
ಚೆನ್ನೈ, (ಮೇ.17): ಮೂರನೇ ಹಂತದ ಲಾಕ್ಡೌನ್ ಇಂದಿಗೆ (ಭಾನುವಾರ) ಕೊನೆಯಾಗಲಿದ್ದು, 4ನೇ ಹಂತದ ಲಾಕ್ಡೌನ್ಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.
ಈ ಮಧ್ಯೆ ತಮಿಳುನಾಡಿನಲ್ಲಿ ಮೇ.31ರ ವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ. ನಾಲ್ಕನೇ ಹಂತ ಲಾಕ್ಡೌನ್ ವಿಸ್ತರಣೆ ಮಾಡಿ ಇಂದು (ಭಾನುವಾರ) ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ.
ಮಹಾರಾಷ್ಟ್ರದಲ್ಲಿ ಲಾಕ್ಡೌನ್ ವಿಸ್ತರಣೆ: ಕರ್ನಾಟಕದ ಕತೆ ಏನು..?
ತಮಿಳುನಾಡಿನಲ್ಲಿ ಪ್ರಸ್ತುತ ಸುಮಾರು 10,585 ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 74 ಮಂದಿ ಮಾಹಾಮಾರಿಗೆ ಬಲಿಯಾಗಿದ್ದಾರೆ.
ಈಗಾಗಲೇ ಕೇಂದ್ರದ 4ನೇ ಹಂತದ ಲಾಕ್ಡೌನ್ ಮಾರ್ಗಸೂಚಿ ಬಿಡುಗಡೆ ಮುನ್ನವೇ ಮಾಹಾರಾಷ್ಟ್ರ, ಪಂಜಾಬ್ ಮಿಜೋರಾಂ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿ ಮೇ.31ರ ವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿವೆ.
ಆದ್ರೆ, ಕರ್ನಾಟಕ ಸರ್ಕಾರ ಮಾತ್ರ ಇದುವರೆಗೆ ಯಾವುದೇ ಇಂತಹ ತೀರ್ಮಾನ ಕೈಗೊಂಡಿಲ್ಲ. ಬದಲಾಗಿ ಕೇಂದ್ರದ ನೀತಿ-ನಿಯಮಗಳ ಆಧಾರದ ಮೇಲೆ ಬಿಎಸ್ ಯಡಿಯೂರಪ್ಪ ಸರ್ಕಾರ ಲಾಕ್ಡೌನ್ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.
ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಲ್ಲಾ ಕಡೆ ಲಾಕ್ಡೌನ್ ಸಡಿಲ ಮಾಡುವ ಎಲ್ಲಾ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ