ನನ್ನ ಗಂಡ ರಾಜಕಾರಣಿಗಳಿಗೆ 20 ವರ್ಷದ ಯುವತಿಯರನ್ನು ಪೂರೈಸುತ್ತಾನೆ: ಮಹಿಳೆ ಆರೋಪ

Published : May 21, 2025, 11:15 AM IST
ನನ್ನ ಗಂಡ ರಾಜಕಾರಣಿಗಳಿಗೆ 20 ವರ್ಷದ ಯುವತಿಯರನ್ನು ಪೂರೈಸುತ್ತಾನೆ: ಮಹಿಳೆ ಆರೋಪ

ಸಾರಾಂಶ

ಇಪ್ಪತ್ತು ವರ್ಷದ ಯುವತಿಯೊಬ್ಬಳು ತನ್ನ ಪತಿಯೂ ಆದ ಡಿಎಂಕೆ ಯುವ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾಳೆ. ಯುವತಿಯರನ್ನು ರಾಜಕಾರಣಿಗಳಿಗೆ ಪೂರೈಸುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಚೆನ್ನೈ: ಇಪ್ಪತ್ತು ವರ್ಷದ ಯುವತಿಯೊಬ್ಬಳು ತನ್ನ ಪತಿಯೂ ಆದ ಡಿಎಂಕೆ ಯುವ ಮುಖಂಡ ಸೇವಸೇಯಲ್‌ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಇದು ತಮಿಳುನಾಡು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಡಿಎಂಕೆ ಯುವ ಮುಖಂಡನೂ ಆಗಿರುವ ತನ್ನ ಗಂಡ 20 ವರ್ಷದ ಯುವತಿಯರನ್ನು ರಾಜಕಾರಣಿಗಳಿಗೆ ಪೂರೈಸುತ್ತಾನೆ. ಇದಕ್ಕೆ ಸಹಕರಿಸದಿದ್ದರೆ ತನ್ನ ಮೇಲೆ ಮೃಗೀಯ ವರ್ತನೆ ತೋರುತ್ತಾನೆ ಎಂದು ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.

ಆರಕ್ಕೋಣಂ ಜಿಲ್ಲೆಯ ಕಾಲೇಜಿಗೆ ಹೋಗುತ್ತಿರುವ ಈ ಯುವತಿಯ ಆರೋಪ ಇದೀಗ ತಮಿಳುನಾಡು ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈಕೆಯ ಆರೋಪ ಮುಂದಿಟ್ಟುಕೊಂಡು ಆಡಳಿತಾರೂಢ ಡಿಎಂಕೆ ವಿರುದ್ಧ ಪ್ರತಿಪಕ್ಷ ಎಐಎಂಡಿಎಂಕೆ ತೀವ್ರ ಆಕ್ರೋಶ ಹೊರಹಾಕಿದೆ.

ಯುವತಿ ಆರೋಪ ಏನು?:
ತನ್ನ ಪತಿ ದೈವಸೆಯಾಳ್‌ ಡಿಎಂಕೆ ಯುವಘಟಕದ ಉಪ ಕಾರ್ಯದರ್ಶಿಯಾಗಿದ್ದು, ಆತನಿಗೆ 20 ವರ್ಷದ ಯುವತಿಯರನ್ನು ರಾಜಕಾರಣಿಗಳಿಗೆ ಪೂರೈಸುವುದೇ ಕೆಲಸ. ಈವರೆಗೆ ಆತನ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ನಾನು ದೂರು ನೀಡಲು ಮುಂದಾದಾಗ ಹತ್ಯೆ ಬೆದರಿಕೆ ಹಾಕಿದ್ದಾನೆ. ಕಾರಿನಲ್ಲೇ ಹಲ್ಲೆ ನಡೆಸಿದ್ದಾನೆ, ತಾನು ಸೂಚಿಸಿದ ವ್ಯಕ್ತಿಯೊಂದಿಗೆ ಮಲಗುವಂತೆ ಕಿರುಕುಳ ಕೊಡುತ್ತಾನೆ, ನಾನು ಮನೆಬಿಟ್ಟು ಹೊರಬಾರಲಾಗದ, ಪರೀಕ್ಷೆಯನ್ನೂ ಬರೆಯಲಾಗದ ಸ್ಥಿತಿ ಇದೆ. ಒಂದು ವೇಳೆ ಈ ಕುರಿತು ಹೊರಗೆ ಬಾಯ್ಬಿಟ್ಟರೆ ತನ್ನ ಕುಟುಂಬವನ್ನು ಸುಟ್ಟುಹಾಕುವುದಾಗಿಯೂ ಬೆದರಿಕೆ ಹಾಕಿದ್ದಾನೆ. ನನ್ನ ಫೋನ್‌ ಅನ್ನೂ ಒಡೆದು ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಒಂದು ವೇಳೆ ನೀನು ದೂರುಕೊಟ್ಟರೂ ಏನೂ ಆಗುವುದಿಲ್ಲ. ಪೊಲೀಸರು ನನಗೇ ಬೆಂಬಲ ನೀಡಲಿದ್ದಾರೆ ಎಂದು ಹೇಳುತ್ತಾನೆ. ಆತನಿಗೆ ಶಿಕ್ಷಣ ಸಚಿವ ಅನ್ಬಿಲ್‌ ಮಹೇಶ್‌ ಪೊಯ್ಯಾಮೊಝಿ ಜತೆ ಲಿಂಕ್ ಇದೆ ಎಂದೂ ಆರೋಪಿಸಿದ್ದಾಳೆ. ಈತನ ವಿರುದ್ಧ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಯಾವುದೇ ಕ್ರಮ ಕೈಗೊಳ್ಳದೇ ಹೋದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ತಿಳಿಸಿದ್ದಾಳೆ.

ಇದನ್ನೂ ಓದಿ: ಸೆಕ್ಸ್‌ ಹಗರಣದಲ್ಲಿ ಸಿಕ್ಕಿಬಿದ್ದ ಟಾಪ್ 5 ಸ್ಟಾರ್ ಕ್ರಿಕೆಟಿಗರು..! ಇವರೇನು ಸಾಮಾನ್ಯ ಕ್ರಿಕೆಟಿಗರಲ್ಲ..!

ಎಐಎಡಿಎಂಕೆ ತೀವ್ರ ಆಕ್ರೋಶ
ಈ ಆರೋಪ ಮುಂದಿಟ್ಟುಕೊಂಡು ಪ್ರತಿಪಕ್ಷ ಎಐಎಡಿಎಂಕೆ ಪಕ್ಷವು ಸ್ಟಾಲಿನ್‌ ಸರ್ಕಾರ ವಿರುದ್ಧ ತೀವ್ರ ಕಿಡಿಕಾರಿದೆ. ‘ಪೊಲೀಸರು ಆರಂಭದಲ್ಲಿ ಆರೋಪಿ ರಕ್ಷಣೆಗೆ ಪೊಲೀಸರು ನಿಂತಿದ್ದರು. ಹಿಂದೆ ಎಐಎಡಿಎಂಕೆ ಸರ್ಕಾರ ಅಧಿಕಾರದಲ್ಲಿದ್ದಾಗ ನಡೆದ ಪೊಲ್ಲಾಚಿ ಸೆಕ್ಸ್‌ ಹಗರಣ ಕುರಿತು ಡಿಎಂಕೆ ನಾಯಕರು ಆಗಾಗ ಪ್ರಸ್ತಾಪಿಸುತ್ತಾರೆ. ಆಗ ನಾನು ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದೆ. ಆದರೆ ಸ್ಟಾಲಿನ್‌ ಮಾತ್ರ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ’ ಎಂದು ಎಐಎಡಿಎಂಕೆ ಮುಖಂಡ ಪಳನಿಸ್ವಾಮಿ ಕಿಡಿಕಾರಿದ್ದಾರೆ.

ಈ ನಡುವೆ ಡಿಎಂಕೆ ಮಾತ್ರ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳಲಿದ್ದಾರೆ. ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲಿದ್ದಾರೆ ಎಂದು ತಿಳಿಸಿದೆ.

ಡಿಎಂಕೆಯಿಂದ ನಾಯಕ ವಜಾ
ಸೆಕ್ಸ್‌ ಹಗರಣ ತಮಿಳ್ನಾಡು ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗುತ್ತಿದ್ದಂತೆಯೇ, ಹಗರಣದ ಆರೋಪ ಹೊತ್ತಿದ್ದ ಡಿಎಂಕೆ ಯುವ ವಿಭಾಗದ ಉಪ ಕಾರ್ಯದರ್ಶಿ ದೈವಸೇಯಲ್‌ನನ್ನು ಡಿಸಿಎಂ ಉದಯನಿಧಿ ಸ್ಟಾಲಿನ್‌ ಅವರು ಪಕ್ಷದಿಂದ ವಜಾ ಮಾಡಿದ್ದಾರೆ. ಆಡಳಿತಾರೂಢ ಡಿಎಂಕೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಪ್ರತಿಭಟನೆಗೆ ಕರೆ ನೀಡುವುದಾಗಿ ಎಐಎಡಿಎಂಕೆ ನಾಯಕರು ಹೇಳಿದ್ದರು. ಇದರ ಬೆನ್ನಲ್ಲೇ ಕ್ರಮ ಜರುಗಿಸಲಾಗಿದೆ.

ಇದನ್ನೂ ಓದಿ: Ajmer Blackmail Case: ಅತಿದೊಡ್ಡ ಬ್ಲ್ಯಾಕ್‌ಮೇಲ್‌ ಪ್ರಕರಣದಲ್ಲಿ 6 ಮಂದಿ ತಪ್ಪಿತಸ್ಥರು ಎಂದ ಕೋರ್ಟ್‌!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..
ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್