
ನವದೆಹಲಿ (ಮಾ.23) ಕಾನೂನು ವಿದ್ಯಾರ್ಥಿ ವೇಗವಾಗಿ ಕಾರು ಚಲಾಯಿಸಿ ಮಾಡಿದ ಅಪಘಾತದಲ್ಲಿ ಮಹಿಳೆ ಮೃತಪಟ್ಟರೆ, 7 ಮಂದಿ ಗಾಯಗೊಂಡದ್ದರು. ಈ ಪ್ರಕರಣ ಸಂಬಂಧ ಗುಜರಾತ್ ಹೈಕೋರ್ಟ್ ಆರೋಪಿಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಆದೆರೆ ಸುಪ್ರೀಂ ಕೋರ್ಟ್ ಕೂಡ ಆರೋಪಿಯ ಜಾಮೀನು ಎತ್ತಿ ಹಿಡಿದಿದೆ.ಆತ ಉದ್ದೇಶ ಪೂರ್ವಕವಾಗಿ ಮಾಡಿಲ್ಲ, ನಶೆಯಿಂದ ಮಾಡಿದ್ದಾನೆ ಎಂದು ಆರೋಪಿಗೆ ಜಾಮೀನು ನೀಡಿದೆ.
2025ರ ಮಾರ್ಚ್ 13ರಲ್ಲಿ ಗುಜರಾತ್ ಮೂಲದ ವಿದ್ಯಾರ್ಥಿ ರಕ್ಷಿತ್ ಚೌರಾಸಿಯಾ ನಶೆಯಲ್ಲಿ ಅತೀ ವೇಗವಾಗಿ ಕಾರು ಚಲಾಯಿಸಿ ಅಪಘಾತ ಮಾಡಿದ್ದಾನೆ. ಈ ಪ್ರಕರಣ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಆದೇಶ ಹಲವರನ್ನು ಅಚ್ಚರಿಗೊಳಿಸಿದೆ. ವಿದ್ಯಾರ್ಥಿ ಡ್ರಗ್ಸ್ ನಶೆಯಲ್ಲಿ ಕಾರು ಅಪಘಾತ ಮಾಡಿದ್ದಾನೆ. ಆತ ಉದ್ದೇಶಪೂರ್ವಕವಾಗಿ ಮಾಡಿಲ್ಲ. ಡ್ರಗ್ಸ್ ನಶೆಯಲ್ಲಿ ನಡೆದು ಹೋದ ಘಟನೆ ಎಂದು ಆರೋಪಿಗೆ ನೀಡಿದ ಜಾಮೀನು ಆದೇಶವನ್ನು ಎತ್ತಿ ಹಿಡಿದಿದೆ.
ತಮ್ಮ ಪಾಡಿಗೆ ನಡೆದು ಹೋಗುತ್ತಿದ್ದವರ ಮೇಲೆ ರಕ್ಷಿತ್ ಚೌರಾಸಿಯಾ ಕಾರು ಹರಿಸಿದ್ದ. ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಸುಪ್ರೀಂ ಕೋರ್ಟ್ ಜಾಮೀನು ಆದೇಶ ಎತ್ತಿಹಿಡಿದ ಬೆನ್ನಲ್ಲೇ ಕುಟುಂಬಸ್ಥರು ತೀವ್ರ ನಿರಾಸೆ ವ್ಯಕ್ತಪಡಿಸಿದ್ದಾರೆ. ನಮ್ಮವರನ್ನು ಕಳೆದುಕೊಂಡಿದ್ದೇವೆ. ಜೈಲಿನಲ್ಲಿ ಪಾಠ ಕಲಿಯಲಿ ಎಂದು ಬಯಸಿದರೆ, ಜಾಮೀನು ನೀಡಲಾಗಿದೆ. ಇದು ತೀವ್ರ ದುಃಖ ತಂದಿದೆ ಎಂದಿದ್ದಾರೆ.
ಅಪಘಾತದಲ್ಲಿ ಒಟ್ಟು 8 ಮಂದಿ ಗಾಯಗೊಂಡಿದ್ದರು. ಈ ಪೈಕಿ ಮಹಿಳೆ ಮೃತಪಟ್ಟಿದ್ದರು. ಅಪಘಾತದಿಂದ ಪಕ್ಕದಲ್ಲಿ ಕುಳಿತಿದ್ದ ಗೆಳೆಯ ಆಕ್ರೋಶಗೊಂಡಿದ್ದ. ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಾನೆ ಎಂದು ಆಕ್ರೋಶಗೊಂಡಿದ್ದಾನೆ. ಆದರೆ ಆರೋಪಿ ಅಪಘಾತಗೊಂಡ ಬಳಿಕ ಕಾರಿನಿಂದ ಹೊರಬಂದು ಗೆಳೆಯ ಸೇರಿ ಸಿಕ್ಕ ಸಿಕ್ಕವರ ಮೇಲೆ ಎಗರಾಡಿದ್ದ. ನಶೆ ಇಳಿದರೂ ಈತನಿಗೆ ತಾನು ದೊಡ್ಡ ತಪ್ಪು ಮಾಡಿದ್ದೇನೆ ಅನ್ನೋ ಯಾವ ಭಾವನೆಯೂ ಇರಲಿಲ್ಲ. ಈನತ ವಿಡಿಯೋಗಳು ಸಾಕಷ್ಟು ವೈರಲ್ ಆಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ