'ಹಾಸಿಗೆ-ದಿಂಬು ಇಟ್ಟುಕೊಂಡು ಸಂಸದರ ಧರಣಿ' ಕರ್ನಾಟಕದಲ್ಲೂ ಆಗಿತ್ತು!

Published : Sep 21, 2020, 09:27 PM ISTUpdated : Sep 21, 2020, 09:32 PM IST
'ಹಾಸಿಗೆ-ದಿಂಬು ಇಟ್ಟುಕೊಂಡು ಸಂಸದರ ಧರಣಿ' ಕರ್ನಾಟಕದಲ್ಲೂ ಆಗಿತ್ತು!

ಸಾರಾಂಶ

ಅಮಾನತುಗೊಂಡ ಸದಸ್ಯರಿಂದ ಧರಣಿ/ ಹಾಸಿಗೆ -ದಿಂಬು ಇಟ್ಟುಕೊಂಡು ಪ್ರತಿಭಟನೆ/ ಅಶಿಸ್ತಿನ ವರ್ತನೆ ಕಾರಣಕ್ಕೆ ಸಂಸದರ ಅಮಾನತು/ ಕೃಷಿ ಮಸೂದೆ ಮಂಡನೆ ವೇಳೆ ಕೋಲಾಹಲ

ನವದೆಹಲಿ(ಸೆ. 21)  ರಾಜ್ಯಸಭೆಯಲ್ಲಿ ಉದ್ಧಟತನದಿಂದ ನಡೆದುಕೊಂಡಿದ್ದ   ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮತ್ತು ಎಎಪಿಯ ಸಂಜಯ್ ಸಿಂಗ್ ಸೇರಿದಂತೆ ಎಂಟು ಸಂಸದರನ್ನು ಅಮಾನತುಗೊಳಿಸಲಾಗಿದ್ದು ಅಮಾನತುಗೊಂಡವರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ಹಾಸಿಗೆ, ದಿಂಬು ತೆಗೆದುಕೊಂಡು ಹೋಗಿರುವ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್ ಸಂಸತ್ತಿನ ಆವರಣದಲ್ಲಿಯೇ ಧರಣಿ ಕೂತಿದ್ದಾರೆ. ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಮಂಡನೆ ವೇಳೆ ಕೋಲಾಹಲ ಸೃಷ್ಟಿಯಾಗಿತ್ತು. ಉಪಸಭಾಪತಿ ಎದುರೆ ರೂಲ್ ಬುಕ್ ಹರಿದು ಹಾಕಿದ್ದರು.

ರೂಲ್ ಬುಕ್ ಹರಿದ ಸಂಸದರು

ಭಾನುವಾರ ಕೋಲಾಹಲ ಸೃಷ್ಟಿಯಾಗಿದ್ದರೆ ಸೋಮವಾರವೂ ಅದರ ಬಿಸಿ ಇತ್ತು. ಅಮಾನತುಗೊಂಡ ಸದಸ್ಯರನ್ನು ಹೊರನಡೆಯಲು ಸೂಚಿಸಿದಾಗ ಮತ್ತಷ್ಟು ಗೊಂದಲದ ವಾತಾವರಣ ನಿರ್ಮಾಣ ಆಯಿತು.

ಅಶಿಸ್ತಿನಿಂದ ನಡೆದುಕೊಂಡ ರಾಜ್ಯಸಭಾ ಸದಸ್ಯರಾದ ಡೆರೆಕ್ ಒ ಬ್ರಿಯಾನ್, ಸಂಜಯ್ ಸಿಂಗ್, ರಾಜು ಸತವ್, ಕೆ.ಕೆ.ರಾಗೇಶ್, ರಿಪೂನ್ ಬೋರಾ, ಡೋಲಾ ಸೇನ್, ಸೈಯದ್ ನಜೀರ್ ಹುಸೇನ್ ಮತ್ತು ಎಲಮರನ್ ಕರೀಮ್ ಅವರನ್ನು ಎಂಟು ದಿನ ಅಮಾನತು ಮಾಡಲಾಗಿದೆ. 

ಕೃಷಿ ಮಸೂದೆ ರೈತರ ವಿರೋಧಿಯಾಗಿದ್ದು  ಕೇಂದ್ರ ಸರ್ಕಾರ ಮರಣ ಶಾಸನ ಬರೆಯುತ್ತಿದೆ ಎಂದು ಆರೋಪಿಸಿರುವ ಸಂಸದರು ಇದೀಗ ಅಮಾನತು ವಿರೋಧಿಸಿ ಧರಣಿ ಕುಳಿತಿದ್ದಾರೆ. ಕರ್ನಾಟಕದ ವಿಧಾನಸಭೆಯಲ್ಲೂ ಹಿಂದೊಮ್ಮ  ಅಹೋರಾತ್ರಿ ಧರಣಿ ನಡೆದಿತ್ತು. 

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?