ತಮಿಳುನಾಡು ಬಾಲಕಿ ನಿಗೂಢ ಸಾವು: ನ್ಯಾಯಕ್ಕಾಗಿ ಆಗ್ರಹಿಸಿ ಹಿಂಸಾಚಾರ

Published : Jul 18, 2022, 05:00 AM IST
ತಮಿಳುನಾಡು ಬಾಲಕಿ ನಿಗೂಢ ಸಾವು: ನ್ಯಾಯಕ್ಕಾಗಿ ಆಗ್ರಹಿಸಿ ಹಿಂಸಾಚಾರ

ಸಾರಾಂಶ

ತಮಿಳುನಾಡಿನ ವಿದ್ಯಾರ್ಥಿನಿಯೊಬ್ಬಳ ನಿಗೂಢ ಸಾವಿನ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಜನರು ತೀವ್ರ ಹಿಂಸಾಚಾರ ನಡೆಸಿದ ಘಟನೆ ಭಾನುವಾರ ವರದಿಯಾಗಿದೆ. ಉದ್ರಿಕ್ತ ಜನರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸ್‌ ಸಿಬ್ಬಂದಿಯನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ. 

ಕಲ್ಲಾಕುರಿಚಿ (ತಮಿಳುನಾಡು) (ಜು.18): ತಮಿಳುನಾಡಿನ ವಿದ್ಯಾರ್ಥಿನಿಯೊಬ್ಬಳ ನಿಗೂಢ ಸಾವಿನ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಜನರು ತೀವ್ರ ಹಿಂಸಾಚಾರ ನಡೆಸಿದ ಘಟನೆ ಭಾನುವಾರ ವರದಿಯಾಗಿದೆ. ಉದ್ರಿಕ್ತ ಜನರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸ್‌ ಸಿಬ್ಬಂದಿಯನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು 2 ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಪ್ರತಿಭಟನಾಕಾರರು ಪೊಲೀಸ್‌ ಬ್ಯಾರಿಕೇಡ್‌ ತಳ್ಳಿ ಸಾವಿಗೀಡಾದ ಬಾಲಕಿಯ ಶಾಲೆಯ ಆವರಣದಲ್ಲಿ ನುಗ್ಗಿ, ಶಾಲೆಯ ಬಸ್‌ಗಳಿಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ವಾಹನಗಳಿಗೂ ಕೆಲವರು ಬೆಂಕಿ ಹಚ್ಚಿದ್ದಾರೆ. ಬಾಲಕಿಗೆ ನ್ಯಾಯ ಸಿಗಬೇಕೆಂಬ ಪೋಸ್ಟರ್‌ಗಳನ್ನು ಅಂಟಿಸಿ, ಶಾಲೆಯ ನಾಮಫಲಕವನ್ನು ಧ್ವಂಸಗೊಳಿಸಿದ್ದಾರೆ. ಶಾಲೆಯ ಪೀಠೋಪಕರಣಗಳನ್ನೆಲ್ಲ ರಸ್ತೆಗೆ ಒಯ್ದು ಬೆಂಕಿ ಹಚ್ಚಿದ್ದಾರೆ. 

ಕಾವೇರಿಗೆ ನಿರ್ಮಿಸಿದ Mettur Dam ಭರ್ತಿ, ತಮಿಳುನಾಡಿನ 11 ಜಿಲ್ಲೆಗೆ ಪ್ರವಾಹ ಎಚ್ಚರಿಕೆ

ಚೆನ್ನೈ-ಸೇಲಂ ರಸ್ತೆಯ ಸಂಚಾರವನ್ನು ತಡೆಗಟ್ಟಿಭಾರೀ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಅವರ ಮೇಲೆ ಜನರು ಕಲ್ಲು ತೂರಿದ್ದು, ಕೊನೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಶಾಂತಿ ಕಾಪಾಡಬೇಕೆಂದು ಕೋರಿದ್ದಾರೆ. ಬಾಲಕಿಯ ಸಾವಿಗೆ ಕಾರಣರಾದವರನ್ನು ಕಠಿಣ ಶಿಕ್ಷೆ ನೀಡಲಾಗುವುದು ಎಂದು ಟ್ವೀಟ್‌ನಲ್ಲಿ ಭರವಸೆ ನೀಡಿದ್ದಾರೆ.

ಆಗಿದ್ದೇನು?: ಜು. 13 ರಂದು ಚಿನ್ನಾಸಲೆಂನ ಖಾಸಗಿ ವಸತಿ ಶಾಲೆಯಲ್ಲಿ 12 ನೇ ತರಗತಿಯಲ್ಲಿ ಓದುತ್ತಿರುವ 17 ವರ್ಷದ ಬಾಲಕಿಯ ಮೃತ ದೇಹವು ಹಾಸ್ಟೆಲ್‌ ಆವರಣದಲ್ಲಿ ಪತ್ತೆಯಾಗಿತ್ತು. ಹಾಸ್ಟೆಲ್‌ನ ಮೇಲಿನ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವೇಳೆಯಲ್ಲಿ ಬಾಲಕಿ ಸಾಯುವ ಮುನ್ನವೇ ಆಕೆಯ ದೇಹದ ಮೇಲೆ ಸಾಕಷ್ಟು ಗಾಯಗಳಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಕೇಸು ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು.

ರಸ್ತೆ ಕಾಮಗಾರಿಗೆ ಅರ್ಚಕರಿಂದ ಪೂಜೆ, ಡಿಎಂಕೆ ಸಂಸದನ ವಿರೋಧ!

ಬಳಿಕ ಕಡ್ಲೂರು ಜಿಲ್ಲೆಯ ಆಕೆಯ ಪಾಲಕರು ಖಾಸಗಿ ಶಾಲೆಯ ಅಧಿಕಾರಿಗಳನ್ನು ವಿರೋಧಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪ್ರತಿಭಟನೆ ಆರಂಭಿಸಿದ್ದಾರೆ. ಬಾಲಕಿಯ ಸಾವಿನ ಪ್ರಕರಣವನ್ನು ಸಿಬಿ-ಸಿಐಡಿಗೆ ತನಿಖೆಗಾಗಿ ಒಪ್ಪಿಸಬೇಕು. ಸಾವಿಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಅಮೆರಿಕ ತೆರಿಗೆ ದಾಳಿಗೆ ಒಳಗಾದ ದೇಶಗಳಿಂದ ಮಾದರಿಯಾದ ಚೀನಾ; ಟ್ರಂಪ್‌ಗೆ ಶಾಕ್ ನೀಡಿ ದಾಖಲೆ ಬರೆದ ಡ್ರ್ಯಾಗನ್
ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ