
ನವದೆಹಲಿ(ನ.8) ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯ ಕುರಿತು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನಿವೃತ್ತಿ ಅಂಚಿನಲ್ಲಿ ಐತಿಹಾಸಿಕ ತೀರ್ಪು ಪ್ರಕಟಿಸಿದ್ದಾರೆ. ಇನ್ನು ಮುಂದೆ ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಕುರಿತು 1967ರಲ್ಲಿ ನೀಡಿದ್ದ ತೀರ್ಪನ್ನು ಕೋರ್ಟ್ ತಳ್ಳಿ ಹಾಕಿದೆ. ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಅಲ್ಪಂ ಸಂಖ್ಯಾತ ಸ್ಥಾನಮಾನ ಖಾಯಂ ಎಂದು ಸುಪ್ರೀಂ ಕೋರ್ಟ್ನ 7 ನ್ಯಾಯಾಧೀಶರ ಪೀಠ ಈ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಶಿಕ್ಷಣ ಸಂಸ್ಥೆ ಯಾರು ಸ್ಥಾಪಿಸಿದರು, ಅದರ ಮೇಲೆ ಸ್ಥಾನಮಾನ ನಿರ್ಧರಿಸಲಾಗುತ್ತದೆ.
ಒಂದು ಸಂಸ್ಥೆ ಅಲ್ಪಸಂಖ್ಯಾತ ಸಮುದಾಯದ್ದೇ ಎಂದು ನಿರ್ಧರಿಸಲು ಅದನ್ನು ಸ್ಥಾಪಿಸಿದವರು ಯಾರು ಅನ್ನೋದು ಇಲ್ಲಿ ಮುಖ್ಯವಾಗುತ್ತದೆ.ಸಂಸ್ಥೆ. ಮೂಲ ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ. ಸಂಸ್ಥೆ ಸ್ಥಾಪಿಸಿದ ಉದ್ದೇಶ, ಆಲೋಚನೆ, ಜಮೀನು, ಹಣ ಹೂಡಿಕೆ, ಅಲ್ಪಸಂಖ್ಯಾತ ಸಮುದಾಯದಿಂದ ಇದಕ್ಕೆ ನೆರವು ಬಂದಿದೆಯಾ? ಎಂದನ್ನೂ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 1967ರಲ್ಲಿ ನೀಡಿದ್ದ ತೀರ್ಪನ್ನು ಕೋರ್ಟ್ ತಳ್ಳಿ ಹಾಕಿದೆ. ಸುಪ್ರೀಂ ಕೋರ್ಟ್ 7 ನ್ಯಾಯಾಧೀಶರ ಪೀಠದಲ್ಲಿ ನಾಲ್ವರು ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯಕ್ಕಿದ್ದ ಸ್ಥಾನಮಾನ ಪರ ಅಭಿಪ್ರಾಯವ್ಯಕ್ತಪಡಿಸಿದ್ದರೆ, ಇನ್ನುಳಿದ ಮೂವರು ನ್ಯಾಯಧೀಶರು ವಿರುದ್ಧ ಅಭಿಪ್ರಾಯಪಟ್ಟಿದ್ದಾರೆ. ಇದು ಸುಪ್ರೀಂ ಕೋರ್ಟ್ ಪೀಠದ ಸರ್ವಾನುಮತದ ಅಭಿಪ್ರಾಯವಲ್ಲ, ಹೀಗಾಗಿ ಎಎಂಯು ಸಂಸ್ಥೆಗೆ ಅಲ್ಪಸಂಖ್ಯಾತ ಸ್ಥಾನ ಮಾನ ಮಂಜೂರು ಮಾಡಬೇಕೆ ಅನ್ನೋದು ನಿರ್ಧರಿಸಲು ಮತ್ತೊಂದು ಪೀಠಕ್ಕೆ ಈ ಪ್ರಕರಣ ವರ್ಗಾವಣೆ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸಂಜೀವ್ ಖನ್ನ ನೇಮಕ!
ಒಂದು ಸಂಸ್ಥೆ ಅಲ್ಪಸಂಖ್ಯಾತ ಸಮುದಾಯದ ಸಂಸ್ಥೆಯಾಗಲು ಅದನ್ನು ಅಲ್ಪಸಂಖ್ಯಾತರು ಸ್ಥಾಪಿಸಿದರೆ ಸಾಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಅಲ್ಪಸಂಖ್ಯಾತ ಸದಸ್ಯರು ಆಡಳಿತ ನಡೆಸಬೇಕು ಎಂದಿಲ್ಲ, ಅಥವಾ ಆಡಳಿತ ಮಂಡಳಿಯಲ್ಲಿ ಅಲ್ಪಸಂಖ್ಯಾತ ಸದಸ್ಯರೇ ಇರಬೇಕು ಎಂದಿಲ್ಲ.ಅಲ್ಪಸಂಖ್ಯಾತ ಸಂಸ್ಥೆಗಳು ಜಾತ್ಯತೀತ ಶಿಕ್ಷಣಕ್ಕೆ ಒತ್ತು ನೀಡಲು ಬಯಸಿದ್ದರೆ ಆಡಳಿತ ಮಂಡಳಿಯಲ್ಲಿ ಅಲ್ಪಸಂಖ್ಯಾತ ಸದಸ್ಯರು ಇರಬೇಕು ಎಂದಿಲ್ಲ ಎಂದು ಪೀಠ ಹೇಳಿದೆ. ಸರ್ಕಾರ ಕಾಯ್ದೆ ಮೂಲಕ ಸಂಸ್ಥೆಯನ್ನು ನಿಯಂತ್ರಿಸುತ್ತಿದೆ ಅನ್ನೋ ಮಾತ್ರಕ್ಕೆ ಸಂಸ್ಥೆಯ ಅಲ್ಪಸಂಖ್ಯಾತ ಗುಣಗಳು ನಶಿಸಿಹೋಗುವುದಿಲ್ಲ. ಸಂವಿಧಾನದ 30ನೇ ವಿದಿ, ಸಂವಿಧಾನ ಜಾರಿಗೆ ಮೊದಲು ಸ್ಥಾಪಿತವಾದ ಅಲ್ಪಸಂಖ್ಯಾತ ಸಂಸ್ಥಗಳಿಗೂ ಅನ್ವಯವಾಗುತ್ತದೆ ಎಂದು ಕೋರ್ಟ್ ಹೇಳಿದೆ. ಸರ್ಕಾರ ನಿಯಂತ್ರಿಸುತ್ತಿದೆ ಅಥವಾ ಅಲ್ಪಸಂಖ್ಯಾತ ಸದಸ್ಯರಲ್ಲದವರೂ ಸಂಸ್ಥೆಯನ್ನು ನಿರ್ವಹಿಸುತ್ತಿದ್ದಾರೆ ಅನ್ನೋ ಕಾರಣಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಅಂತ್ಯಗೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ