ಇನ್ಸ್ಟಾ ಖಾತೆಯಲ್ಲಿ ನೂಪುರ್ ಫೋಟೋ ಅಪ್ಲೋಡ್‌ ಮಾಡಿದ ಉದ್ಯಮಿಗೆ ಕೊಲೆ ಬೆದರಿಕೆ!

Published : Jul 16, 2022, 12:37 PM IST
ಇನ್ಸ್ಟಾ ಖಾತೆಯಲ್ಲಿ ನೂಪುರ್ ಫೋಟೋ ಅಪ್ಲೋಡ್‌ ಮಾಡಿದ ಉದ್ಯಮಿಗೆ ಕೊಲೆ ಬೆದರಿಕೆ!

ಸಾರಾಂಶ

ಸೂರತ್ ಮೂಲದ ಉದ್ಯಮಿಯೊಬ್ಬರು ನೂಪುರ್ ಶರ್ಮಾ ಅವರ ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿರುವುದಾಗಿ ಹೇಳಿದ್ದಾರೆ. ಅಪ್‌ಲೋಡ್ ಮಾಡಿದ ನಂತರ 7 ಜನ ಆತನಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.  

ಮುಂಬೈ(ಜು.16): ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ನೂಪುರ್ ಶರ್ಮಾ ಅವರ ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿರುವುದು ಉದ್ಯಮಿಯೊಬ್ಬರಿಗೆ ಬಾರೀ ಹೊಡೆತ ಕೊಟ್ಟಿದೆ. Instagram ನಲ್ಲಿ ಪೋಸ್ಟ್‌ ಪೋಸ್ಟ್ ಮಾಡಿದ ನಂತರ, ವ್ಯಕ್ತಿಗೆ ಕೊಲೆ ಬೆದರಿಕೆಗಳು ಬಂದಿವೆ, ಇದಾದ ಬೆನ್ನಲ್ಲೇ ಕೆಲವರನ್ನು ಬಂಧಿಸಲಾಗಿದೆ. ಫೋಟೋ ಅಪ್ಲೋಡ್ ಮಾಡಿದ ನಂತರ 7 ಜನರು ವ್ಯಕ್ತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಉದ್ಯಮಿ ಜಿಲ್ಲೆಯಲ್ಲಿ ಮನರಂಜನಾ ಪಾರ್ಕ್ ನಡೆಸುತ್ತಿದ್ದಾರೆ ಎಂದು ಸೂರತ್ ಪೊಲೀಸರು ಹೇಳಿದ್ದಾರೆ. ಫೋಟೋ ಅಪ್‌ಲೋಡ್ ಮಾಡಿದ ತಕ್ಷಣ ಅವರಿಗೆ ಕೊಲೆ ಬೆದರಿಕೆಗಳು ಬರಲಾರಂಭಿಸಿವೆ.

ಇನ್ನು ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಲಾಗಿದೆ ಎಂದು ಉಮ್ರಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಜೆ.ಆರ್.ಚೌಧರಿ ತಿಳಿಸಿದ್ದಾರೆ. ಸೂರತ್ ಪೊಲೀಸರು ಬಂಧಿಸಿರುವ ಮೂವರನ್ನು ಮೊಹಮ್ಮದ್ ಅಯಾನ್ ಅತಶ್ಬಾಜಿವಾಲಾ, ರಶೀದ್ ಭುರಾ ಮತ್ತು ಆಲಿಯಾ ಮೊಹಮ್ಮದ್ ಎಂಬ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿಗಳೆಲ್ಲರೂ ಸೂರತ್ ನಿವಾಸಿಗಳು.

ಯಾವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲು?

ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ) ಮತ್ತು 506, 507 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಗಿನ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಕಳೆದ ತಿಂಗಳು ಟಿವಿ ಚರ್ಚೆಯ ವೇಳೆ ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ದೊಡ್ಡ ವಿವಾದ ಸೃಷ್ಟಿಸಿದ್ದರು.

ಕೊಲೆ ಬೆದರಿಕೆ ಬಂದಿದ್ದು ಏಕೆ?

ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಅಮ್ಯೂಸ್‌ಮೆಂಟ್ ಪಾರ್ಕ್‌ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಜನರು ನೂಪುರ್ ಶರ್ಮಾ ಅವರ ಚಿತ್ರವನ್ನು ಅಪ್‌ಲೋಡ್ ಮಾಡಿದ್ದಾರೆ. ಈ ಕೆಲಸವನ್ನು ಉದ್ಯಾನದ ಸಾಮಾಜಿಕ ಮಾಧ್ಯಮ ತಂಡ ಮಾಡುತ್ತಿದೆ. ಕೂಡಲೇ ಫೋಟೋ ತೆಗೆದು ಕ್ಷಮೆ ಕೇಳಿದ್ದರು. ಮೂವರು ಬಂಧಿತರು ಮತ್ತು ಇತರರು ಇನ್‌ಸ್ಟಾಗ್ರಾಮ್‌ನಲ್ಲಿ ಅವನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು ಮತ್ತು ಸೂರತ್‌ನಲ್ಲಿ ಉಳಿಯಲು ಬಯಸುತ್ತೀರಾ ಅಥವಾ ಬೇಡವೇ ಎಂದು ಕೇಳಿದರು.

ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಏಕೆ ಹೊರಹಾಕಲಾಯಿತು?

ಪ್ರವಾದಿ ಮೊಹಮ್ಮದ್ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಇದಾಧ ಬಳಿಕ ಅವರನ್ನು ಪಕ್ಷದಿಂದ ಉಚ್ಛಟಿಸಲಾಯ್ತು. ಅವರ ಅವಹೇಳನಕಾರಿ ಹೇಳಿಕೆಗಳಿಗೆ ಒಮಾನ್, ಕತಾರ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವಾರು ಗಲ್ಫ್ ರಾಷ್ಟ್ರಗಳು ಆಕ್ರೋಶ ವ್ಯಕ್ತಪಡಿಸಿದ್ದು, ಅವರು ಭಾರತದಿಂದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ನಂತರ ನೂಪುರ್ ಶರ್ಮಾ ಅವರು ತಮ್ಮ ಟೀಕೆಗಳನ್ನು ಹಿಂತೆಗೆದುಕೊಂಡರು ಮತ್ತು ಯಾರ ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಟ್ವೀಟ್ ಮಾಡಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ
ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ