ದಕ್ಷಿಣ ರಾಜ್ಯಗಳ ಸಮರ ತೀವ್ರ: ಕರ್ನಾಟಕ ಬಳಿಕ ಈಗ ಕೇಂದ್ರದ ವಿರುದ್ಧ ತ.ನಾಡು ಸುಪ್ರೀಂಗೆ

Published : Apr 04, 2024, 07:43 AM IST
ದಕ್ಷಿಣ ರಾಜ್ಯಗಳ ಸಮರ ತೀವ್ರ: ಕರ್ನಾಟಕ ಬಳಿಕ ಈಗ ಕೇಂದ್ರದ ವಿರುದ್ಧ ತ.ನಾಡು ಸುಪ್ರೀಂಗೆ

ಸಾರಾಂಶ

18 ಸಾವಿರ ಕೋಟಿ ರು. ಬರ ಪರಿಹಾರ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಬೆನ್ನಲ್ಲೇ, ನೆರೆ ಪರಿಹಾರ ಕೊಡಿಸುವಂತೆ ತಮಿಳುನಾಡು ಸರ್ಕಾರ ಕೂಡ ಈಗ ಸರ್ವೋಚ್ಚ ನ್ಯಾಯಾಲಯದ ಕದ ಬಡಿದಿದೆ.   

ನವದೆಹಲಿ (ಏ.04): 18 ಸಾವಿರ ಕೋಟಿ ರು. ಬರ ಪರಿಹಾರ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಬೆನ್ನಲ್ಲೇ, ನೆರೆ ಪರಿಹಾರ ಕೊಡಿಸುವಂತೆ ತಮಿಳುನಾಡು ಸರ್ಕಾರ ಕೂಡ ಈಗ ಸರ್ವೋಚ್ಚ ನ್ಯಾಯಾಲಯದ ಕದ ಬಡಿದಿದೆ. ಈ ಮೂಲಕ ಕೇಂದ್ರ ಸರ್ಕಾರ ಅನುದಾನ ಹಾಗೂ ಪರಿಹಾರ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ತಾರತಮ್ಯ ಮಾಡುತ್ತಿದೆ ಎಂದು ದನಿ ಎತ್ತಿದ್ದ ದಕ್ಷಿಣ ರಾಜ್ಯಗಳು ಈಗ ಕಾನೂನು ಸಮರವನ್ನು ತೀವ್ರಗೊಳಿಸಿದಂತಾಗಿದೆ.

ನೈಸರ್ಗಿಕ ವಿಕೋಪಕ್ಕಾಗಿ ತನಗೆ ಬರಬೇಕಿರುವ ಅನುದಾನವನ್ನು ಕೇಂದ್ರ ಸರ್ಕಾರ ತಡೆ ಹಿಡಿದಿದೆ ಎಂದು ದೂರಿ ಎಂ.ಕೆ. ಸ್ಟಾಲಿನ್‌ ನೇತೃತ್ವದ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಸಂವಿಧಾನದ ಪರಿಚ್ಛೇದ 131ರಡಿ ಅದು ಅರ್ಜಿಯನ್ನು ಸಲ್ಲಿಸಿದೆ. ಇದರಡಿ ಕೇಂದ್ರ- ರಾಜ್ಯಗಳ ನಡುವೆ ಕಾನೂನು ಸಮರ ಉಂಟಾದಾಗ ನ್ಯಾಯಾಲಯದ ಮೆಟ್ಟಿಲೇರುವ ಅವಕಾಶವಿದೆ. 

ಇತ್ತೀಚೆಗೆ ಸಂಭವಿಸಿದ ಪ್ರವಾಹ ಹಾಗೂ ಮಿಚೌಂಗ್‌ ಚಂಡಮಾರುತದಿಂದಾದ ಹಾನಿಗೆ 37 ಸಾವಿರ ಕೋಟಿ ರು. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದೆ. ಕಳೆದ ಡಿಸೆಂಬರ್‌ನಲ್ಲಿ ಮಿಚೌಂಗ್‌ ಚಂಡಮಾರುತದಿಂದಾಗಿ 19,692 ಕೋಟಿ ರು. ನಷ್ಟವಾಗಿದೆ. ದಕ್ಷಿಣದ ಜಿಲ್ಲೆಗಳಲ್ಲಿ ಕಂಡು ಕೇಳರಿಯದ ಮಳೆಯಿಂದಾಗಿ 18 ಸಾವಿರ ಕೋಟಿ ರು. ಹಾನಿಯಾಗಿದೆ. ಹೀಗಾಗಿ ಈ ಪರಿಹಾರ ಕೊಡಿಸಬೇಕು. ಮಧ್ಯಂತರ ಪರಿಹಾರವಾಗಿ 2 ಸಾವಿರ ಕೋಟಿ ರು. ಬಿಡುಗಡೆ ಮಾಡಲು ಸೂಚಿಸಬೇಕು ಎಂದು ಮನವಿ ಮಾಡಿದೆ. 

ಘರ್ ಘರ್ ಗ್ಯಾರಂಟಿ: ಐದು ನ್ಯಾಯ, 25 ಭರವಸೆಗಳು: ಕಾಂಗ್ರೆಸ್‌ ಅಭಿಯಾನ ಆರಂಭ

ತನಗೆ ಬರ ಪರಿಹಾರವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ ಎಂದು ಮಾ.23ರಂದು ಕರ್ನಾಟಕ ಸರ್ಕಾರ ಕೂಡ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ತನ್ಮೂಲಕ ಬರ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ದೇಶದ ಮೊದಲ ರಾಜ್ಯ ಎನಿಸಿಕೊಂಡಿತ್ತು. ಇನ್ನೊಂದೆಡೆ ಕೇರಳ ಸರ್ಕಾರ ಕೂಡಾ, ಹೆಚ್ಚುವರಿ ಸಾಲ ಪಡೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಈ ವಿಷಯದ ಇದೀಗ 5 ಸದಸ್ಯರ ಸಾಂವಿಧಾನ ಪೀಠಕ್ಕ ವರ್ಗಾವಣೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!