
ಪಿಟಿಐ ಮುಂಬೈ (ಫೆ.16): ಮಹಾರಾಷ್ಟ್ರದಲ್ಲಿ ನ್ಯಾಯಾಂಗಕ್ಕೆ ಮೂಲಸೌಕರ್ಯ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಆದರೆ ಕರ್ನಾಟಕದಲ್ಲಿ ಈ ರೀತಿಯ ಪರಿಸ್ಥಿತಿ ಇಲ್ಲ. ಕೋರ್ಟುಗಳಿಗೆ ಮೂಲಸೌಕರ್ಯ ಒದಗಿಸುವಲ್ಲಿ ಕರ್ನಾಟಕ ಸರ್ಕಾರ ಸದಾ ಮುಂದಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ। ಅಭಯ್ ಓಕಾ ಹೇಳಿದ್ದಾರೆ.
ಶನಿವಾರ ಉಪನ್ಯಾಸ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದಲ್ಲಿ ಕೋರ್ಟುಗಳಿಗೆ ಮೂಲಸೌಕರ್ಯ ಪಡೆಯುವಲ್ಲಿ ನಾವು ಪರದಾಡಿದ್ದೆವು. ಮಹಾರಾಷ್ಟ್ರ ಸರ್ಕಾರ ಸೌಲಭ್ಯಗಳನ್ನೇ ನೀಡುತ್ತಿರಲಿಲ್ಲ. ಪುಣೆ ಸಿವಿಲ್ ಕೋರ್ಟ್ನಲ್ಲಿ ಜಡ್ಜ್ಗಳಿಗೆ ಪ್ರತ್ಯೇಕ ಚೇಂಬರ್ ಕೂಡ ಇರಲಿಲ್ಲ’ ಎಂದರು.
ಇದನ್ನೂ ಓದಿ: ಮುಂದಿನ ಚುನಾವಣೆ ಗೆಲ್ಲಬೇಕು ಎಂದರೆ ನಮಗೆ ಸಿದ್ದರಾಮಯ್ಯ ಬೇಕೇಬೇಕು: ಸತೀಶ್ ಜಾರಕಿಹೊಳಿ
ಆದರೆ ಕಳೆದ 5 ವರ್ಷದಲ್ಲಿ ಪರಿಸ್ಥಿತಿ ಬದಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಮಹಾರಾಷ್ಟ್ರದಲ್ಲಿ ಕಳೆದ 4 ವರ್ಷದಿಂದ ಶಿವಸೇನೆ-ಬಿಜೆಪಿ ಸರ್ಕಾರ ಇದೆ ಎಂಬುದು ಇಲ್ಲಿ ಗಮನಾರ್ಹ.
ಕಲಬುರಗಿ ಪೀಠ ಫೈವ್ಸ್ಟಾರ್ ಹೋಟೆಲ್:
ಇದೇ ವೇಳೆ ಕರ್ನಾಟಕ ಸರ್ಕಾರ ಕೋರ್ಟುಗಳಿಗೆ ಅತ್ಯುತ್ತಮ ಮೂಲಸೌಕರ್ಯ ಒದಗಿಸುತ್ತಿದೆ ಎಂದು ಹೊಗಳಿದ ಅವರು ಕಲಬುರಗಿ ಹೈಕೋರ್ಟ್ ಪೀಠವು ಪಂಚತಾರಾ ಹೋಟೆಲ್ನಂತಿದೆ ಎಂದು ಪ್ರಶಂಸಿಸಿದರು.
ಕರ್ನಾಟಕದಲ್ಲಿ ಮಹಾರಾಷ್ಟ್ರದ ರೀತಿಯ ಪರಿಸ್ಥಿತಿ ಇಲ್ಲ. ನಾವು ಕೋರ್ಟುಗಳಿಗೆ ಯಾವ ಸೌಲಭ್ಯ ಕೇಳುತ್ತೇವೋ ಆ ಸೌಲಭ್ಯವನ್ನು ಕರ್ನಾಟಕ ಸರ್ಕಾರ ನೀಡುತ್ತದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ