ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

Published : Oct 17, 2023, 12:46 PM ISTUpdated : Oct 17, 2023, 01:14 PM IST
ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ಸಾರಾಂಶ

ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪು ನೀಡಿದೆ. 

ನವದೆಹಲಿ (ಅಕ್ಟೋಬರ್ 17): ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪು ನೀಡಿದೆ. ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೊಡಲು 3 ನ್ಯಾಯಮೂರ್ತಿಗಳು ವಿರೋಧ ವ್ಯಕ್ತಪಡಿಸಿದ್ದರೆ, ಇಬ್ಬರು ನ್ಯಾಯಮೂರ್ತಿಗಳು ಇದಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೆ, ಇದು ಸರ್ಕಾರಕ್ಕೆ ಬಿಟ್ಟ ವಿಚಾರ ಎಂದೂ ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಮದುವೆ ಮೂಲಭೂತ ಹಕ್ಕು ಅಲ್ಲ ಎಂದು ಎಲ್ಲಾ ಐದು ನ್ಯಾಯಮೂರ್ತಿಗಳು ಒಪ್ಪಿಕೊಂಡಿದ್ದಾರೆ. ಮತ್ತು ಬಹುಮತದ ತೀರ್ಪಿನಲ್ಲಿ, ನ್ಯಾಯಾಲಯವು ಸಲಿಂಗ ವಿವಾಹದ ವಿರುದ್ಧ ತೀರ್ಪು ನೀಡಿದೆ. ಶಾಸಕಾಂಗವು ಸಲಿಂಗ ವಿವಾಹವನ್ನು ತರಲು ನಿರ್ಧರಿಸಬೇಕು ಎಂಬುದು ಸಹ ಬಹುಮತದ ಅಭಿಪ್ರಾಯವಾಗಿದೆ. ನ್ಯಾಯಮೂರ್ತಿಗಳಾದ ಭಟ್, ಹಿಮಾ ಕೊಹ್ಲಿ ಮತ್ತು ನರಸಿಂಹ ಅವರು ಬಹುಮತದ ಅಭಿಪ್ರಾಯವನ್ನು ಮಂಡಿಸಿದರೆ, ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಕೌಲ್ ಅಲ್ಪಸಂಖ್ಯಾತರ ಅಭಿಪ್ರಾಯವನ್ನು ಮಂಡಿಸಿದರು.

ಇದನ್ನು ಓದಿ: ಸಲಿಂಗಕಾಮ ಒಂದು ‘ಕಾಯಿಲೆ’: ಆರೆಸ್ಸೆಸ್‌ ಸಹವರ್ತಿ ಸಂಘಟನೆ; ದೇಶದ ವೈದ್ಯರನ್ನು ಸಂದರ್ಶಿಸಿ ಅಧ್ಯಯನ

ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನು ಬದ್ಧಗೊಳಿಸಬೇಕೇ  ಎಂಬ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು 10 ದಿನಗಳ ವಿಚಾರಣೆಯ ನಂತರ ಈ ವರ್ಷ ಮೇ 11 ರಂದು ತೀರ್ಪನ್ನು ಕಾಯ್ದಿರಿಸಿತ್ತು.  

ಸಾಂವಿಧಾನಿಕ ಪೀಠ ಸತತ ಹತ್ತು ದಿನಗಳ ಕಾಲ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ, ಅರ್ಜಿದಾರರು ಹಾಗೂ ಸಂಬಂಧಪಟ್ಟಎಲ್ಲ ಪಕ್ಷಗಾರರ ವಾದಗಳನ್ನು ಆಲಿಸಿದೆ. ಬಳಿಕ ಹಿರಿಯ ವಕೀಲರಾದ ಎ.ಎಂ.ಸಿಂಘ್ವಿ, ರಾಜು ರಾಮಚಂದ್ರನ್‌, ಕೆ.ವಿ.ವಿಶ್ವನಾಥನ್‌, ಆನಂದ್‌ ಗ್ರೋವರ್‌, ಹಾಗೂ ಸೌರಭ್‌ ಕೃಪಾಲ್‌ ಅವರ ವಾದಗಳನ್ನೂ ಆಲಿಸಿದೆ.

ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ: ವಿಚಾರಣೆ ಮುಕ್ತಾಯ

ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಹಾಕಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ರಚನೆ ಮಾಡಿತ್ತು. "ನಮ್ಮಲ್ಲಿ ನಿರಂತರವಾಗಿ ಉಳಿದಿರುವ ಸಾಂವಿಧಾನಿಕ ಸಿದ್ಧಾಂತವಿದೆ. ನಾವು ಶಾಸನವನ್ನು ಮಾಡಲು ಸಾಧ್ಯವಿಲ್ಲ, ನಾವು ನೀತಿಯನ್ನು ರೂಪಿಸಲು ಸಾಧ್ಯವಿಲ್ಲ, ನಾವು ನೀತಿ ರಚನೆಯ ಕ್ಷೇತ್ರವನ್ನು ಪ್ರವೇಶಿಸಲು ಸಾಧ್ಯವಿಲ್ಲ" ಎಂದು ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಎಸ್ ಆರ್ ಭಟ್ ತಿಳಿಸಿದ್ದರು.

ಮದುವೆಯು ಹಲವಾರು ಹಕ್ಕುಗಳು, ಸವಲತ್ತುಗಳು ಮತ್ತು ಕಟ್ಟುಪಾಡುಗಳನ್ನು "ಕಾನೂನಿಂದ ಪಾಲಿಸಲಾಗಿದೆ ಮತ್ತು ರಕ್ಷಿಸುತ್ತದೆ" ಎಂದು ಅರ್ಜಿಗಳು ವಾದಿಸಿದ್ದವು. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ದೆಹಲಿ ಆಯೋಗವು (DCPCR) ಈ ರೀತಿಯ ಮದುವೆಗಳನ್ನು ಗುರುತಿಸುವಂತೆ ತಿಳಿಸಿದೆ. ಮಕ್ಕಳ ಮೇಲೆ ಇಂತಹ ವಿವಾಹಗಳ ಪ್ರಭಾವದ ಕುರಿತು ನ್ಯಾಯಾಲಯಕ್ಕೆ ಸಹಾಯ ಮಾಡಲು ಮಧ್ಯಸ್ಥಿಕೆ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು.

ಇದನ್ನೂ ಓದಿ: ಸಲಿಂಗ ವಿವಾಹದ ವಿಚಾರಣೆ ಕೈಬಿಡಿ; ನಿರ್ಧಾರದ ಹೊಣೆಯನ್ನು ಸಂಸತ್ತಿಗೆ ಬಿಡಿ: ಬಾರ್‌ ಕೌನ್ಸಿಲ್‌ ಮನವಿ

ಮತ್ತೊಂದೆಡೆ, ಕೇಂದ್ರ ಸರ್ಕಾರ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂಸ್ಥೆ ಎನ್‌ಸಿಪಿಸಿಆರ್ ಮತ್ತು ಜಮಿಯತ್-ಉಲಾಮಾ-ಐ-ಹಿಂದ್ ಎಂಬ ಇಸ್ಲಾಮಿಕ್ ವಿದ್ವಾಂಸರ ಮಂಡಳಿ ಸೇರಿದಂತೆ ಪ್ರತಿವಾದಿಗಳು ಅರ್ಜಿಗಳನ್ನು ವಿರೋಧಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!