
ಚೆನ್ನೈ(ಜೂ.05): ಕೊರೋನಾ ವೈರಸ್ ನಿಯಂತ್ರಣಕ್ಕೆ ಬಹುತೇಕ ರಾಜ್ಯಗಳು ಲಾಕ್ಡೌನ್ ವಿಸ್ತರಿಸಿದೆ. ಇದೀಗ ತಮಿಳುನಾಡು ಸರ್ಕಾರ ಕೂಡ ಲಾಕ್ಡೌನ್ ವಿಸ್ತರಿಸಿದೆ. ಜೂನ್ 14ರ ವರೆಗೆ ತಮಿಳುನಾಡಿನಲ್ಲಿ ಲಾಕ್ಡೌನ್ ವಿಸ್ತರಿಸಿದೆ. ಇದರ ಜೊತೆ ಕೆಲ ವಿನಾಯಿತಿ ನೀಡಿದೆ.
ಅನ್ಲಾಕ್ ಸುಳಿವು ನೀಡಿದ ಸಿಎಂ ಯಡಿಯೂರಪ್ಪ, ಷರತ್ತುಗಳು ಅನ್ವಯ!
ಕೊರೋನಾ ನಿಯಂತ್ರಣಕ್ಕೆ ಬಂದಿರುವ ಚೆನ್ನೈ ಸೇರಿದಂತೆ 27 ಜಿಲ್ಲೆಗಳಲ್ಲಿ ಕೆಲ ವಿನಾಯತಿ ನೀಡಲಾಗಿದೆ. ಆದರೆ ಕೊಯಂಬತ್ತೂರು, ಇರೋಡು, ಸೇಲಂ, ಕರೂರು ಸೇರಿದಂತೆ 11 ಜಿಲ್ಲೆಗಳನ್ನು ಕೊರೋನಾ ಹಾಟ್ಸ್ಪಾಟ್ ಎಂದು ಗುರುತಿಸಲಾಗಿದೆ. ಆದರೆ ನಿಯಂತ್ರಣಕ್ಕೆ ಬರದ ಜಿಲ್ಲೆಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಹೊಸ ಮಾರ್ಗಸೂಚಿ ಪ್ರಕಟಿಸಿರುವ ತಮಿಳುನಾಡು ಸರ್ಕಾರ ಕೆಲ ವಿನಾಯಿತಿಯನ್ನು ಘೋಷಿಸಿದೆ. ಅಗತ್ಯ ವಸ್ತು ಸೇವೆ ಹಾಗೂ ತುರ್ತು ಸೇವೆಗಳು ಬೆಳಗ್ಗೆ 6 ರಿಂದ ಸಂಜೆ 5 ಗಂಟೆ ವರೆಗೆ ಇರಲಿದೆ. ಫುಟ್ಪಾತ್ ಬದಿಯಲ್ಲಿ ತರಕಾರಿ ಹಾಗೂ ಹಣ್ಣು ಮಾರಾಟಗಾರರಿಗೆ ಅವಕಾಶ ನೀಡಲಾಗಿದೆ.
5 ಹಂತಗಳಲ್ಲಿ ಮಹಾ ಅನ್ಲಾಕ್?: ರಾಜ್ಯದ 36 ಜಿಲ್ಲೆಗಳು ವಿಂಗಡನೆ!
ಸರ್ಕಾರಿ ಕಚೇರಿಗಳಲ್ಲಿ ಶೇಕಡಾ 30 ರಷ್ಟು ಉದ್ಯೋಗಿಗಳ ಹಾಜರಾತಿಗೆ ಅವಕಾಶ ನೀಡಿದೆ. ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಿಸಲಿದೆ. ಆದರೆ ಪ್ರತಿ ದಿನ 50 ಟೋಕನ್ ಮಾತ್ರ ನೀಡಲಾಗುತ್ತದೆ. ಕಾರ್ಖಾನೆ, ಕೈಗಾರಿಕೆಗಳಲ್ಲಿ ಶೇಕಡಾ 50 ರಷ್ಟು ಹಾಜರಾತಿಗೆ ಅವಕಾಶ ನೀಡಲಾಗಿದೆ.
ಇ ರಿಜಿಸ್ಟ್ರೇಶನ್ ಮೂಲಕ ಪ್ಲಂಬಿಂಕ್, ಎಲೆಕ್ಟ್ರಲ್ ಕೆಲಸಗಾರರು ಕೆಲಸಕ್ಕೆ ತೆರಳಬಹುದು. ಟ್ಯಾಕ್ಸಿ, ಆಟೋ ಸೇವೆಗೆ ಅವಕಾಶ ನೀಡಲಾಗಿದೆ. ಆದರೆ ಕೊರೋನಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ