
ಹೃಷಿಕೇಶ(ಮಾ.30): ಉತ್ತರಾಖಂಡದ ಶ್ರೀ ಕ್ಷೇತ್ರ ಹೃಷಿಕೇಶ ನಲ್ಲಿರುವ ತಾಜ್ ಫೈವ್ಸ್ಟಾರ್ ಹೋಟೆಲ್ನಲ್ಲಿ 76 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಇಲ್ಲಿನ ಸ್ಥಳೀಯ ಆಡಳಿತ ಹೋಟೆಲ್ಅನ್ನು ಮೂರು ದಿನಗಳ ಕಾಲ ಮುಚ್ಚಿಸಿದೆ.
‘ಹೋಟೆಲ್ ಅನ್ನು ಸ್ಯಾನಿಟೈಸ್ ಮಾಡಿ ಮುಂಜಾಗ್ರತಾ ಕ್ರಮವಾಗಿ 3 ದಿನಗಳ ಕಾಲ ಮುಚ್ಚಿಸಲಾಗಿದೆ’ ಎಂದು ಇಲ್ಲಿನ ಪೊಲೀಸ್ ವರಿಷ್ಠಾಧಿಕಾರಿ ತೃಪ್ತಿ ಭಟ್ ತಿಳಿಸಿದ್ದಾರೆ. ಕುಂಭಮೇಳ ಏ.1ರಕ್ಕೆ ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಈ ಪ್ರಕರಣ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
ಕಳೆದ ಗುರುವಾರ ತಾಜ್ ಹೃಷಿಕೇಶ ರೆಸಾರ್ಟ್ ಮತ್ತು ಸ್ಪಾದ 16 ಉದ್ಯೋಗಿಗಳಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಉದ್ಯೋಗಿಗಳನ್ನೂ ಕೊರೋನಾ ಪರೀಕ್ಷೆಗೆ ಒಳಪಡಿಸಿ, ನಂತರ 48 ಗಂಟೆ ಕಾಲ ಹೋಟೆಲ್ ಮುಚ್ಚಿ, ಸ್ಯಾನಿಟೈಜ್ ಮಾಡಿ ಸ್ವಚ್ಛ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ