
ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ನಿಯಮಗಳಿಗೆ ಸುಪ್ರೀಂಕೋರ್ಟ್ ತಡೆ
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ನಿಯಮಗಳಿಗೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು ತಡೆ ಹೇರಿದೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ವಕ್ಪ್ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶವ್ಯಾಪಿ ಪ್ರತಿಭಟನೆ ನಡೆದಿತ್ತು. ಈ ಪ್ರಕರಣಗಳ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದರಲ್ಲಿರುವ ಕೆಲ ವಿಚಾರಗಳು ನಿರಂಕುಶ ಅಧಿಕಾರಕ್ಕೆ ಕಾರಣವಾಗುತ್ತವೆ ಎಂದು ಹೇಳಿ ಆಕ್ಷೇಪ ವ್ಯಕ್ತಪಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು, ಇಡೀ ಶಾಸನವನ್ನು ತಡೆಹಿಡಿಯಲು ಯಾವುದೇ ಪ್ರಕರಣ ಮಾಡಲಾಗಿಲ್ಲ, ಆದರೆ ಇದರ ಕೆಲ ವಿಭಾಗಗಳಿಗೆ ಸ್ವಲ್ಪ ರಕ್ಷಣೆ ಬೇಕು ಎಂದು ಹೇಳಿದರು. ಹೀಗಾಗಿ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳು ಇತ್ಯರ್ಥವಾಗುವವರೆಗೆ ಈ ಕಾಯ್ದೆಯ ಕೆಲ ನಿಬಂಧನೆಗಳನ್ನು ಸ್ಥಗಿತಗೊಳಿಸಲಾಗಿದೆ.
ವಕ್ಫ್ ತಿದ್ದುಪಡಿ ಕಾಯ್ದೆಯ 3 ವಿವಾದಿತ ನಿಯಮಗಳಿಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ವಕ್ಫ್ ತಿದ್ದುಪಡಿ ಕಾಯ್ದೆಗೆ ಪೂರ್ಣ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿವಕ್ಫ್ ಕಾಯ್ದೆಗೆ ಸಂಬಂಧಿಸಿ ಮಧ್ಯಂತರ ಆದೇಶ ನೀಡಿದೆ. ಮೋದಿ ಸರ್ಕಾರ ಮಾಡಿದ್ದ 3 ವಿವಾದಿತ ಅಂಶಗಳಿಗೆ ಅಂತಿಮ ಆದೇಶ ಬರುವವರೆಗೆ ತಾತ್ಕಾಲಿಕವಾಗಿ ಕೋರ್ಟ್ ತಡೆ ನೀಡಿದೆ. ಆದರೆ ಇಡೀ ಕಾಯ್ದೆಗೆ ತಡೆ ನೀಡಬೇಕು ಎಂಬ ವಾದವನ್ನು ಸುಪ್ರೀಂಕೋರ್ಟ್ ಒಪ್ಪಿಲ್ಲ.
ಯಾವ ನಿಯಮಗಳಿಗೆ ಸುಪ್ರೀಂಕೋರ್ಟ್ ತಡೆ
ಕೇಂದ್ರ ಸರ್ಕಾರದ ಹೊಸ ಕಾನೂನು, ವಕ್ಫ್ ಆಸ್ತಿ ಮಾಲೀಕತ್ವಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಜಿಲ್ಲಾಧಿಕಾರಿಗೆ ಅಂತಿಮ ಮಧ್ಯಸ್ಥಗಾರನ ಅಧಿಕಾರ ನೀಡಿತ್ತು. ಕಲೆಕ್ಟರ್ ತಮ್ಮ ವರದಿಯಲ್ಲಿ ಆಸ್ತಿ ಸಂಪೂರ್ಣವಾಗಿ ಅಥವಾ ಭಾಗಶಃ ವಿವಾದದಲ್ಲಿದೆ ಅಥವಾ ಸರ್ಕಾರಿ ಆಸ್ತಿಯಾಗಿದೆ ಎಂದು ಉಲ್ಲೇಖಿಸಿದರೆ, ಆಸ್ತಿಯ ಅಂತಹ ಭಾಗಕ್ಕೆ ಸಂಬಂಧಿಸಿದ ವಕ್ಫ್ ಅನ್ನು ನೋಂದಾಯಿಸಲಾಗುತ್ತಿರಲಿಲ್ಲ. ಈ ವಿವಾದವನ್ನು ಸಮರ್ಥ ನ್ಯಾಯಾಲಯ ನಿರ್ಧರಿಸದ ಹೊರತು ಜಿಲ್ಲಾಧಿಕಾರಿ ಇದರ ಬಗ್ಗೆ ಕ್ರಮ ಕೈಗೊಳ್ಳುವಂತಿಲ್ಲ ಎಂದು ಈಗ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ