ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಾಂತನಗೌಡರ ನಿಧನ

Suvarna News   | Asianet News
Published : Apr 25, 2021, 09:08 AM ISTUpdated : Apr 25, 2021, 09:13 AM IST
ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಾಂತನಗೌಡರ ನಿಧನ

ಸಾರಾಂಶ

 ಕರ್ನಾಟಕ ಮೂಲದ ಸುಪ್ರೀಂಕೋರ್ಟ್‌ ನ್ಯಾಯಾಧೀಶ ನ್ಯಾ.ಮೋಹನ್‌.ಎಂ.ಶಾಂತನಗೌಡರ (63) ಶನಿವಾರ ವಿಧಿವಶರಾಗಿದ್ದಾರೆ. ಕೊರೋನಾ ಸೋಂಕು ಹಾಗೂ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. 

ನವದೆಹಲಿ (ಏ.25): ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಕರ್ನಾಟಕ ಮೂಲದ ಸುಪ್ರೀಂಕೋರ್ಟ್‌ ನ್ಯಾಯಾಧೀಶ ನ್ಯಾ.ಮೋಹನ್‌.ಎಂ.ಶಾಂತನಗೌಡರ (63) ಶನಿವಾರ ವಿಧಿವಶರಾಗಿದ್ದಾರೆ. 

ಹಾವೇರಿ ಜಿಲ್ಲೆ ಹಿರೇಕೆರೂರ ತಾಲೂಕು ಚಿಕ್ಕೇರೂರಿನವರಾದ ಅವರು 3 ದಿನ ಹಿಂದೆ ಅನಾರೋಗ್ಯದಿಂದ ಹರ್ಯಾಣದ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು.  

ಕ್ಯಾನ್ಸರ್‌ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು ಎಂದು ಸುಪ್ರೀಂಕೋರ್ಟ್‌ನ ಸಹಾಯಕ ರಿಜಿಸ್ಟ್ರಾರ್‌ ಗಗನ್‌ ಸೋನಿ ತಿಳಿಸಿದ್ದಾರೆ.

 

ಕೋವಿಡ್‌ ನಿಗ್ರಹ ರಾಷ್ಟ್ರೀಯ ನೀತಿ ವಿಚಾರಣೆಯಿಂದ ಸಾಳ್ವೆ ಹಿಂದಕ್ಕೆ! .

ಮೋಹನ್ ಎಂ.ಶಾಂತನಗೌಡರ್ 

ಮೇ.5 1958ರಲ್ಲಿ ಜನಿಸಿದ್ದ ನ್ಯಾ. ಮೋಹನ್ ಎಂ.ಶಾಂತನಗೌಡರ್ ಸೆಪ್ಟೆಂಬರ್ 1980ರಲ್ಲಿ ವಕೀಲರಾಗಿ ಕಾರ್ಯಾರಂಭ ಮಾಡಿದ್ದರು. ಬೆಂಗಳೂರಿಗೆ ಮೊದಲು ಧಾರವಾರಡದಲ್ಲಿಯೇ ಒಂದು ವರ್ಷ ಅಭ್ಯಾಸ ನಡೆಸಿದ್ದರು. 

2003ರಲ್ಲಿ ರಾಜ್ಯ ಹೈ ಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2004ರಲ್ಲಿ  ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದರು. 2016ರಲ್ಲಿ ಕೇರಳ ಹೈ ಕೋರ್ಟ್ ಮುಖ್ಯ ನ್ಯಾಮೂರ್ತಿಯಾಗಿ ಸೇವೆ ಸಲ್ಲಿಸಿದ್ದು ಇಲ್ಲಿನ ಒಂದು ವರ್ಷದ ಕಾರ್ಯದ ಬಳಿಕ ಸುಪ್ರೀಂ ಕೋರ್ಟ್ ನ್ಯಾಮೂರ್ತಿಯಾಗಿ ನೇಮಕಗೊಂಡರು. 

2017ರಲ್ಲಿ ನ್ಯಾ. ಮೋಹನ್ ಎಂ ಶಾಂತನಗೌಡರ್ ಸುಪ್ರೀಂಕೋರ್ಟ್‌ಗೆ ನೇಮಕಗೊಂಡಿದ್ದು, 2023ರ ಮೇ 4ರ ವರೆಗೆ ಅವರ ಸೇವಾವಧಿ ಇತ್ತು. ಇದೀಗ ಅನಾರೋಗ್ಯ ಮೃತರಾಗಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?