ಕಾಂಚ ಗಚ್ಚಿಬೌಲಿ ಮರಗಳ ಮಾರಣಹೋಮ; 'ಮುಖ್ಯ ಕಾರ್ಯದರ್ಶಿ ಜೈಲಿಗೆ ಹೋಗ್ತಾನೆ' ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್‌!

Published : Apr 03, 2025, 07:16 PM ISTUpdated : Apr 03, 2025, 07:19 PM IST
ಕಾಂಚ ಗಚ್ಚಿಬೌಲಿ ಮರಗಳ ಮಾರಣಹೋಮ; 'ಮುಖ್ಯ ಕಾರ್ಯದರ್ಶಿ ಜೈಲಿಗೆ ಹೋಗ್ತಾನೆ' ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್‌!

ಸಾರಾಂಶ

ಹೈದರಾಬಾದ್‌ ವಿವಿಗೆ ಸೇರಿದ ಕಾಂಚ ಗಚ್ಚಿಬೌಲಿ  ಅರಣ್ಯ ಪ್ರದೇಶದಲ್ಲಿ ಮರಗಳ ಮಾರಣಹೋಮದ ವರದಿಗಳ ಬಗ್ಗೆ ಅಮಿಕಸ್ ಕ್ಯೂರಿ ಕೆ ಪರಮೇಶ್ವರ್ ಮಾಹಿತಿ ನೀಡಿದ ನಂತರ ನ್ಯಾಯಾಲಯವು ಈ ವಿಷಯವನ್ನು ಗಮನಕ್ಕೆ ತೆಗೆದುಕೊಂಡಿತು.

ನವದೆಹಲಿ (ಏ.3): ಹೈದರಾಬಾದ್‌ನ ಕಾಂಚ ಗಚಿಬೌಲಿಯಲ್ಲಿ ಅಧಿಕಾರಿಗಳಿಂದ ಉಂಟಾದ ಅರಣ್ಯನಾಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತೆಲಂಗಾಣ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಠಿಣ ಎಚ್ಚರಿಕೆ ನೀಡಿದೆ. ಕಳೆದ ಮಾರ್ಚ್‌ 4 ರಂದದು ನ್ಯಾಯಾಲಯವು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅರಣ್ಯ ಪ್ರದೇಶಗಳನ್ನು ಗುರುತಿಸಲು ತಜ್ಞರ ಸಮಿತಿಗಳನ್ನು ರಚಿಸುವಂತೆ ಆದೇಶಿಸಿತ್ತು ಮತ್ತು ಅರಣ್ಯ ಭೂಮಿ ಕಡಿತ ಸೇರಿದಂತೆ ಯಾವುದೇ ಲೋಪಕ್ಕೆ ಮುಖ್ಯ ಕಾರ್ಯದರ್ಶಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿತ್ತು.

ತೆಲಂಗಾಣ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದ ಕೆಲವೇ ದಿನಗಳಲ್ಲಿ, ಗುರುತಿಸುವ ಪ್ರಕ್ರಿಯೆಯನ್ನು ಕೈಗೊಳ್ಳದೆಯೇ ಕಾಂಚ ಗಚ್ಚಿಬೌಲಿಯಲ್ಲಿ ಅರಣ್ಯದ ಮಾರಣಹೋಮವನ್ನು ಪ್ರಾರಂಭಿಸುವ "ಆತಂಕಕಾರಿ ತುರ್ತು"ಯನ್ನು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಪ್ರಶ್ನೆ ಮಾಡಿದ.

"ತೆಲಂಗಾಣದ ಮುಖ್ಯ ಕಾರ್ಯದರ್ಶಿ ಸರೋವರದ ಬಳಿ ಅದೇ ಸ್ಥಳದಲ್ಲಿ ನಿರ್ಮಿಸಲಾಗುವ ತಾತ್ಕಾಲಿಕ ಜೈಲಿಗೆ ಹೋಗುತ್ತಾರೆ... ಮುಖ್ಯ ಕಾರ್ಯದರ್ಶಿಯವರು ರಾಜ್ಯ ಆತಿಥ್ಯವನ್ನು ಆನಂದಿಸಲು ಬಯಸಿದರೆ, ಇದಕ್ಕೆ ಯಾರೂ ಸಹಾಯ ಮಾಡಲು ಸಾಧ್ಯವಿಲ್ಲ" ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ. "ಇದು ತುಂಬಾ ಗಂಭೀರವಾದ ವಿಷಯ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ" ಎಂದು ಹೇಳಿತು.

ಇಂದು ಬೆಳಿಗ್ಗೆ, ಸ್ಥಳದಲ್ಲಿ ಅರಣ್ಯನಾಶದ ವರದಿಗಳನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಗಮನಿಸಿತು ಮತ್ತು ಅಲ್ಲಿ ಇನ್ನು ಮುಂದೆ ಮರಗಳನ್ನು ಕಡಿಯದಂತೆ ನೋಡಿಕೊಳ್ಳುವಂತೆ ತೆಲಂಗಾಣ ಸರ್ಕಾರಕ್ಕೆ ನಿರ್ದೇಶನ ನೀಡಿತು.

Telangana: 400 ಎಕರೆ ವಿವಿ ಭೂಮಿಯನ್ನು 10 ಸಾವಿರ ಕೋಟಿಗೆ ಹರಾಜು ಹಾಕಲು ಮುಂದಾದ ಕಾಂಗ್ರೆಸ್‌ ಸರ್ಕಾರ!

ತೆಲಂಗಾಣ ಹೈಕೋರ್ಟ್ ರಿಜಿಸ್ಟ್ರಾರ್ (ನ್ಯಾಯಾಂಗ) ಅವರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಮಧ್ಯಾಹ್ನ 3:30 ರೊಳಗೆ ಉನ್ನತ ನ್ಯಾಯಾಲಯಕ್ಕೆ ಮಧ್ಯಂತರ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿತು. ನಂತರ ಅಧಿಕಾರಿ ಸ್ಥಳಕ್ಕೆ ಧಾವಿಸಿ ವರದಿಯನ್ನು ಸಲ್ಲಿಸಿದರು, ನಂತರ ಸಂಜೆ 4 ಗಂಟೆ ಸುಮಾರಿಗೆ ಈ ವಿಷಯವನ್ನು ಮತ್ತೆ ವಿಚಾರಣೆಗೆ ಕೈಗೆತ್ತಿಕೊಳ್ಳಲಾಯಿತು. ಅರಣ್ಯ ಪ್ರದೇಶದಲ್ಲಿ ಬೃಹತ್ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವರದಿ ಬಹಿರಂಗಪಡಿಸಿದೆ.

'ನಮೋ' ವಿರುದ್ಧದ ಡಾಕ್ಯುಮೆಂಟರಿ ಪ್ರದರ್ಶನ: ಅಂತರಾಷ್ಟ್ರೀಯ ಪಿತೂರಿಗೆ ಕಿಚ್ಚು ಹಚ್ಚಿದ ವಿವಿಗಳು?

ಸ್ಥಳದ ಸಮೀಪದಲ್ಲಿ ಒಂದು ಸರೋವರವಿದೆ ಎಂದು ಅದು ಗಮನಿಸಿದೆ. ಈ ಹಿನ್ನೆಲೆಯಲ್ಲಿ, ನ್ಯಾಯಾಲಯವು ಈ ವಿಷಯದ ಬಗ್ಗೆ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಲು ಆದೇಶಿಸಿತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Dhurandhar Review: ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ ರಣ್‌ವೀರ್‌ ಸಿಂಗ್‌ ಸಿನಿಮಾ!
ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ