ಪಾಪಿ ಅರ್ಜಿ ತಿರಸ್ಕಾರ: ನೇಣಿಗೆ ಕೊರಳೊಡ್ಡುವುದೊಂದೇ ಮಾರ್ಗ!

Suvarna News   | Asianet News
Published : Jan 31, 2020, 04:59 PM IST
ಪಾಪಿ ಅರ್ಜಿ ತಿರಸ್ಕಾರ: ನೇಣಿಗೆ ಕೊರಳೊಡ್ಡುವುದೊಂದೇ ಮಾರ್ಗ!

ಸಾರಾಂಶ

ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲೇ ಗತಿ| ಪವನ್ ಗುಪ್ತಾ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್| ಅಪರಾಧ ನಡೆದಾಗ ಅಪ್ರಾಪ್ತನಾಗಿದ್ದೆ ಎಂದ ಪವನ್ ಗುಪ್ತಾ| ನಾಳೆ(ಫೆ.01) ನಾಲ್ವರೂ ಅಪರಾಧಿಗಳಿಗೆ ತಿಹಾರ್ ಜೈಲಿನಲ್ಲಿ ಗಲ್ಲು| 

ನವದೆಹಲಿ(ಜ.31): ಗಲ್ಲುಶಿಕ್ಷೆ ಪ್ರಶ್ನಿಸಿ ನಿರ್ಭಯಾ ಹತ್ಯಾಚಾರಿಗಳಲ್ಲಿ ಒಬ್ಬನಾದ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಅಪರಾಧ ಮಾಡಿದಾಗ ತಾನು ಅಪ್ರಾಪ್ತನಾಗಿದ್ದು, ಈ ಹಿನ್ನೆಲೆಯಲ್ಲಿ ತನ್ನ ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಕೋರಿ ಪವನ್ ಗುಪ್ತಾ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದ.

ಆದರೆ ಪವನ್ ಗುಪ್ತಾ ವಾದವನ್ನು ಒಪ್ಪದ ಸರ್ವೋಚ್ಛ ನ್ಯಾಯಾಲಯ, ಆತನ ಅರ್ಜಿಯನ್ನು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ರಿಹಾರ್ ಜೈಲಿನಲ್ಲಿ ನಾಲ್ವರೂ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಸಿದ್ಧತೆ ಆರಂಭವಾಗಿದೆ.

ಗಲ್ಲು ಮೂವರಿಗೋ, ಎಲ್ಲರಿಗೋ?: ಗಂಟೆಯಲ್ಲಿನ ನಿರ್ಧಾರ!

ನಾಳೆ(ಫೆ.01) ಬೆಳಗ್ಗೆ 6 ಗಂಟೆಗೆ ನಾಲ್ವರೂ ಅಪರಾಧಿಗಳನ್ನು ಗಲ್ಲಿಗೇರಿಸಲಾಗುವುದು ಎಂದು ತಿಹಾರ್ ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?