
ತಿರುಚಿರಾಪಳ್ಳಿ[ಡಿ.26]: ತಮಿಳುನಾಡಿನ ತಿರುಚಿರಾಪಳ್ಳಿಯ ರೈತನೊಬ್ಬ ತನ್ನ ಹೊಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗುಡಿಯೊಂದನ್ನು ನಿರ್ಮಿಸಿದ್ದಾನೆ.
ಎರಾಕುಡಿ ಗ್ರಾಮದ 50 ವರ್ಷದ ಪಿ. ಶಂಕರ್ ಎನ್ನುವವರು ತಮ್ಮ ಹೊಲದಲ್ಲಿ ನಿರ್ಮಿಸಿದ ಮೋದಿ ದೇವಾಲಯವನ್ನು ಕಳೆದ ವಾರ ಉದ್ಘಾಟಿಸಿದ್ದಾರೆ. ಈ ಗುಡಿ 8 ಚದರ ಅಡಿ ವಿಸ್ತೀರ್ಣ ಇದ್ದು, ಗುಡಿಯಲ್ಲಿರುವ ಮೋದಿ ಪ್ರತಿಮೆಗೆ ಅವರು ಪ್ರತಿ ನಿತ್ಯ ಪೂಜೆ ಸಲ್ಲಿಸುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಪಿ. ಶಂಕರ್, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಂತಹ ಕಲ್ಯಾಣ ಯೋಜನೆಯಿಂದ ಪ್ರಭಾವಿತಗೊಂಡು ಗುಡಿಯನ್ನು ನಿರ್ಮಿಸಿದ್ದೇನೆ. ಈ ಗುಡಿ ನಿರ್ಮಾಣಕ್ಕೆ ಸುಮಾರು 1.2 ಲಕ್ಷ ರು. ವೆಚ್ಚವಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ