ಇದು ಮೋದಿ ಸರ್ಕಾರದ ವೈಫಲ್ಯ, ವ್ಯವಸ್ಥೆಯದ್ದಲ್ಲ: ಸೋನಿಯಾ!

Published : May 08, 2021, 09:56 AM ISTUpdated : May 08, 2021, 10:01 AM IST
ಇದು ಮೋದಿ ಸರ್ಕಾರದ ವೈಫಲ್ಯ, ವ್ಯವಸ್ಥೆಯದ್ದಲ್ಲ: ಸೋನಿಯಾ!

ಸಾರಾಂಶ

ಇದು ಮೋದಿ ಸರ್ಕಾರದ ವೈಫಲ್ಯ, ವ್ಯವಸ್ಥೆಯದ್ದಲ್ಲ: ಸೋನಿಯಾ| ಕೋವಿಡ್‌ ಕುರಿತು ಕೂಡಲೇ ಸರ್ವಪಕ್ಷ ಸಭೆ ಕರೆಯಿರಿ| ಸಹಾನುಭೂತಿಯಿಲ್ಲದ ರಾಜಕೀಯ ನಾಯಕತ್ವ ದೇಶದಲ್ಲಿದೆ| ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯಲ್ಲಿ ಆಕ್ರೋಶ

ನವದೆಹಲಿ(ಮೇ.08): ಕೊರೋನಾ ನಿರ್ವಹಣೆ ವಿಚಾರವಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ವ್ಯವಸ್ಥೆ ವೈಫಲ್ಯ ಅನುಭವಿಸಿಲ್ಲ. ಮೋದಿ ಸರ್ಕಾರ ಜನತೆಯನ್ನು ವೈಫಲ್ಯಕ್ಕೆ ದೂಡಿದೆ. ಹೀಗಾಗಿ ಕೋವಿಡ್‌ ಬಗ್ಗೆ ಚರ್ಚಿಸಲು ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು ಎಂದು ಆಗ್ರಹಿಸಿದ್ದಾರೆ.

ವಿಡಿಯೋ ಕಾನ್ಛರೆನ್ಸ್‌ ಮೂಲಕ ನಡೆದ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯನ್ನುದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು, ಜನತೆಯ ಬಗ್ಗೆ ಸಹಾನುಭೂತಿ ಇಲ್ಲದ ರಾಜಕೀಯ ನಾಯಕತ್ವದಿಂದ ಭಾರತ ಬಳಲುತ್ತಿದೆ ಎಂದು ದೂಷಿಸಿದರು. ಕೋವಿಡ್‌ ಸಾಂಕ್ರಾಮಿಕವನ್ನು ಉತ್ತಮವಾಗಿ ನಿಗ್ರಹಿಸಲು ಸಂಸದೀಯ ಸ್ಥಾಯಿ ಸಮಿತಿಗಳ ಸಭೆಯನ್ನು ಕರೆಯಬೇಕು ಎಂದು ಒತ್ತಾಯಿಸಿದರು.

ಭಾರತದ ಹಲವು ಸಾಮರ್ಥ್ಯ ಹಾಗೂ ಸಂಪನ್ಮೂಲಗಳನ್ನು ರಚನಾತ್ಮಕವಾಗಿ ಬಳಸಿಕೊಳ್ಳಲು ಮೋದಿ ಸರ್ಕಾರ ವಿಫಲವಾಗಿದೆ. ಈ ಸಾಂಕ್ರಾಮಿಕ ವ್ಯಾಧಿಯ ಹೋರಾಟ ಎಂಬುದು ಸರ್ಕಾರ ಹಾಗೂ ನಮ್ಮ ನಡುವಣ ತಿಕ್ಕಾಟ ಅಲ್ಲ. ನಮ್ಮ ಹಾಗೂ ಕೊರೋನಾ ವಿರುದ್ಧದ ಸಮರ. ರಾಜಕೀಯ ಭಿನ್ನಾಭಿಪ್ರಾಯಗಳೆಲ್ಲವನ್ನೂ ಮೀರಿಸಿದ್ದಾಗಿದೆ ಎಂದು ಬಣ್ಣಿಸಿದರು.

ಒಂದು ರಾಷ್ಟ್ರವಾಗಿ ನಾವೆಲ್ಲರೂ ಈ ರೋಗದ ವಿರುದ್ಧ ಹೋರಾಡಬೇಕು. ಇದಕ್ಕಾಗಿ ತಕ್ಷಣವೇ ಮೋದಿ ಸರ್ಕಾರ ಸರ್ವಪಕ್ಷ ಸಭೆ ಕರೆಯಬೇಕು ಎಂದು ಆಗ್ರಹಿಸಿದರು.

ಈ ಬಿಕ್ಕಟ್ಟನ್ನು ನಿಯಂತ್ರಿಸಲು ಸಮರ್ಥ, ಶಾಂತ ಹಾಗೂ ದೂರದೃಷ್ಟಿಯ ನಾಯಕತ್ವದ ಅಗತ್ಯವಿದೆ. ಮೋದಿ ಸರ್ಕಾರದ ಅಸಮರ್ಥತೆ, ಭಿನ್ನಾಭಿಪ್ರಾಯಗಳ ಭಾರದಿಂದ ದೇಶ ಮುಳುಗುತ್ತಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರದ ಲಸಿಕಾ ನೀತಿ ಅಸಮಾನತೆಯಿಂದ ಕೂಡಿದೆ. ದಲಿತರು, ಆದಿವಾಸಿಗಳು, ಇತರೆ ಹಿಂದುಳಿದ ವರ್ಗಗಳ ಜತೆಗೆ ಬಡವರು ಹಾಗೂ ತುಳಿತಕ್ಕೊಳಗಾದವರನ್ನು ಲಸಿಕಾ ಅಭಿಯಾನದಿಂದ ಹೊರಗಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?