
ನವದೆಹಲಿ(ಸೆ.09): ದೇಶದ ವೈವಿಧ್ಯಮಯ ಸ್ಥಿತಿಗತಿಗಳನ್ನು ಗಮನಿಸಿದರೆ ಮನೆ ಮನೆಗೆ ತೆರಳಿ ಕೋವಿಡ್ 19 ಲಸಿಕೆ ನೀಡುವುದು ಕಾರ್ಯಸಾಧುವಲ್ಲ. ಈಗಿರುವ ಲಸಿಕಾ ನೀತಿಯನ್ನು ರದ್ಧುಗೊಳಿಸುವಂತೆ ಆದೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಅಂಗವಿಕಲರು ಮತು ಅಸಹಾಯಕರಿಗೆ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡುವಂತೆ ಆದೇಶಿಸಬೇಕು ಎಂದು ಯುವ ವಕೀಲರ ಬಾರ್ ಅಸೋಸಿಯೇಷನ್ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ದೇಶಾದ್ಯಂತ ಲಸಿಕೆ ವಿತರಣೆ ಪ್ರಗತಿಯಲ್ಲಿದ್ದು ಶೇ.60ರಷ್ಟುಜನರಿಗೆ ಕನಿಷ್ಠ 1 ಡೋಸ್ ಲಸಿಕೆ ನೀಡಲಾಗಿದೆ. ಲಡಾಖ್ಗೆ ಹೋಲಿಸಿದರೆ ಕೇರಳದ ಸ್ಥಿತಿ ವಿಭಿನ್ನ, ಹಳ್ಳಿಗಳಿಗೆ ಹೋಲಿಸಿದರೆ ನಗರ ಪ್ರದೇಶಗಳ ಪರಿಸ್ಥಿತಿ ಭಿನ್ನ. ಈ ರೀತಿಯ ವೈವಿಧ್ಯಮಯ ದೇಶದಲ್ಲಿ ಮನೆ ಮನೆಗೆ ತೆರಳಿ ಲಸಿಕೆ ನೀಡುವಂತೆ ಆದೇಶಿಸಲು ಸಾಧ್ಯವಿಲ್ಲ’ ಎಂದಿತು.
ಇದು ಆಡಳಿತಾತ್ಮಕ ವಿಷವಾದ್ದರಿಂದ ಈಗಿರುವ ಲಸಿಕಾ ನೀತಿಯನ್ನು ರದ್ಧುಗೊಳಿಸಲು ಸಾಧ್ಯವಿಲ್ಲ ಎಂದೂ ಹೇಳಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ