ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಸ್ಟಾಲಿನ್‌ ಆಗ್ರಹಿಸಬೇಕು: ಎಐಎಡಿಎಂಕೆ

Published : Aug 06, 2023, 12:30 AM IST
ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಸ್ಟಾಲಿನ್‌ ಆಗ್ರಹಿಸಬೇಕು: ಎಐಎಡಿಎಂಕೆ

ಸಾರಾಂಶ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸ್ಟಾಲಿನ್‌ ಇಬ್ಬರೂ ಸಹ ಒಂದೇ ಮೈತ್ರಿಕೂಟದಲ್ಲಿದ್ದಾರೆ. ಅಲ್ಲದೇ ಕರ್ನಾಟಕದಲ್ಲಿ ಅಣೆಕಟ್ಟು ಶೇ.80ರಷ್ಟು ಭರ್ತಿಯಾಗಿವೆ. ಹಾಗಾಗಿ ತಮಿಳುನಾಡಿಗೆ ಬಾಕಿ ಇರುವ ನೀರು ಬಿಡುವಂತೆ ಆಗ್ರಹ ವ್ಯಕ್ತಪಡಿಸಬೇಕು. ಸ್ಟಾಲಿನ್‌ ಅವರು ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಜೊತೆ ಮಾತನಾಡಬೇಕು: ಅಣ್ಣಾಡಿಎಂಕೆಯ ಪ್ರಧಾನ ಕಾರ್ಯದರ್ಶಿ ಕೆ.ಪಳನಿಸ್ವಾಮಿ 

ಚೆನ್ನೈ(ಆ.06):  ತಮಿಳುನಾಡಿಗೆ ಬಿಡುಗಡೆಯಾಗಬೇಕಿರುವ 86.38 ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಆಗ್ರಹಿಸಬೇಕು ಎಂದು ವಿಪಕ್ಷ ಅಣ್ಣಾ ಡಿಎಂಕೆ ಶನಿವಾರ ಹೇಳಿದೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸ್ಟಾಲಿನ್‌ ಇಬ್ಬರೂ ಸಹ ಒಂದೇ ಮೈತ್ರಿಕೂಟದಲ್ಲಿದ್ದಾರೆ. ಅಲ್ಲದೇ ಕರ್ನಾಟಕದಲ್ಲಿ ಅಣೆಕಟ್ಟು ಶೇ.80ರಷ್ಟು ಭರ್ತಿಯಾಗಿವೆ. ಹಾಗಾಗಿ ತಮಿಳುನಾಡಿಗೆ ಬಾಕಿ ಇರುವ ನೀರು ಬಿಡುವಂತೆ ಆಗ್ರಹ ವ್ಯಕ್ತಪಡಿಸಬೇಕು. ಸ್ಟಾಲಿನ್‌ ಅವರು ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಜೊತೆ ಮಾತನಾಡಬೇಕು. ಜೂನ್‌, ಜುಲೈ, ಆಗಸ್ಟ್‌ ತಿಂಗಳಿನ ನೀರು ಬಿಡುಗಡೆ ಮಾಡಿಸುವ ಮೂಲಕ 3.5 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದಿರುವ ಕುರುವೈ ಭತ್ತವನ್ನು ರಕ್ಷಿಸಬೇಕು ಎಂದು ಅಣ್ಣಾಡಿಎಂಕೆಯ ಪ್ರಧಾನ ಕಾರ್ಯದರ್ಶಿ ಕೆ.ಪಳನಿಸ್ವಾಮಿ ಅವರು ಹೇಳಿದ್ದಾರೆ.

ಕಾವೇರಿ ನೀರು ಬಿಡಿಸಿ: ಮೋದಿಗೆ ಸ್ಟಾಲಿನ್‌ ಮನವಿ

ಡಿಎಂಕೆಯ ಮೈತ್ರಿಪಕ್ಷವಾದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಕಾವೇರಿ ನೀರು ಸಮಸ್ಯೆ ಉದ್ಭವ ಆಗಿದೆ. ಈ ಮೊದಲು ಜಯಲಲಿತಾ ಹಾಗೂ ನಾನು ಮುಖ್ಯಮಂತ್ರಿಯಾಗಿದ್ದಾಗಲೂ ರಾಜ್ಯದ ಜನರ ಹಿತ ಕಾಪಾಡಿದ್ದೆವು ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು