
ಚೆನ್ನೈ ( ಮೇ 07) ಮಹಾರಾಷ್ಟ್ರ, ಕೇರಳ ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ ಅನುಷ್ಠಾನ ಮಾಡಿವೆ. ಕರ್ನಾಟದಲ್ಲಿ ಪ್ರತಿ ದಿನ ಐವತ್ತು ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಕರ್ನಾಟಕದಲ್ಲಿ ಲಾಕ್ ಡೌನ್ ಮೊರೆ ಹೋಗಲಾಗಿದೆ.
ತಮಿಳುನಾಡಿನ ಸಿಎಂ ಆಗಿ ಎಂಕೆ ಸ್ಟಾಲಿನ್ ಅಧಿಕಾರ ವಹಿಸಿಕೊಂಡ ತಕ್ಷಣ ಪರಿಹಾರ ಕ್ರಮ ತೆಗೆದುಕೊಂಡಿದ್ದಾರೆ. ಆಕ್ಸಿಜನ್ ಪೂರೈಕೆಗೆ ಕ್ರಮ ತೆಗೆದುಕೊಂಡಿದ್ದಾರೆ. ಎರಡು ಕಡೆ 1ಸಾವಿರ ಆಕ್ಸಿಜನ್ ವ್ಯವಸ್ಥೆ ಇರೋ ಬೆಡ್ ಗಳು ರೆಡಿ ಮಾಡಲಾಗಿದ್ದು ಐದು ನೂರು ವೈದ್ಯರಿಗೆ ತರಬೇತಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕರ್ನಾಟಕದಲ್ಲಿ ಕೊರೋನಾ ಲಾಕ್ ಡೌನ್ ಹೇಗಿರಲಿದೆ?
ತಮಿಳುನಾಡು ಸರ್ಕಾರ ತೆಗೆದುಕೊಂಡ ಕ್ರಮಗಳು
* ಕೇರಳದ ಕೋಜಿಕೋಡ್ ಐಯೋನೆಕ್ಸ್ ನಿಂದ 40 ಮೆಟ್ರಿಕ್ ಟನ್ ಆಮ್ಲಜನಕ ಆಮದು
* 60 ಮೆಟ್ರಿಕ್ ಟನ್ ಆಮ್ಲಜನಕವನ್ನು ಪ್ರಾಕ್ಸಿಯಾರ್ ನಿಂದ ತರಿಸಿಕೊಳ್ಳಲು ನಿರ್ಧಾರ
* ಲೂಧಿಯಾನದಿಂದ 120 ಮೆಟ್ರಿಕ್ ಟನ್ ಆಮ್ಲಜನಕ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮುಖೇನ ಸ್ಟಾಲಿನ್ ಎಲ್ಲ ವಿವರಗಳನ್ನು ತಿಳಿಸಿದ್ದಾರೆ. ತುರ್ತು ಸಭೆ ನಡೆಸಿ ಮೇಲಿನ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ತಮಿಳುನಾಡಿನಲ್ಲಿಯೂ ಆಮ್ಮಜನಕ ಕೊರತೆ ಇದೆ. ಇಪ್ಪತ್ತು ಆಮ್ಲಜನಕ ಸಾಂದ್ರಕಗಳನ್ನು ಕಳಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ