
ತಮಿಳುನಾಡಿನ ಶ್ರೀವಿಲ್ಲಿಪುತೂರಿನ ಆಂಡಾಳ್ ದೇವಸ್ಥಾನದ ಅರ್ಥ ಮಂಟಪಕ್ಕೆ ಸಂಗೀತ ಸಂಯೋಜಕ ಇಳಯರಾಜ ಅವರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಅರ್ಚಕರು, ಜೀಯರು ಮತ್ತು ಸಿಬ್ಬಂದಿಗೆ ಮಾತ್ರ ಒಳಗೆ ಪ್ರವೇಶವಿದೆ ಎಂದು ದೇವಾಲಯದ ಅಧಿಕಾರಿಗಳು ಸ್ಪಷ್ಟಪಡಿಸಿದ ದೇಗುಲದ ಸಿಬ್ಬಂದಿ ಇಳಯರಾಜ ಅವರನ್ನು ಅರ್ಧದಲ್ಲೇ ತಡೆದರು ಎಂದು ವರದಿಯಾಗಿದೆ. ಹೀಗಾಗಿ ಇಳಯರಾಜ ಅವರು ಪ್ರವೇಶದ್ವಾರದಿಂದಲೇ ಪ್ರಾರ್ಥನೆ ಸಲ್ಲಿಸಿದರು ಎಂದು ವರದಿಯಾಗಿದೆ.
ಆದರೆ ಈ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಗೀತ ಮಂತ್ರಿಕ ಇಳಯರಾಜ ಅಂತಹ ಘಟನೆ ನಡೆದಿಲ್ಲ, ಸುಮ್ಮನೆ ವರದಿಗಳನ್ನು ಹಬ್ಬಿಸಲಾಗುತ್ತಿದೆ ಇಂತಹ ಊಹಾಪೋಹಗಳನ್ನು ನಂಬದಿರುವಂತೆ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿರುವ ಅಂಡಾಳಮ್ಮ ದೇಗುಲದಲ್ಲಿ ಈ ಘಟನೆ ನಡೆದಿದೆ. ಇತ್ತ ಇಳಯರಾಜ ಅವರಿಗೆ ದೇಗುಲಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂಬ ವರದಿ ವೈರಲ್ ಆಗುತ್ತಿದ್ದಂತೆ ತಮಿಳುನಾಡಿನ ಹಿಂದೂ ಧಾರ್ಮಿಕದತ್ತಿ ಇಲಾಖೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಅರ್ಥ ಮಂಟಪಕ್ಕೆ ಕೇವಲ ಪುರೋಹಿತರು, ದೇಗುಲದ ಸಿಬ್ಬಂದಿ ಹಾಗೂ ಜೀಯರ್ಗಳಿಗೆ ಮಾತ್ರ ಅವಕಾಶವಿದೆ ಹೀಗಾಗಿ ಸಂಗೀತಾ ಮಾಂತ್ರಿಕ ಇಳಯರಾಜ ಅವರಿಗೆ ಅವಕಾಶ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ಅರ್ಥ ಮಂಟಪ ಎಂದರೆ ಗರ್ಭಗುಡಿಯ ಸರಿ ಎದುರಿಗೆ ಇರುವ ಮಂಟಪವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ