
ನವದೆಹಲಿ (ಜು.17): ಅಪರಾಧ ಪ್ರಕರಣಗಳಲ್ಲಿ ಜೈಲು ಸೇರುವ ಆರೋಪಿಗಳಿಗೆ ಸುಪ್ರೀಂಕೋರ್ಟ್ನಿಂದ ಜಾಮೀನು ದೊರೆತರೂ ಆದೇಶದ ಪ್ರತಿಯು ಜೈಲಧಿಕಾರಿಗಳಿಗೆ ಸಿಗುವುದು ತಡವಾಗುವ ಕಾರಣ ಬಿಡುಗಡೆ ವಿಳಂಬವಾಗುವುದನ್ನು ತಪ್ಪಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ.
ಈ ಸಂಬಂಧ ಜೈಲಧಿಕಾರಿಗಳಿಗೆ ಜಾಮೀನು ಆದೇಶದ ಪ್ರತಿಯನ್ನು ಡಿಜಿಟಲ್ ರೂಪದಲ್ಲಿ ರವಾನಿಸುವ ವ್ಯವಸ್ಥೆಯನ್ನು ತಿಂಗಳೊಳಗೆ ಜಾರಿಗೆ ತರಲು ಸುಪ್ರೀಂಕೋರ್ಟ್ನ ಸೆಕ್ರೆಟರಿ ಜನರಲ್ಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಪೀಠ ಆದೇಶ ನೀಡಿದೆ. ಈ ಆದೇಶ ಜಾರಿಗೆ ಬಂದ ನಂತರ ಜೈಲಧಿಕಾರಿಗಳಿಗೆ ಇಂಟರ್ನೆಟ್ ಮುಖಾಂತರ ಡಿಜಿಟಲ್ ರೂಪದಲ್ಲಿ ಜಾಮೀನು ಆದೇಶದ ಪ್ರತಿ ಲಭಿಸಲಿದ್ದು, ತಕ್ಷಣ ಆರೋಪಿಗಳನ್ನು ಬಿಡುಗಡೆ ಮಾಡಬಹುದಾಗಿದೆ.
ದೇಶದ್ರೋಹ ಕಾಯ್ದೆ ಬಗ್ಗೆ ಸುಪ್ರೀಂ ಕೋರ್ಟ್ ಗರಂ!
ಈ ಆದೇಶ ನೀಡುವ ವೇಳೆ ಮಹತ್ವದ ಅಭಿಪ್ರಾಯ ಪ್ರಕಟಿಸಿರುವ ನ್ಯಾ. ರಮಣ, ‘ಈ ಡಿಜಿಟಲ್ ಯುಗದಲ್ಲಿ ನಾವು ಇನ್ನೂ ಪಾರಿವಾಳದ ಮೂಲಕ ಪತ್ರ ಸಾಗಿಸುತ್ತಿದ್ದೇವೆ’ ಎಂದು ಕಿಡಿಕಾರಿದ್ದಾರೆ.
ಜಾಮೀನು ಆದೇಶವನ್ನು ಡಿಜಿಟಲ್ ರೂಪದಲ್ಲಿ ರವಾನಿಸಲು ಎಲ್ಲಾ ಜೈಲುಗಳಲ್ಲೂ ಇಂಟರ್ನೆಟ್ ಸಂಪರ್ಕ ಇದೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಕರಿಸಲು ಹಿರಿಯ ವಕೀಲ ದುಷ್ಯಂತ ದವೆ ಅವರನ್ನು ನೇಮಿಸಿದೆ. ಈ ವಿಷಯವನ್ನು ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ