ಪ್ರಚೋದಕ ಟೀವಿ ಕಾರ‍್ಯಕ್ರಮ ನಿರ್ಬಂಧ

Kannadaprabha News   | Asianet News
Published : Jan 29, 2021, 10:03 AM IST
ಪ್ರಚೋದಕ ಟೀವಿ ಕಾರ‍್ಯಕ್ರಮ ನಿರ್ಬಂಧ

ಸಾರಾಂಶ

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಟೀವಿ ಕಾರ್ಯಕ್ರಮಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಸುಪ್ರಿಂ ಕೋರ್ಟ್ ಕೇಂದ್ರವನ್ನ ತರಾಟೆಗೆ ತೆಗೆದುಕೊಂಡಿದೆ.  ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ಸುದ್ದಿ ವಾಹಿನಿಗಳು ಇನ್ನೊಬ್ಬರನ್ನು ಪ್ರಚೋದಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡಬಾರದು ಎಂದಿದೆ. 

ನವದೆಹಲಿ (ಜ.29): ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಟೀವಿ ಕಾರ್ಯಕ್ರಮಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಸರ್ಕಾರವನ್ನು ಸುಪ್ರೀಂಕೋರ್ಟ್‌  ತರಾಟೆಗೆ ತೆಗೆದುಕೊಂಡಿದೆ.

ಕಳೆದ ವರ್ಷ ಕೊರೋನಾ ವೈರಸ್‌ ಆರಂಭಿಕ ಹಂತದಲ್ಲಿ ಇದ್ದಾಗ ತಬ್ಲೀಘಿ ಜಮಾತ್‌ ಸಭೆಯ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸುವ ವೇಳೆ ಸುಪ್ರೀಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಟಿಆರ್‌ಪಿಗಾಗಿ ಅರ್ನಬ್‌ 48 ಲಕ್ಷ ರೂ. ಕೊಟ್ಟಿದ್ರು: ಬಾರ್ಕ್ ಮಾಜಿ ಸಿಇಒ! .

ರೈತ ಪ್ರತಿಭಟನೆ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಟ್ರ್ಯಾಕ್ಟರ್‌ ಪರೇಡ್‌ ಸಂದರ್ಭದಲ್ಲಿ ದೆಹಲಿಯ ಕೆಲವು ಭಾಗಗಳಲ್ಲಿ ಸರ್ಕಾರ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಿದ ಕ್ರಮವನ್ನು ಉಲ್ಲೇಖಿಸಿದ ಸುಪ್ರೀಂಕೋರ್ಟ್‌, ‘ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ಸುದ್ದಿ ವಾಹಿನಿಗಳು ಇನ್ನೊಬ್ಬರನ್ನು ಪ್ರಚೋದಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡಬಾರದು. 

ಸುದ್ದಿವಾಹಿನಿಗಳು ಘಟನೆಯ ಸತ್ಯಯುತ ಹಾಗೂ ಸಮಂಜಸ ವರದಿಗಳನ್ನು ಪ್ರಸಾರ ಮಾಡುವ ಅಗತ್ಯವಿದೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಇಂತಹ ಪ್ರಚೋದನಕಾರಿ ಕಾರ್ಯಕ್ರಮಗಳಿಗೆ ಸರ್ಕಾರ ಕಡಿವಾಣ ಹಾಕಬೇಕು’ ಎಂದು ಹೇಳಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು