
ಚೆನ್ನೈ(ಸೆ.16): ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಮತ್ತೊಮ್ಮೆ ಹೇಳಿದ್ದಾರೆ.
ಸೋಮವಾರವಷ್ಟೇ ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮೇಕೆದಾಟು ಪ್ರದೇಶಕ್ಕೆ ಭೇಟಿ ನೀಡಿದ್ದರು. ‘ಕೇಂದ್ರ ಅರಣ್ಯ ಹಾಗೂ ಜಲಶಕ್ತಿ ಸಚಿವರನ್ನು ಮುಂದಿನ ವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಭೇಟಿಯಾಗಲಿದ್ದೇವೆ. ಯೋಜನೆಯ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಿ ಒಪ್ಪಿಗೆ ಪಡೆಯುತ್ತೇವೆ’ ಎಂದಿದ್ದರು. ಇದರ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿಗಳು ಇದಕ್ಕೆ ಅಡ್ಡಗಾಲು ಹಾಕುವ ಮಾತುಗಳನ್ನು ಆಡಿದ್ದಾರೆ.
ವಿಧಾನಸಭೆಯಲ್ಲಿ ಮಂಗಳವಾರ ಮಾತನಾಡಿದ ಪಳನಿಸ್ವಾಮಿ ಅವರು, ‘ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಸ್ಪಷ್ಟವಾಗಿದೆ. ತಮಿಳುನಾಡಿಗೆ ಎಷ್ಟುನೀರು ಕೊಡಬೇಕೋ ಅಷ್ಟುನೀರನ್ನು ಕರ್ನಾಟಕ ಬಿಡಲೇಬೇಕು. ಕರ್ನಾಟಕವು ಕಾವೇರಿ ನದಿಯನ್ನು ತಿರುಗಿಸುವುದು ಅಥವಾ ತಮಿಳುನಾಡಿನತ್ತ ಹರಿಯುವ ನೀರಿಗೆ ತಡೆ ಒಡ್ಡುವುದನ್ನು ಮಾಡಕೂಡದು ಎಂದು ಸುಪ್ರೀಂ ಕೋರ್ಟ್ ಆದೇಶವೇ ಸ್ಪಷ್ಟವಾಗಿ ಹೇಳಿದೆ’ ಎಂದರು.
ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕ ಸಂಕಲ್ಪ ಮಾಡಿದ್ದು, ಇದಕ್ಕೆ ತಮಿಳುನಾಡು ಮೊದಲಿನಿಂದಲೂ ವಿರೋಧಿಸುತ್ತಲೇ ಇದೆ. ಸುಪ್ರೀಂ ಕೋರ್ಟ್ ಕದವನ್ನೂ ಬಡಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ