ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ!

Published : Mar 11, 2021, 12:49 PM IST
ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ!

ಸಾರಾಂಶ

ಎಸ್‌ಡಿಪಿಐ ಜೊತೆ ಕಮಲ್‌ಹಾಸನ್‌ ಮೈತ್ರಿ| ಬೆಂಗಳೂರು ಹಿಂಸೆಯಲ್ಲಿ ಭಾಗಿಯಾಗಿದ್ದ ಸಂಘಟನೆ ಜೊತೆ ಮೈತ್ರಿ

ಚೆನ್ನೈ(ಮಾ.11): ತಮಿಳುನಾಡಿನಲ್ಲಿ ಅಧಿಕಾರಕ್ಕೇರುವ ಇಲ್ಲವೇ ಕಿಂಗ್‌ಪಿನ್‌ ಆಗುವ ತವಕದಲ್ಲಿರುವ ನಟ, ಮಕ್ಕಳ್‌ ನೀದಿ ಮಯ್ಯಂ ಪಕ್ಷದ ಅಧ್ಯಕ್ಷ ಕಮಲ್‌ ಹಾಸನ್‌, ವಿಧಾನಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ಜೊತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿವಾದಿತ ಸಂಘಟನೆಯಾದ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ರಾಜಕೀಯ ಮುಖವಾಣಿಯಾದ ಎಸ್‌ಡಿಪಿಐ ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಪ್ರಮುಖವಾಗಿ ಭಾಗಿಯಾಗಿತ್ತು ಎಂಬುದು ಉಲ್ಲೇಖನೀಯ.

ಮೈತ್ರಿ ಸಂಬಂಧ ಉಭಯ ಪಕ್ಷಗಳು ಹಲವು ದಿನಗಳಿಂದ ಮಾತುಕತೆ ನಡೆಸುತ್ತಿದ್ದವು. ಎಸ್‌ಡಿಪಿಐ 25 ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರೆ, ಕಮಲ್‌ ಹಾಸನ್‌ 18 ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮೊದಲು ಟಿಟಿವಿ ದಿನಕರನ್‌ ನೇತೃತ್ವದ ಎಎಂಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಉದ್ದೇಶವನ್ನು ಎಸ್‌ಡಿಪಿಐ ಹೊಂದಿತ್ತಾದರೂ, ಆ ಪಕ್ಷವನ್ನು ಬಿಜೆಪಿ ನಿಯಂತ್ರಿಸುತ್ತಿರಬಹುದು ಮತ್ತು ಅದು ಬಿಜೆಪಿ ಜೊತೆ ಮೈತ್ರಿಮಾಡಿಕೊಳ್ಳಬಹುದು ಎಂಬ ಆತಂಕದಿಂದಾಗಿ ಅದು ಟಿಟಿವಿ ದಿನಕರನ್‌ ಅವರಿಂದ ದೂರವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ₹610 ಕೋಟಿ ಟಿಕೆಟ್‌ ಹಣ ವಾಪಸ್‌ ನೀಡಿದ ಇಂಡಿಗೋ; ಪ್ರಯಾಣಿಕರಿಗೆ ತಲುಪಿದ ಲಗೇಜ್
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !