
ನವದೆಹಲಿ(ಜ.11): ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ಅವರು ಭಾರತದ ಗಣರಾಜ್ಯೋತ್ಸವದಲ್ಲಿ ಅತಿಥಿಯಾಗಿ ಪಾಲ್ಗೊಳ್ಳುವುದನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ, ಸುರಿನೇಮ್ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾಪ್ರಸಾದ್ ಸಂತೋಖಿ ಅವರಿಗೆ ಈ ಭಾಗ್ಯ ಒಲಿದುಬಂದಿದೆ ಎಂದು ಮೂಲಗಳು ಹೇಳಿವೆ.
ಸಂತೋಖಿ ಅವರು ಕಳೆದ ವಾರ ಪ್ರವಾಸಿ ಭಾರತೀಯ ದಿವಸದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಇದರ ಬೆನ್ನಲ್ಲೇ ಅವರಿಗೆ ಗಣರಾಜ್ಯ ದಿನದ ಅತಿಥಿಯಾಗಿ ಪಾಲ್ಗೊಳ್ಳುವ ಆಹ್ವಾನವೂ ಹೋಗಿದೆ ಎಂದು ತಿಳಿದುಬಂದಿದೆ.
ಸುರಿನೇಮ್ ಈ ಮುನ್ನ ಡಚ್ ವಸಾಹತು ಆಗಿತ್ತು. ಇಲ್ಲಿ ಭಾರತೀಯ ಮೂಲದವರ ಸಂಖ್ಯೆಯೇ ಶೇ.27.4ರಷ್ಟಿದೆ. ಸಂತೋಖಿ ಅವರು ಕಳೆದ ಜುಲೈನಲ್ಲಿ ಡೇಸಿ ಬೌಟೆರ್ಸೆ ಎಂಬ ಸರ್ವಾಧಿಕಾರಿಯ ಆಳ್ವಿಕೆಗೆ ಅಂತ್ಯ ಹಾಡಿ ಅಧಿಕಾರಕ್ಕೆ ಬಂದಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ