
ಚೆನ್ನೈ: ಕರ್ನಾಟಕ-ತಮಿಳುನಾಡು ರಾಜ್ಯಗಳನ್ನು ಇನ್ನಿಲ್ಲದಂತೆ ಕಾಡಿದ್ದ ಕಾಡುಗಳ್ಳ ವೀರಪ್ಪನ್ನನ್ನು ಗುಂಡಿಕ್ಕಿ ಕೊಂದ ‘ಎನ್ಕೌಂಟರ್ ಸ್ಪೆಷಲಿಸ್ಟ್’, ತಮಿಳುನಾಡಿನ ತಿರುವಣ್ಣಾಮಲೈ ಎಡಿಎಸ್ಪಿ ಎಸ್. ವೆಲ್ಲದುರೈ ಅವರು ಗುರುವಾರ ಸೇವಾ ನಿವೃತ್ತಿ ಹೊಂದಿದ್ದಾರೆ. ಆದರೆ ನಿವೃತ್ತಿ ದಿನವೇ ಅವರನ್ನು ಅಮಾನತು ಮಾಡಿ, ನಂತರ ವಿರೋಧದ ಕಾರಣ ಅಮಾನತು ರದ್ದು ಮಾಡಿದ ಘಟನೆ ನಡೆದಿದೆ.
ವೆಲ್ಲದುರೈ ಅವರು 2013ರಲ್ಲಿ ಲಾಕ್ ಅಪ್ ಡೆತ್ ಆರೋಪ ಹೊಂದಿದ್ದರು. ಈ ಕಾರಣ ನೀಡಿ ಅವರನ್ನು ನಿವೃತ್ತಿ ದಿನವೇ ಅಮಾನತು ಮಾಡಲಾಯಿತು. ಆದರೆ ಕೊನೆಗೆ ಪ್ರತಿರೋಧದ ಕಾರಣ ಅಮಾನತು ರದ್ದು ಮಾಡಲಾಯಿತು. ಆದಾಗ್ಯೂ ಅವರ ನಿವೃತ್ತಿ ಫಂಡ್ನಲ್ಲಿನ 5 ಲಕ್ಷ ರು.ಗಳನ್ನು ಕಡಿತ ಮಾಡಿ ಶಿಸ್ತುಕ್ರಮ ಕೈಗೊಳ್ಳುವ ನಿರ್ಧಾರ ಕೈಗೊಳ್ಳಲಾಯಿತು.
ಇಂಡಿಯಾ ಕೂಟಕ್ಕೆ 295 ಸ್ಥಾನ, ಅಧಿಕಾರ: ಮಲ್ಲಿಕಾರ್ಜುನ ಖರ್ಗೆ
ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವೆಲ್ಲದುರೈ, 2003ರಲ್ಲಿ ಹಿಸ್ಟರಿ ಶೀಟರ್ ವೀರಮಣಿ ಎಂಬಾತನನ್ನು ಚೆನ್ನೈನಲ್ಲಿ ಗುಂಡಿಕ್ಕಿ ಸಾಯಿಸಿ ಪ್ರವರ್ಧಮಾನಕ್ಕೆ ಬಂದಿದ್ದರು. ನಂತರ 2004ರಲ್ಲಿ ವೆಲ್ಲದುರೈ ಗುಂಡಿಗೆ ವೀರಪ್ಪನ್ ಬಲಿಯಾಗಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ