ತಮಿಳ್ನಾಡು ಗೌರ್ನರ್‌ ರವಿಗೆ ಸುಪ್ರೀಂಕೋರ್ಟ್‌ ಪ್ರಹಾರ: ಪೊನ್ಮುಡಿಗೆ ಸಚಿವ ಸ್ಥಾನ ನೀಡದ್ದಕ್ಕೆ ಆಕ್ರೋಶ!

By Kannadaprabha NewsFirst Published Mar 22, 2024, 6:48 AM IST
Highlights

ರಾಜ್ಯ ಸಚಿವ ಸಂಪುಟದಲ್ಲಿ ಡಿಎಂಕೆ ಹಿರಿಯ ನಾಯಕ ಕೆ. ಪೊನ್ಮುಡಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲು ನಿರಾಕರಿಸಿದ್ದಕ್ಕಾಗಿ ತಮಿಳುನಾಡು ರಾಜ್ಯಪಾಲ ಆರ್‌.ಎನ್. ರವಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್‌.
 

ನವದೆಹಲಿ (ಮಾ.22): ರಾಜ್ಯ ಸಚಿವ ಸಂಪುಟದಲ್ಲಿ ಡಿಎಂಕೆ ಹಿರಿಯ ನಾಯಕ ಕೆ. ಪೊನ್ಮುಡಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲು ನಿರಾಕರಿಸಿದ್ದಕ್ಕಾಗಿ ತಮಿಳುನಾಡು ರಾಜ್ಯಪಾಲ ಆರ್‌.ಎನ್. ರವಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್‌, ತನ್ನ ಆದೇಶವನ್ನೇ ರವಿ ಉಲ್ಲಂಘಿಸುತ್ತಿದ್ದಾರೆ ಎಂದು ಕಿಡಿಕಾರಿದೆ ಹಾಗೂ ಇನ್ನು 24 ತಾಸಿನಲ್ಲಿ ಪೊನ್ಮುಡಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ನಿರ್ಧರಿಸಬೇಕು ಎಂದು ಖಡಕ್‌ ಸೂಚನೆ ನೀಡಿದೆ.

ಅಕ್ರಮ ಆಸ್ತಿ ಕೇಸಿನಲ್ಲಿ ಈ ಹಿಂದೆ ಪೊನ್ಮುಡಿ ಅವರಿಗೆ 3 ವರ್ಷ ಜೈಲು ಶಿಕ್ಷೆ ಆಗಿತ್ತು. ಹೀಗಾಗಿ ಅವರನ್ನು ಸಂಪುಟದಿಂದ ಕೈಬಿಡಲಾಗಿತ್ತು. ಆದರೆ ಇತ್ತೀಚೆಗೆ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು. ಹೀಗಾಗಿ ಪೊನ್ಮುಡಿ ಅವರನ್ನು ಸಂಪುಟಕ್ಕೆ ಪುನಃ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯಪಾಲ ರವಿ ಅವರಿಂದ ಅನುಮತಿ ಕೋರಿದ್ದರು. ಆದರೆ ಇದಕ್ಕೆ ರವಿ ನಿರಾಕರಿಸಿದ್ದರು.

ಇದನ್ನು ಪ್ರಶ್ನಿಸಿ ಡಿಎಂಕೆ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ। ಡಿ.ವೈ. ಚಂದ್ರಚೂಡ್‌ ಅವರಿದ್ದ ಪೀಠ ರವಿ ನಡೆಗೆ ಅಚ್ಚರಿ ವ್ಯಕ್ತಪಡಿಸಿ, ‘ರಾಜ್ಯಪಾಲರ ನಡವಳಿಕೆಯೇ ಸರಿಯಿಲ್ಲ. ನಮ್ಮ ಆದೇಶವನ್ನೂ ಅವರು ಪಾಲಿಸುತ್ತಿಲ್ಲ. ಪೊನ್ಮುಡಿ ಅವರ ನೇಮಕ ನೈತಿಕವಾಗಿ ಸರಿಯಲ್ಲ ಎಂಬುದು ರವಿ ಅಂಬೋಣ. ಇದನ್ನು ರಾಜ್ಯಪಾಲರು ಹೇಗೆ ಹೇಳಲು ಸಾಧ್ಯ? ಸಂವಿಧಾನದ ಪ್ರಕಾರ ನಡೆದುಕೊಳ್ಳಬೇಕಾಗಿದ್ದು ರಾಜ್ಯಪಾಲರ ಕರ್ತವ್ಯ’ ಎಂದು ಚಾಟಿ ಬೀಸಿತು. ಈ ಹಿಂದೆ, ಕೂಡ ಮಸೂದೆಗಳಿಗೆ ಸಹಿ ಹಾಕದ ರವಿ ಅವರ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ತಪರಾಕಿ ಹಾಕಿ, ಸಚಿವ ಸಂಪುಟದ ಸಲಹೆಯಂತೆ ರಾಜ್ಯಪಾಲರು ನಡೆದುಕೊಳ್ಳಬೇಕು ಎಂದಿತ್ತು.

Lok Sabha Election 2024: ಪಕ್ಷಗಳ ಉಚಿತ ಸ್ಕೀಂ: ಇಂದು ಸುಪ್ರೀಂಕೋರ್ಟ್ ವಿಚಾರಣೆ

ಚುನಾವಣಾ ಬಾಂಡ್‌ ಖರೀದಿ ನಿಷೇಧ: ಚುನಾವಣಾ ಬಾಂಡ್‌ ಖರೀದಿ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ಅಧ್ಯಕ್ಷೆ ಮಾಯಾವತಿ ಸೋಮವಾರ ಶ್ಲಾಘಿಸಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಇಂತಹ ನಿರಂತರ ಪ್ರಯತ್ನಗಳು ಅಗತ್ಯ ಎಂದು ಹೇಳಿದರು. ವಿರೋಧ ಪಕ್ಷಗಳು ತಮ್ಮ ವೈಯಕ್ತಿಕ ಲಾಭ ಮತ್ತು ಸ್ವಾರ್ಥಕ್ಕಾಗಿ ಕೆಲಸ ಮಾಡುತ್ತಿವೆ ಎಂದ ಅವರು, ಉತ್ತರ ಪ್ರದೇಶದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಯಾವುದೇ ರೀತಿಯ ಬಂಡವಾಳಶಾಹಿಗಳ ಹಾಗೂ ಶ್ರೀಮಂತರು ನೀಡುವ ಹಣ ಬಳಸದೇ, ಬಡವರ ಹಾಗೂ ಹಿಂದುಳಿದ ವರ್ಗದ ಏಳಳಿಗೆಗಾಗಿ ಶ್ರಮಿಸಿದೆ ಎಂದರು. ದೇಶದಲ್ಲಿ ಜನ ಸ್ನೇಹಿ ಸರ್ಕಾರ ರಚನೆಯಾದಾಗ ಮಾತ್ರ ಹೆಚ್ಚುತ್ತಿರುವ ಬಡತನ, ನಿರುದ್ಯೋಗ ಮತ್ತು ಹಿಂದುಳಿದಿರುವಿಕೆಯಿಂದ ಹೊರ ಬರಲು ಸಾಧ್ಯ ಎಂದು ಮಾಯಾವತಿ ಹೇಳಿದರು.

click me!