ರಥ ಯಾತ್ರೆಗೆ ಬ್ರೇಕ್, ಅನುಮತಿ ನೀಡಿದರೆ ಪುರಿ ಜಗನ್ನಾಥ ಕ್ಷಮಿಸಲ್ಲ ಎಂದ ಸುಪ್ರೀಂ ಕೋರ್ಟ್!

Suvarna News   | Asianet News
Published : Jun 18, 2020, 08:44 PM IST
ರಥ ಯಾತ್ರೆಗೆ ಬ್ರೇಕ್, ಅನುಮತಿ ನೀಡಿದರೆ ಪುರಿ ಜಗನ್ನಾಥ ಕ್ಷಮಿಸಲ್ಲ ಎಂದ ಸುಪ್ರೀಂ ಕೋರ್ಟ್!

ಸಾರಾಂಶ

ಕೊರೋನಾ ವೈರಸ್ ಕಾರಣ ಕೋರ್ಟ್ ಮೆಟ್ಟಿಲೇರಿದ್ದ ಪುರಿ ಜಗನ್ನಾಥ ರತ ಯಾತ್ರೆಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಇಷ್ಟೇ ಅಲ್ಲ ಅನುಮತಿ ನೀಡಿದರೆ ಜಗನ್ನಾಥ ಕ್ಷಮಿಸಲ್ಲ ಎಂದು ಸುಪ್ರೀಂ ಹೇಳಿದೆ.

ನವದೆಹಲಿ(ಜೂ.18): ವಿಶ್ವವಿಖ್ಯಾತ ಪುರಿ ಜಗನ್ನಾಥ ಮಂದಿರದ ರತ ಯಾತ್ರೆಗೆ ಬ್ರೇಕ್ ಬಿದ್ದಿದೆ. ಜೂನ್ 23 ರಿಂದ 10 ದಿನಗಳ ಕಾಲ ನಡೆಯಬೇಕಿದ್ದ ವಾರ್ಷಿಕ ರಥ ಯಾತ್ರೆ ಆಯೋಜಿಸಲು ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಡೆ, ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ಎಸ್ ಬೋಪಣ್ಣ ಒಳಗೊಂಡ ಪೀಠ ಮಹತ್ವದ ಆದೇಶ ನೀಡಿದೆ.

ಮಾಸ್ಕ್ ಡೇ: ಸಿಎಂ ಜೊತೆ ಸೆಲೆಬ್ರಿಟಿಗಳ ಸಾಥ್, ಇಲ್ಲಿವೆ ಫೋಟೋಸ್.

ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸುಪ್ರೀಂ ಕೋರ್ಟ್ ಈ ಕ್ರಮ ತೆಗೆದುಕೊಳ್ಳಬೇಕಿದೆ. ಪುರಿ ಜಗನ್ನಾಥ ಮಂದಿರ ವಾರ್ಷಿಕ ರಥ ಯಾತ್ರೆಗೆ ಅನುಮತಿ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಪುರಿ ಜಗನ್ನಾಥ ನಮ್ಮನ್ನು ಕ್ಷಮಿಸಲ್ಲ ಎಂದು ಪೀಠ ಹೇಳಿದೆ. 

ಕೊರೋನಾಗೆ ವ್ಯಾಕ್ಸಿನ್: ಬ್ರಿಟನ್ ವೈದ್ಯರ ತಂಡದಲ್ಲಿ ಕೊಡಗಿನ ವೈದ್ಯೆ

ಪುರಿ ಜಗನ್ನಾಥ ಮಂದಿರದ ವಾರ್ಷಿಕ ರಥ ಯಾತ್ರೆಗೆ ಲಕ್ಷಕ್ಕೂ ಅಧಿಕ ಮಂದಿ ಸೇರುತ್ತಾರೆ. ಹೀಗಾಗಿ ಎನ್‌ಜಿಯೋ ರಥ ಯಾತ್ರೆ ನಡೆಸದಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಒಡಿಶಾ ಸರ್ಕಾರಕ್ಕೆ ಕಟ್ಟು ನಿಟ್ಟಿನ ಆದೇಶ ನೀಡಿದೆ. ಯಾವುದೇ ಕಾರಣಕ್ಕೂ ರಥ ಯಾತ್ರೆಗೆ ಅನುಮತಿ ನೀಡಬಾರದು. ಇಷ್ಟೇ ಅಲ್ಲ ಮೆರವಣಿಗೆ ಸೇರಿದಂತೆ ಭಕ್ತರು ಸೇರುವಂತ ಯಾವುದೇ ಚಟುವಟಿಕೆ ನಡೆಸಬಾರದು ಎಂದು ಸೂಚಿಸಿದೆ.

ಲಕ್ಷ ಲಕ್ಷ ಭಕ್ತರು ಸೇರಿದರೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬಲಿದೆ. ಇದು ಆತಂಕಕಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?