್ರ ಸರ್ಕಾರದ ನಡೆಯನ್ನ ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಹೀಗಾಗಿ ಈ ವಿಶೇಷ ಮೇಲ್ಮನವಿಯನ್ನ ಕೈಗೆತ್ತಿಕೊಂಡ ಸುಪ್ರೀಂ ಮಹಾದಾಯಿ ಕಾಮಗಾರಿಗೆ ಯಾವುದೇ ಅಡ್ಡಿ ಇಲ್ಲ ಎಂದು ತೀರ್ಪು ನೀಡುವ ಮೂಲಕ ಗೋವಾ ಸರ್ಕಾರದ ಮೇಲ್ಮನವಿಯನ್ನ ವಜಾ ಗೊಳಿಸಿದೆ.
ಕರ್ನಾಟಕ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ನೇತೃತ್ವದ ವಕೀಲರ ತಂಡ ವಾದ ಮಂಡಿಸಿದೆ. ಈ ತೀರ್ಪಿನ ಮೂಲಕ ಉತ್ತರ ಕರ್ನಾಟಕದ ರೈತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ಮಹದಾಯಿ: ಕರ್ನಾಟಕಕ್ಕೆ ಜಯ, ಗೋವಾದ ತಕರಾರಿಗೆ ಮಣೆ ಹಾಕದ ಕೇಂದ್ರ!
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅಡ್ವೋಕೇಟ್ ಜನರಲ್ [ಎಜಿ] ಪ್ರಭುಲಿಂಗ ನಾವಡಗಿ ಅವರು, ಮಹದಾಯಿ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ಜಯ ಸಿಕ್ಕಿದೆ. ಈ ಮೂಲಕ ಮತ್ತೆ ಕ್ಯಾತೆ ತೆಗೆದಿದ್ದ ಗೋವಾ ಸರ್ಕಾರಕ್ಕೆ ಭಾರೀ ಹಿನ್ನೆಡೆಯಾಗಿದೆ. ಮಹದಾಯಿ ಕಾಮಗಾರಿ ಆರಂಭಕ್ಕೆ ಯಾವುದೇ ಅಡ್ಡಿ ಇಲ್ಲ, ಟ್ರಿಬ್ಯುನಲ್ ಆದೇಶದನ್ವಯ ಕರ್ನಾಟಕ ಕಾಮಗಾರಿ ನಡೆಸಬಹುದು. ಗೋವಾ ಸರ್ಕಾರದ ಅರ್ಜಿಯನ್ನ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ